Homeಮುಖಪುಟಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕನೊಬ್ಬ ಆಹಾರ ಮತ್ತು ಔಷಧಕ್ಕಾಗಿ ತನ್ನ ತಾಯಿ ಹಾಗೂ ಹೆಂಡತಿಯ ಮಾಂಗಲ್ಯ ಮಾರಿದ ಘಟನೆ ಉತ್ತರ ಪ್ರದೇಶದ ಖನೌ‌ಜ್‌ನಲ್ಲಿ ನಡೆದಿದೆ.

ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಖನೌಜ್‌ನ ಫತೇಪುರ್ ಜಶೋಧ ಎಂಬ ಗ್ರಾಮದ ಶ್ರೀ ರಾಮ್ ತಮಿಳುನಾಡಿಗೆ ವಲಸೆ ಹೋಗಿ ಕಡಲೂರು ಎಂಬ ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕುಲ್ಪೀ ಐಸ್ ಮಾರಾಟ ಮಾಡಿ ಬದುಕುತ್ತಿದ್ದರು.

ಕುಟುಂಬದ ಸದಸ್ಯರು ತಮಿಳುನಾಡಿನ ಓರ್ವ ಜಮೀನುದಾರನ ಬಳಿ ಕೃಷಿ ಕೂಲಿಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ಕುಟುಂಬ ಸಮೇತರಾಗಿ ಉತ್ತರಪ್ರದೇಶಕ್ಕೆ ಮರಳಿದ್ದ ಈ ಕುಟುಂಬ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀ ರಾಮ್ ಕನೌಜಿನ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಹೆಂಡತಿ ಮತ್ತು ತಾಯಿಯ ಮಾಂಗಲ್ಯವನ್ನು ಕೇವಲ 1,500 ರೂ ಗೆ ಮಾರಾಟ ಮಾಡಿ ಮನೆಗೆ ಆಹಾರ ಧಾನ್ಯ ಮತ್ತು ಔಷಧಿಯನ್ನು ಖರೀದಿಸಿದ್ದಾರೆ.

ತಮಿಳುನಾಡಿನಿಂದ ಊರಿಗೆ ಮರಳಿರುವ ಅವರ ಕುಟುಂಬದ ಬಳಿ ಪಡಿತರ ಚೀಟಿ, ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಕೆಲಸ ಮಾಡಲು ಜಾಬ್ ಕಾರ್ಡ್ ಸಹ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಶ್ರೀರಾಮ್ ಆಹಾರಕ್ಕಾಗಿ ತನ್ನ ತಾಯಿ ಮತ್ತು ಹೆಂಡತಿಯ ಮಾಂಗಲ್ಯ ಮಾರಾಟ ಮಾಡಲು ಮುಂದಾಗಿದ್ದಾರೆ.

ತನ್ನ ಅಸಹಾಯಕತೆಯ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡ ಶ್ರೀ ರಾಮ್, “ನಾವು ತಮಿಳುನಾಡಿನಿಂದ ಹಿಂದಿರುಗಿದಾಗ ಸರ್ಕಾರದಿಂದ ತಲಾ 10 ಕೆಜಿ ಅಕ್ಕಿ ಮತ್ತು ಧಾನ್ಯವನ್ನು ಪಡೆದುಕೊಂಡಿದ್ದೇವೆ. ಆದರೆ ನಾವು ಒಂದು ದೊಡ್ಡ ಕುಟುಂಬವಾದ್ದರಿಂದ ಈ ಧಾನ್ಯ ನಮಗೆ ಸಾಕಾಗಿರಲಿಲ್ಲ. ಅಲ್ಲದೆ, ಪಡಿತರ ಚೀಟಿಯೂ ಇಲ್ಲದ ಕಾರಣ ನಾವು ಪಡಿತರ ವ್ಯವಸ್ಥೆಯಿಂದಲೇ ಹೊರಗುಳಿದಿದ್ದೇವೆ” ಎಂದು ಹೇಳುತ್ತಾರೆ.

ಈ ನಡುವೆ ನನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರು ಅನಾರೋಗ್ಯಕ್ಕೆ ಒಳಗಾದರು. ನನ್ನ ತಂದೆ ಕೆಲಸ ಪಡೆಯಲು ಪ್ರಯತ್ನಿಸಿದರು ಆದರೆ ಎಲ್ಲೂ ಉದ್ಯೋಗವಿಲ್ಲ. ಅಂತಿಮವಾಗಿ, ನನ್ನ ತಾಯಿ ಮತ್ತು ಹೆಂಡತಿ ಧರಿಸುತ್ತಿದ್ದ ಆಭರಣಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಈ ಹಣ ಸಹ ಕೆಲವು ದಿನಗಳ ಆಹಾರ ಮತ್ತು ಔಷಧಕ್ಕೆ ಮಾತ್ರ ಸಾಲುತ್ತದೆ. ಹೊಸ ಪಡಿತರ ಚೀಟಿಗೆ ನಾವು ಮನವಿ ಸಲ್ಲಿಸಿದರೆ, ಈಗ ಪಡಿತರ ಚೀಟಿ ನೀಡಲಾಗುವುದಿಲ್ಲ ಎನ್ನುತ್ತಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಸ್ಥಳೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಈ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ಅನ್ನು ನೀಡಿದೆ.

ಆದರೆ ಜಾಲತಾಣಿಗರು, ಇದು ಕೇವಲ ಶ್ರೀರಾಮ್‌ ಎಂಬ ಓರ್ವ ವಲಸೆ ಕಾರ್ಮಿಕನ ಕಥೆಯಲ್ಲ. ಬದಲಾಗಿ ಭಾರತದಾದ್ಯಂತ ಇರುವ ಇಂತಹ ಲಕ್ಷಾಂತರ ಶ್ರೀರಾಮ್‌ಗಳು ಲಾಕ್‌ಡೌನ್ ಕಾರಣದಿಂದಾಗಿ ತುತ್ತು ಅನ್ನಕ್ಕಾಗಿ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ.


ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...