HomeUncategorizedಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

- Advertisement -
- Advertisement -

ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಫತೇಹ್‌ಪುರ್ ಬಂಗೈ ಗ್ರಾಮದಲ್ಲಿರುವ 65 ವರ್ಷಗಳ ಹಳೆಯ ಇಸ್ಲಾಮಿಯಾ ಅರೇಬಿಯಾ ಅನ್ವರುಲ್ ಉಲೂಮ್ ಮದರಸಾವನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ. ಈ ಕುರಿತು ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ (ಜೂನ್ 19) ಸ್ಥಳೀಯ ತಹಸೀಲ್ದಾರ್ ಜಮುನ್ಹಾ ಅವರ ಆದೇಶದ ಮೇರೆಗೆ ಈ ಮದರಸಾದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದೆ. ‘ಮದರಸಾವನ್ನು ಗ್ರಾಮಸಭಾ ಭೂಮಿಯಲ್ಲಿ  ಅನುಮತಿಯಿಲ್ಲದೆ ಕಟ್ಟಲಾಗಿತ್ತು. ಈ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ. ಇದಕ್ಕೂ ಮೊದಲು ಮದರಸಾ ಸಂಸ್ಥೆಗೆ ಅನೇಕ ನೋಟಿಸ್‌ಗಳನ್ನು ನೀಡಲಾಗಿದೆ’ ಎಂದು ತಹಸೀಲ್ದಾರ್ ಹೇಳಿದರು.

ಸ್ಥಳೀಯ ಗ್ರಾಮಸ್ಥರು ಮತ್ತು ಮುಸ್ಲಿಂ ಮುಖಂಡರು ತಹಶೀಲ್ದಾರ್ ಅವರ ಈ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.  “ಈ ಮದರಸಾ ಆರು ದಶಕಗಳಿಂದ ನಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಹೇಳುತ್ತಾರೆ.

ಶ್ರಾವಸ್ತಿಯಲ್ಲಿರುವ 297 ಮದರಸಾಗಳಲ್ಲಿ ಕೇವಲ 105 ಮಾತ್ರ ಉತ್ತರಪ್ರದೇಶ ಮದರಸಾ ಮಂಡಳಿಯಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿವೆ. ಉಳಿದವುಗಳನ್ನು ಅಕ್ರಮ ಎಂದು ಸರಕಾರವು ಹಣೆಪಟ್ಟಿ ಹಚ್ಚಿ ಅವುಗಳನ್ನು ನೆಲಸಮಗೊಳಿಸುತ್ತಿದೆ.

ಈ 65 ವರ್ಷಗಳ ಹಳೆಯ ಮದರಸಾದ ಕೆಡವಿದ ದಿನವೇ, ಹರ್ದತ್ತ್ ನಗರ ಗಿರಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಂಪುರ್ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಇನ್ನೂ ಎರಡು ಮದರಸಾಗಳನ್ನು ನೆಲಸಮಗೊಳಿಸಲಾಗಿದೆ.

ಅದು ಯಾರೇ ಭಾಗಿಯಾಗಿರಲಿ, ಸರ್ಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ಸಹಿಸಲಾಗುವುದಿಲ್ಲ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

 ಸರ್ಕಾರದ ಈ ಬುಲ್ಡೋಜರ್ ನೀತಿಯು ಮುಸ್ಲಿಂ ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಮದರಸಾಗಳು ಕಲಿಕೆ ಮತ್ತು ಶಾಂತಿಯ ಕೇಂದ್ರಗಳಾಗಿವೆ ಎಂದು ಶ್ರಾವಸ್ತಿಯ ಧಾರ್ಮಿಕ ವಿದ್ವಾಂಸ ಮೌಲಾನಾ ಇಮ್ರಾನ್ ಖುರೇಶಿ ಹೇಳಿದರು.

ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಸೀದಿಗಳು, ಮದರಸಾಗಳು, ಈದ್ಗಾಗಳು ಮತ್ತು ಸ್ಮಶಾನಗಳನ್ನು ವ್ಯಾಪಕವಾಗಿ ಗುರಿಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ ಒತ್ತಡದಲ್ಲಿ ಶತಮಾನಗಳಷ್ಟು ಹಳೆಯ ಮದರಸಾಗಳನ್ನು ಬುಲ್ಡೋಜರ್‌ನಿಂದ ಕೆಡವುದು ನಮ್ಮ ಗುರುತಿನ ಮೇಲೆ ನಡೆಸಿದ ದಾಳಿಯಾಗಿದೆ ಎಂದು ಸಮುದಾಯದ ನಾಯಕ ರಹೀಮ್ ಖಾನ್ ಅವರು ಕಳವಳ ವ್ಯಕ್ತಪಡಿಸಿದರು.

ನಾನು ಕಾನೂನು ಮತ್ತು ಸುವ್ಯವಸ್ಥೆಯನ್ನು ವಿರೋಧಿಸುವುದಿಲ್ಲ. ಆದರೆ ಏಕೆ ಕೇವಲ ಮುಸ್ಲಿಂ ಸಂಸ್ಥೆಗಳನ್ನು ಮಾತ್ರ ಗುರಿಪಡಿಸಲಾಗುತ್ತಿದೆ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಾನ್ ಅಹ್ಮದ್ ಪ್ರಶ್ನಿಸಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಮದರಸಾಗಳ ಕುರಿತ ತನಿಖೆಗಳು ಮುಂದುವರಿಯುತ್ತಿವೆ. ಸಮುದಾಯವು ಇಂತಹ ನೆಲಸಮ ಕಾರ್ಯಾಚರಣೆಯ ಬದಲು ನ್ಯಾಯಕ್ಕಾಗಿ ಆಶಿಸುತ್ತಿದೆ. ನಮಗೆ ಶಾಂತಿ, ಗೌರವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹಕ್ಕು ಬೇಕು ಎಂದು ಅಬ್ದುಲ್ ರಶೀದ್ ಹೇಳಿದರು.

ಇನ್ನು ಮುಂದೆ ನೆಲಸಮಗೊಳಿಸಬೇಕೆಂದು ಗುರುತಿಸಲ್ಪಟ್ಟ ಮದರಸಾಗಳನ್ನು ರಕ್ಷಿಸಲು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲು ಯೋಜಿಸಿವೆ.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...