Homeಮುಖಪುಟಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕನೊಬ್ಬ ಆಹಾರ ಮತ್ತು ಔಷಧಕ್ಕಾಗಿ ತನ್ನ ತಾಯಿ ಹಾಗೂ ಹೆಂಡತಿಯ ಮಾಂಗಲ್ಯ ಮಾರಿದ ಘಟನೆ ಉತ್ತರ ಪ್ರದೇಶದ ಖನೌ‌ಜ್‌ನಲ್ಲಿ ನಡೆದಿದೆ.

ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಖನೌಜ್‌ನ ಫತೇಪುರ್ ಜಶೋಧ ಎಂಬ ಗ್ರಾಮದ ಶ್ರೀ ರಾಮ್ ತಮಿಳುನಾಡಿಗೆ ವಲಸೆ ಹೋಗಿ ಕಡಲೂರು ಎಂಬ ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕುಲ್ಪೀ ಐಸ್ ಮಾರಾಟ ಮಾಡಿ ಬದುಕುತ್ತಿದ್ದರು.

ಕುಟುಂಬದ ಸದಸ್ಯರು ತಮಿಳುನಾಡಿನ ಓರ್ವ ಜಮೀನುದಾರನ ಬಳಿ ಕೃಷಿ ಕೂಲಿಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ಕುಟುಂಬ ಸಮೇತರಾಗಿ ಉತ್ತರಪ್ರದೇಶಕ್ಕೆ ಮರಳಿದ್ದ ಈ ಕುಟುಂಬ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀ ರಾಮ್ ಕನೌಜಿನ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಹೆಂಡತಿ ಮತ್ತು ತಾಯಿಯ ಮಾಂಗಲ್ಯವನ್ನು ಕೇವಲ 1,500 ರೂ ಗೆ ಮಾರಾಟ ಮಾಡಿ ಮನೆಗೆ ಆಹಾರ ಧಾನ್ಯ ಮತ್ತು ಔಷಧಿಯನ್ನು ಖರೀದಿಸಿದ್ದಾರೆ.

ತಮಿಳುನಾಡಿನಿಂದ ಊರಿಗೆ ಮರಳಿರುವ ಅವರ ಕುಟುಂಬದ ಬಳಿ ಪಡಿತರ ಚೀಟಿ, ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಕೆಲಸ ಮಾಡಲು ಜಾಬ್ ಕಾರ್ಡ್ ಸಹ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಶ್ರೀರಾಮ್ ಆಹಾರಕ್ಕಾಗಿ ತನ್ನ ತಾಯಿ ಮತ್ತು ಹೆಂಡತಿಯ ಮಾಂಗಲ್ಯ ಮಾರಾಟ ಮಾಡಲು ಮುಂದಾಗಿದ್ದಾರೆ.

ತನ್ನ ಅಸಹಾಯಕತೆಯ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡ ಶ್ರೀ ರಾಮ್, “ನಾವು ತಮಿಳುನಾಡಿನಿಂದ ಹಿಂದಿರುಗಿದಾಗ ಸರ್ಕಾರದಿಂದ ತಲಾ 10 ಕೆಜಿ ಅಕ್ಕಿ ಮತ್ತು ಧಾನ್ಯವನ್ನು ಪಡೆದುಕೊಂಡಿದ್ದೇವೆ. ಆದರೆ ನಾವು ಒಂದು ದೊಡ್ಡ ಕುಟುಂಬವಾದ್ದರಿಂದ ಈ ಧಾನ್ಯ ನಮಗೆ ಸಾಕಾಗಿರಲಿಲ್ಲ. ಅಲ್ಲದೆ, ಪಡಿತರ ಚೀಟಿಯೂ ಇಲ್ಲದ ಕಾರಣ ನಾವು ಪಡಿತರ ವ್ಯವಸ್ಥೆಯಿಂದಲೇ ಹೊರಗುಳಿದಿದ್ದೇವೆ” ಎಂದು ಹೇಳುತ್ತಾರೆ.

ಈ ನಡುವೆ ನನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರು ಅನಾರೋಗ್ಯಕ್ಕೆ ಒಳಗಾದರು. ನನ್ನ ತಂದೆ ಕೆಲಸ ಪಡೆಯಲು ಪ್ರಯತ್ನಿಸಿದರು ಆದರೆ ಎಲ್ಲೂ ಉದ್ಯೋಗವಿಲ್ಲ. ಅಂತಿಮವಾಗಿ, ನನ್ನ ತಾಯಿ ಮತ್ತು ಹೆಂಡತಿ ಧರಿಸುತ್ತಿದ್ದ ಆಭರಣಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಈ ಹಣ ಸಹ ಕೆಲವು ದಿನಗಳ ಆಹಾರ ಮತ್ತು ಔಷಧಕ್ಕೆ ಮಾತ್ರ ಸಾಲುತ್ತದೆ. ಹೊಸ ಪಡಿತರ ಚೀಟಿಗೆ ನಾವು ಮನವಿ ಸಲ್ಲಿಸಿದರೆ, ಈಗ ಪಡಿತರ ಚೀಟಿ ನೀಡಲಾಗುವುದಿಲ್ಲ ಎನ್ನುತ್ತಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಸ್ಥಳೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಈ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ಅನ್ನು ನೀಡಿದೆ.

ಆದರೆ ಜಾಲತಾಣಿಗರು, ಇದು ಕೇವಲ ಶ್ರೀರಾಮ್‌ ಎಂಬ ಓರ್ವ ವಲಸೆ ಕಾರ್ಮಿಕನ ಕಥೆಯಲ್ಲ. ಬದಲಾಗಿ ಭಾರತದಾದ್ಯಂತ ಇರುವ ಇಂತಹ ಲಕ್ಷಾಂತರ ಶ್ರೀರಾಮ್‌ಗಳು ಲಾಕ್‌ಡೌನ್ ಕಾರಣದಿಂದಾಗಿ ತುತ್ತು ಅನ್ನಕ್ಕಾಗಿ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ.


ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...