Homeಮುಖಪುಟಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

- Advertisement -
- Advertisement -

ಶಿಕ್ಷಕನೊಬ್ಬ ಕೋಲಿನಿಂದ ಹೊಡೆದ ಕಾರಣ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.

ಶಿಕ್ಷಕನಿಂದ ಥಳಿತಕ್ಕೆ ಒಳಗಾಗಿದ್ದ ಆದಿತ್ಯ ಕುಶ್ವಾಹ ಎಂಬ ಮಗುವಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತಾದರೂ ಕಣ್ಣು ಚೇತರಿಸಿಕೊಂಡಿರಲಿಲ್ಲ. ಇದೀಗ ಆತನ ತಾಯಿ ನ್ಯಾಯಕ್ಕಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೊರೆ ಹೋಗಿದ್ದಾಳೆ. ಶಿಕ್ಷಕ ಶೈಲೇಂದ್ರ ತಿವಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಾರ್ಚ್ 9 ರಂದು ನಡೆದ ಘಟನೆಯನ್ನು ವಿವರಿಸಿದ ಮಗು, ಹೊರಗೆ ಆಡುತ್ತಿರುವ ಕೆಲವು ವಿದ್ಯಾರ್ಥಿಗಳನ್ನು ಕರೆಯಲು ಶಿಕ್ಷಕರು ಕೇಳಿದರು, ಅವರನ್ನು ಎಷ್ಟೇ ಕರೆದರೂ ಬರಲಿಲ್ಲ, ಈ ಬಗ್ಗೆ ಶಿಕ್ಷಕರಿಗೆ ತಿಳಿಸಿದೆ. ಅವರು ಸಿಟ್ಟಿಗೆದ್ದು ದೊಣ್ಣೆಯಿಂದ ಹೊಡೆದು, ನೋವಾದ ಮೇಲೆ ಟ್ರೀಟ್ ಮೆಂಟ್ ಗೆ ಕರೆದೊಯ್ದರು. ಐ ಡ್ರಾಪ್ಸ್ ಹಾಕಿ ಕ್ಲಾಸ್ ನಲ್ಲಿ ಮಲಗಿಸಿದರು. ನನ್ನ ಎಡಗಣ್ಣಿನಿಂದ ನೋಡಲಾಗುತ್ತಿಲ್ಲ ಎಂದು ಸಹಪಾಠಿಗಳು ನನ್ನ ತಾಯಿಗೆ ತಿಳಿಸಿದರು” ಎಂದು ಹೇಳಿದ್ದಾನೆ.

ಆದಿತ್ಯನ ತಾಯಿ ಶ್ರೀಮತಿ ಮಾತನಾಡಿ, ತನ್ನ ಮಗ ನೇವಾರಿ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯಾಗಿದ್ದಾನೆ. ಶಿಕ್ಷಕನು ಮಗನ ಮೇಲೆ ಕೋಲು ಎಸೆದಿದ್ದಾರೆ. ಅದು ಅವನ ಕಣ್ಣಿಗೆ ಹೊಡೆದು ರಕ್ತಸ್ರಾವವಾಯಿತು. ನಾವು ಪೊಲೀಸ್ ಠಾಣೆಗೆ ಹೋದೆವು. ಆದರೆ, ಅವರು ದೂರು ದಾಖಲಿಸಿಕೊಳ್ಳಲಿಲ್ಲ. ಶಿಕ್ಷಣ ಇಲಾಖೆಯು ಮಧ್ಯಪ್ರವೇಶಿಸಿದ ನಂತರ ವಿಷಯದ ಬಗ್ಗೆ ತನಿಖೆ ನಡೆಸಲಾಯಿತು” ಎಂದು ಅವರು ಹೇಳಿದರು.

ಏಪ್ರಿಲ್ 15 ರಂದು ಕಣ್ಣಿನ ಪರೀಕ್ಷೆಯು ಹಾನಿಯನ್ನು ಖಚಿತಪಡಿಸಿದೆ ಎಂದು ತಾಯಿ ಹೇಳಿದರು. ಮಗುವನ್ನು ಚಿತ್ರಕೂಟದ ಕಣ್ಣಿನ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಎರಡು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಆದರೆ, ಕಣ್ಣು ಉಳಿಸಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಈ ಮಧ್ಯೆ, ವಿಷಯವನ್ನು ಮುಚ್ಚಿಹಾಕಲು ಶಿಕ್ಷಕರು ಕುಟುಂಬಕ್ಕೆ ₹10 ಲಕ್ಷ ನೀಡಲು ಮುಂದಾಗಿದ್ದರು ಎನ್ನಲಾಗಿದ್ದು, ತಾಯಿಯು ಅದನ್ನು ನಿರಾಕರಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶದ ನಂತರ, ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದಕ್ಕೆ ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿ ಕಮಲೇಂದ್ರ ಕುಶ್ವಾಹ ಮಾತನಾಡಿ, ಸ್ಥಳೀಯ ಶಿಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಘಟನೆಯ ಬಗ್ಗೆ ಗಮನಹರಿಸಿದ್ದು, ವರದಿ ನೀಡುವಂತೆ ಬ್ಲಾಕ್ ಶಿಕ್ಷಣಾಧಿಕಾರಿಗೆ ತಿಳಿಸಲಾಗಿದ್ದು, ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ; ದಲಿತರ ಮೇಲಿನ ದೌರ್ಜನ್ಯ ಪ್ರಕರಣ; ಅಗ್ರಸ್ಥಾನದಲ್ಲಿ ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...