HomeUncategorizedಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

- Advertisement -
- Advertisement -

ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಫತೇಹ್‌ಪುರ್ ಬಂಗೈ ಗ್ರಾಮದಲ್ಲಿರುವ 65 ವರ್ಷಗಳ ಹಳೆಯ ಇಸ್ಲಾಮಿಯಾ ಅರೇಬಿಯಾ ಅನ್ವರುಲ್ ಉಲೂಮ್ ಮದರಸಾವನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ. ಈ ಕುರಿತು ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ (ಜೂನ್ 19) ಸ್ಥಳೀಯ ತಹಸೀಲ್ದಾರ್ ಜಮುನ್ಹಾ ಅವರ ಆದೇಶದ ಮೇರೆಗೆ ಈ ಮದರಸಾದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದೆ. ‘ಮದರಸಾವನ್ನು ಗ್ರಾಮಸಭಾ ಭೂಮಿಯಲ್ಲಿ  ಅನುಮತಿಯಿಲ್ಲದೆ ಕಟ್ಟಲಾಗಿತ್ತು. ಈ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ. ಇದಕ್ಕೂ ಮೊದಲು ಮದರಸಾ ಸಂಸ್ಥೆಗೆ ಅನೇಕ ನೋಟಿಸ್‌ಗಳನ್ನು ನೀಡಲಾಗಿದೆ’ ಎಂದು ತಹಸೀಲ್ದಾರ್ ಹೇಳಿದರು.

ಸ್ಥಳೀಯ ಗ್ರಾಮಸ್ಥರು ಮತ್ತು ಮುಸ್ಲಿಂ ಮುಖಂಡರು ತಹಶೀಲ್ದಾರ್ ಅವರ ಈ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.  “ಈ ಮದರಸಾ ಆರು ದಶಕಗಳಿಂದ ನಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಹೇಳುತ್ತಾರೆ.

ಶ್ರಾವಸ್ತಿಯಲ್ಲಿರುವ 297 ಮದರಸಾಗಳಲ್ಲಿ ಕೇವಲ 105 ಮಾತ್ರ ಉತ್ತರಪ್ರದೇಶ ಮದರಸಾ ಮಂಡಳಿಯಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿವೆ. ಉಳಿದವುಗಳನ್ನು ಅಕ್ರಮ ಎಂದು ಸರಕಾರವು ಹಣೆಪಟ್ಟಿ ಹಚ್ಚಿ ಅವುಗಳನ್ನು ನೆಲಸಮಗೊಳಿಸುತ್ತಿದೆ.

ಈ 65 ವರ್ಷಗಳ ಹಳೆಯ ಮದರಸಾದ ಕೆಡವಿದ ದಿನವೇ, ಹರ್ದತ್ತ್ ನಗರ ಗಿರಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಂಪುರ್ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಇನ್ನೂ ಎರಡು ಮದರಸಾಗಳನ್ನು ನೆಲಸಮಗೊಳಿಸಲಾಗಿದೆ.

ಅದು ಯಾರೇ ಭಾಗಿಯಾಗಿರಲಿ, ಸರ್ಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ಸಹಿಸಲಾಗುವುದಿಲ್ಲ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

 ಸರ್ಕಾರದ ಈ ಬುಲ್ಡೋಜರ್ ನೀತಿಯು ಮುಸ್ಲಿಂ ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಮದರಸಾಗಳು ಕಲಿಕೆ ಮತ್ತು ಶಾಂತಿಯ ಕೇಂದ್ರಗಳಾಗಿವೆ ಎಂದು ಶ್ರಾವಸ್ತಿಯ ಧಾರ್ಮಿಕ ವಿದ್ವಾಂಸ ಮೌಲಾನಾ ಇಮ್ರಾನ್ ಖುರೇಶಿ ಹೇಳಿದರು.

ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಸೀದಿಗಳು, ಮದರಸಾಗಳು, ಈದ್ಗಾಗಳು ಮತ್ತು ಸ್ಮಶಾನಗಳನ್ನು ವ್ಯಾಪಕವಾಗಿ ಗುರಿಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ ಒತ್ತಡದಲ್ಲಿ ಶತಮಾನಗಳಷ್ಟು ಹಳೆಯ ಮದರಸಾಗಳನ್ನು ಬುಲ್ಡೋಜರ್‌ನಿಂದ ಕೆಡವುದು ನಮ್ಮ ಗುರುತಿನ ಮೇಲೆ ನಡೆಸಿದ ದಾಳಿಯಾಗಿದೆ ಎಂದು ಸಮುದಾಯದ ನಾಯಕ ರಹೀಮ್ ಖಾನ್ ಅವರು ಕಳವಳ ವ್ಯಕ್ತಪಡಿಸಿದರು.

ನಾನು ಕಾನೂನು ಮತ್ತು ಸುವ್ಯವಸ್ಥೆಯನ್ನು ವಿರೋಧಿಸುವುದಿಲ್ಲ. ಆದರೆ ಏಕೆ ಕೇವಲ ಮುಸ್ಲಿಂ ಸಂಸ್ಥೆಗಳನ್ನು ಮಾತ್ರ ಗುರಿಪಡಿಸಲಾಗುತ್ತಿದೆ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಾನ್ ಅಹ್ಮದ್ ಪ್ರಶ್ನಿಸಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಮದರಸಾಗಳ ಕುರಿತ ತನಿಖೆಗಳು ಮುಂದುವರಿಯುತ್ತಿವೆ. ಸಮುದಾಯವು ಇಂತಹ ನೆಲಸಮ ಕಾರ್ಯಾಚರಣೆಯ ಬದಲು ನ್ಯಾಯಕ್ಕಾಗಿ ಆಶಿಸುತ್ತಿದೆ. ನಮಗೆ ಶಾಂತಿ, ಗೌರವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹಕ್ಕು ಬೇಕು ಎಂದು ಅಬ್ದುಲ್ ರಶೀದ್ ಹೇಳಿದರು.

ಇನ್ನು ಮುಂದೆ ನೆಲಸಮಗೊಳಿಸಬೇಕೆಂದು ಗುರುತಿಸಲ್ಪಟ್ಟ ಮದರಸಾಗಳನ್ನು ರಕ್ಷಿಸಲು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲು ಯೋಜಿಸಿವೆ.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...