Homeಮುಖಪುಟಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕನೊಬ್ಬ ಆಹಾರ ಮತ್ತು ಔಷಧಕ್ಕಾಗಿ ತನ್ನ ತಾಯಿ ಹಾಗೂ ಹೆಂಡತಿಯ ಮಾಂಗಲ್ಯ ಮಾರಿದ ಘಟನೆ ಉತ್ತರ ಪ್ರದೇಶದ ಖನೌ‌ಜ್‌ನಲ್ಲಿ ನಡೆದಿದೆ.

ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಖನೌಜ್‌ನ ಫತೇಪುರ್ ಜಶೋಧ ಎಂಬ ಗ್ರಾಮದ ಶ್ರೀ ರಾಮ್ ತಮಿಳುನಾಡಿಗೆ ವಲಸೆ ಹೋಗಿ ಕಡಲೂರು ಎಂಬ ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕುಲ್ಪೀ ಐಸ್ ಮಾರಾಟ ಮಾಡಿ ಬದುಕುತ್ತಿದ್ದರು.

ಕುಟುಂಬದ ಸದಸ್ಯರು ತಮಿಳುನಾಡಿನ ಓರ್ವ ಜಮೀನುದಾರನ ಬಳಿ ಕೃಷಿ ಕೂಲಿಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ಕುಟುಂಬ ಸಮೇತರಾಗಿ ಉತ್ತರಪ್ರದೇಶಕ್ಕೆ ಮರಳಿದ್ದ ಈ ಕುಟುಂಬ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀ ರಾಮ್ ಕನೌಜಿನ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಹೆಂಡತಿ ಮತ್ತು ತಾಯಿಯ ಮಾಂಗಲ್ಯವನ್ನು ಕೇವಲ 1,500 ರೂ ಗೆ ಮಾರಾಟ ಮಾಡಿ ಮನೆಗೆ ಆಹಾರ ಧಾನ್ಯ ಮತ್ತು ಔಷಧಿಯನ್ನು ಖರೀದಿಸಿದ್ದಾರೆ.

ತಮಿಳುನಾಡಿನಿಂದ ಊರಿಗೆ ಮರಳಿರುವ ಅವರ ಕುಟುಂಬದ ಬಳಿ ಪಡಿತರ ಚೀಟಿ, ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಕೆಲಸ ಮಾಡಲು ಜಾಬ್ ಕಾರ್ಡ್ ಸಹ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಶ್ರೀರಾಮ್ ಆಹಾರಕ್ಕಾಗಿ ತನ್ನ ತಾಯಿ ಮತ್ತು ಹೆಂಡತಿಯ ಮಾಂಗಲ್ಯ ಮಾರಾಟ ಮಾಡಲು ಮುಂದಾಗಿದ್ದಾರೆ.

ತನ್ನ ಅಸಹಾಯಕತೆಯ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡ ಶ್ರೀ ರಾಮ್, “ನಾವು ತಮಿಳುನಾಡಿನಿಂದ ಹಿಂದಿರುಗಿದಾಗ ಸರ್ಕಾರದಿಂದ ತಲಾ 10 ಕೆಜಿ ಅಕ್ಕಿ ಮತ್ತು ಧಾನ್ಯವನ್ನು ಪಡೆದುಕೊಂಡಿದ್ದೇವೆ. ಆದರೆ ನಾವು ಒಂದು ದೊಡ್ಡ ಕುಟುಂಬವಾದ್ದರಿಂದ ಈ ಧಾನ್ಯ ನಮಗೆ ಸಾಕಾಗಿರಲಿಲ್ಲ. ಅಲ್ಲದೆ, ಪಡಿತರ ಚೀಟಿಯೂ ಇಲ್ಲದ ಕಾರಣ ನಾವು ಪಡಿತರ ವ್ಯವಸ್ಥೆಯಿಂದಲೇ ಹೊರಗುಳಿದಿದ್ದೇವೆ” ಎಂದು ಹೇಳುತ್ತಾರೆ.

ಈ ನಡುವೆ ನನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರು ಅನಾರೋಗ್ಯಕ್ಕೆ ಒಳಗಾದರು. ನನ್ನ ತಂದೆ ಕೆಲಸ ಪಡೆಯಲು ಪ್ರಯತ್ನಿಸಿದರು ಆದರೆ ಎಲ್ಲೂ ಉದ್ಯೋಗವಿಲ್ಲ. ಅಂತಿಮವಾಗಿ, ನನ್ನ ತಾಯಿ ಮತ್ತು ಹೆಂಡತಿ ಧರಿಸುತ್ತಿದ್ದ ಆಭರಣಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಈ ಹಣ ಸಹ ಕೆಲವು ದಿನಗಳ ಆಹಾರ ಮತ್ತು ಔಷಧಕ್ಕೆ ಮಾತ್ರ ಸಾಲುತ್ತದೆ. ಹೊಸ ಪಡಿತರ ಚೀಟಿಗೆ ನಾವು ಮನವಿ ಸಲ್ಲಿಸಿದರೆ, ಈಗ ಪಡಿತರ ಚೀಟಿ ನೀಡಲಾಗುವುದಿಲ್ಲ ಎನ್ನುತ್ತಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಸ್ಥಳೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಈ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ಅನ್ನು ನೀಡಿದೆ.

ಆದರೆ ಜಾಲತಾಣಿಗರು, ಇದು ಕೇವಲ ಶ್ರೀರಾಮ್‌ ಎಂಬ ಓರ್ವ ವಲಸೆ ಕಾರ್ಮಿಕನ ಕಥೆಯಲ್ಲ. ಬದಲಾಗಿ ಭಾರತದಾದ್ಯಂತ ಇರುವ ಇಂತಹ ಲಕ್ಷಾಂತರ ಶ್ರೀರಾಮ್‌ಗಳು ಲಾಕ್‌ಡೌನ್ ಕಾರಣದಿಂದಾಗಿ ತುತ್ತು ಅನ್ನಕ್ಕಾಗಿ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ.


ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...