HomeUncategorizedಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

- Advertisement -
- Advertisement -

ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಫತೇಹ್‌ಪುರ್ ಬಂಗೈ ಗ್ರಾಮದಲ್ಲಿರುವ 65 ವರ್ಷಗಳ ಹಳೆಯ ಇಸ್ಲಾಮಿಯಾ ಅರೇಬಿಯಾ ಅನ್ವರುಲ್ ಉಲೂಮ್ ಮದರಸಾವನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ. ಈ ಕುರಿತು ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ (ಜೂನ್ 19) ಸ್ಥಳೀಯ ತಹಸೀಲ್ದಾರ್ ಜಮುನ್ಹಾ ಅವರ ಆದೇಶದ ಮೇರೆಗೆ ಈ ಮದರಸಾದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದೆ. ‘ಮದರಸಾವನ್ನು ಗ್ರಾಮಸಭಾ ಭೂಮಿಯಲ್ಲಿ  ಅನುಮತಿಯಿಲ್ಲದೆ ಕಟ್ಟಲಾಗಿತ್ತು. ಈ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ. ಇದಕ್ಕೂ ಮೊದಲು ಮದರಸಾ ಸಂಸ್ಥೆಗೆ ಅನೇಕ ನೋಟಿಸ್‌ಗಳನ್ನು ನೀಡಲಾಗಿದೆ’ ಎಂದು ತಹಸೀಲ್ದಾರ್ ಹೇಳಿದರು.

ಸ್ಥಳೀಯ ಗ್ರಾಮಸ್ಥರು ಮತ್ತು ಮುಸ್ಲಿಂ ಮುಖಂಡರು ತಹಶೀಲ್ದಾರ್ ಅವರ ಈ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.  “ಈ ಮದರಸಾ ಆರು ದಶಕಗಳಿಂದ ನಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಹೇಳುತ್ತಾರೆ.

ಶ್ರಾವಸ್ತಿಯಲ್ಲಿರುವ 297 ಮದರಸಾಗಳಲ್ಲಿ ಕೇವಲ 105 ಮಾತ್ರ ಉತ್ತರಪ್ರದೇಶ ಮದರಸಾ ಮಂಡಳಿಯಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿವೆ. ಉಳಿದವುಗಳನ್ನು ಅಕ್ರಮ ಎಂದು ಸರಕಾರವು ಹಣೆಪಟ್ಟಿ ಹಚ್ಚಿ ಅವುಗಳನ್ನು ನೆಲಸಮಗೊಳಿಸುತ್ತಿದೆ.

ಈ 65 ವರ್ಷಗಳ ಹಳೆಯ ಮದರಸಾದ ಕೆಡವಿದ ದಿನವೇ, ಹರ್ದತ್ತ್ ನಗರ ಗಿರಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಂಪುರ್ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಇನ್ನೂ ಎರಡು ಮದರಸಾಗಳನ್ನು ನೆಲಸಮಗೊಳಿಸಲಾಗಿದೆ.

ಅದು ಯಾರೇ ಭಾಗಿಯಾಗಿರಲಿ, ಸರ್ಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ಸಹಿಸಲಾಗುವುದಿಲ್ಲ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

 ಸರ್ಕಾರದ ಈ ಬುಲ್ಡೋಜರ್ ನೀತಿಯು ಮುಸ್ಲಿಂ ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಮದರಸಾಗಳು ಕಲಿಕೆ ಮತ್ತು ಶಾಂತಿಯ ಕೇಂದ್ರಗಳಾಗಿವೆ ಎಂದು ಶ್ರಾವಸ್ತಿಯ ಧಾರ್ಮಿಕ ವಿದ್ವಾಂಸ ಮೌಲಾನಾ ಇಮ್ರಾನ್ ಖುರೇಶಿ ಹೇಳಿದರು.

ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಸೀದಿಗಳು, ಮದರಸಾಗಳು, ಈದ್ಗಾಗಳು ಮತ್ತು ಸ್ಮಶಾನಗಳನ್ನು ವ್ಯಾಪಕವಾಗಿ ಗುರಿಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ ಒತ್ತಡದಲ್ಲಿ ಶತಮಾನಗಳಷ್ಟು ಹಳೆಯ ಮದರಸಾಗಳನ್ನು ಬುಲ್ಡೋಜರ್‌ನಿಂದ ಕೆಡವುದು ನಮ್ಮ ಗುರುತಿನ ಮೇಲೆ ನಡೆಸಿದ ದಾಳಿಯಾಗಿದೆ ಎಂದು ಸಮುದಾಯದ ನಾಯಕ ರಹೀಮ್ ಖಾನ್ ಅವರು ಕಳವಳ ವ್ಯಕ್ತಪಡಿಸಿದರು.

ನಾನು ಕಾನೂನು ಮತ್ತು ಸುವ್ಯವಸ್ಥೆಯನ್ನು ವಿರೋಧಿಸುವುದಿಲ್ಲ. ಆದರೆ ಏಕೆ ಕೇವಲ ಮುಸ್ಲಿಂ ಸಂಸ್ಥೆಗಳನ್ನು ಮಾತ್ರ ಗುರಿಪಡಿಸಲಾಗುತ್ತಿದೆ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಾನ್ ಅಹ್ಮದ್ ಪ್ರಶ್ನಿಸಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಮದರಸಾಗಳ ಕುರಿತ ತನಿಖೆಗಳು ಮುಂದುವರಿಯುತ್ತಿವೆ. ಸಮುದಾಯವು ಇಂತಹ ನೆಲಸಮ ಕಾರ್ಯಾಚರಣೆಯ ಬದಲು ನ್ಯಾಯಕ್ಕಾಗಿ ಆಶಿಸುತ್ತಿದೆ. ನಮಗೆ ಶಾಂತಿ, ಗೌರವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹಕ್ಕು ಬೇಕು ಎಂದು ಅಬ್ದುಲ್ ರಶೀದ್ ಹೇಳಿದರು.

ಇನ್ನು ಮುಂದೆ ನೆಲಸಮಗೊಳಿಸಬೇಕೆಂದು ಗುರುತಿಸಲ್ಪಟ್ಟ ಮದರಸಾಗಳನ್ನು ರಕ್ಷಿಸಲು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲು ಯೋಜಿಸಿವೆ.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...