Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ರಾಜಸ್ಥಾನದ ಘಟನೆ ಮಾಸುವ ಮುನ್ನವೆ ಯುಪಿಯಲ್ಲಿ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ

- Advertisement -
- Advertisement -

ರಾಜಸ್ತಾನದಲ್ಲಿ ಕೊಡವನ್ನು ಮುಟ್ಟಿ ನೀರು ಕುಡಿದ ಕಾರಣಕ್ಕೆ ಸವರ್ಣೀಯ ಶಿಕ್ಷಕನೊಬ್ಬ ದಲಿತ ಬಾಲಕನನ್ನು ಥಳಿಸಿ ಕೊಂದಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ ಜಾತಿ ದೌರ್ಜನ್ಯವೊಂದು ಉತ್ತರ ಪ್ರದೇಶದಲ್ಲಿ ತಡವಾಗಿ ವರದಿಯಾಗಿದೆ. ರಾಜ್ಯದ ಔರೈಯಾದ ಬಿದುನಾ ತಾಲೂಕಿನ ಪಿಪ್ರೌಲಿ ಶಿವ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಆಗಸ್ಟ್‌‌ 5 ರಂದು ದಲಿತ ವಿದ್ಯಾರ್ಥಿಯೊಬ್ಬರನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿ ಹಾಕಿ ಅಮಾನವಿಯವಾಗಿ ನಡೆಸಿಕೊಳ್ಳಲಾಗಿದೆ. ಮರುದಿನ ಶಾಲೆಗೆ ಬಂದ ಶಿಕ್ಷಕರು ಶೌಚಾಲಯದ ಬೀಗ ತೆಗೆದಾಗ ಬಾಲಕ ಹೊರಗೆ ಬಂದಿದ್ದಾರೆ. ಇದರ ನಂತರ ಮನೆಗೆ ತೆರಳಿರುವ ವಿದ್ಯಾರ್ಥಿಯು ಕುಟುಂಬಸ್ಥರ ಬಳಿ ಘಟನೆಯನ್ನು ವಿವರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂರ್ವ ದೂಜೆ ಗ್ರಾಮದ 11 ವರ್ಷದ ವಿದ್ಯಾರ್ಥಿಯು ಆಗಸ್ಟ್ 5ರಂದು ಶಾಲೆಗೆ ಹೋಗಿದ್ದರು. ಆದರೆ ಅಂದು ಅವರು ಶಾಲೆ ಬಿಟ್ಟರೂ ಮನೆಗೆ ಹಿಂದಿರುಗಲಿಲ್ಲ ಎಂದು ವಿದ್ಯಾರ್ಥಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾತ್ರಿಯಿಡಿ ಊರಿನಲ್ಲಿ ಮತ್ತು ಸಂಬಂಧಿಕರು, ಸ್ನೇಹಿತರನ್ನು ವಿಚಾರಿಸಿರೂ ಮಗನ ಬಗ್ಗೆ ಯಾವುದೇ ವಿಷಯ ತಿಳಿಯಲಿಲ್ಲ.

ಇದನ್ನೂ ಓದಿ: ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ಆಗಸ್ಟ್ 6 ರಂದು ಬೆಳಗ್ಗೆ 8 ಗಂಟೆಗೆ ಶಾಲೆಯ ಬಾಗಿಲು ತೆರೆಯಲು ಶಿಕ್ಷಕರು ಬಂದಾಗ ಕೊಠಡಿಗಳ ಜತೆಗೆ ಶೌಚಾಲಯದ ಬೀಗವನ್ನೂ ತೆರೆಯಲಾಗಿತ್ತು. ಈ ವೇಳೆ, ತಮ್ಮ ಮಗ ಶೌಚಾಲಯದಿಂದ ಹೊರಗೆ ಬಂದಿದ್ದಾರೆ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿದ್ದಾರೆ.

“ಶಾಲೆಗೆ ರಜೆ ಇದ್ದ ಕಾರಣ ನಾನು ಮನೆಗೆ ಬರುತ್ತಿದ್ದೆ. ಆಗ ಶಿಕ್ಷಕ ವಿಜಯ್ ಕುಶ್ವಾಹ ಅವರು ನನ್ನನ್ನು ತಡೆದು ಮಧ್ಯಾಹ್ನ 2 ಗಂಟೆಗೆ ಶೌಚಾಲಯಕ್ಕೆ ತಳ್ಳಿದರು ಮತ್ತು ಹೊರಗಿನಿಂದ ಬಾಗಿಲು ಮುಚ್ಚಿದರು. ಆ ಬಳಿಕ ಶೌಚಾಲಯಕ್ಕೂ ಬೀಗ ಹಾಕಲಾಗಿತ್ತು. ಎಲ್ಲರೂ ಹೊರಟು ಹೋಗಿದ್ದರು. ನಾನು ರಾತ್ರಿ ಸಹಾಯಕ್ಕಾಗಿ ಕಿರುಚುತ್ತಿದ್ದೆ” ಎಂದು ತಮ್ಮ ಮಗ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ಶಾಲೆಯ ಬಳಿ ಯಾವುದೇ ಮನೆ ಇಲ್ಲ. ಹೀಗಾಗಿ ಮಗನ ಧ್ವನಿ ಯಾರಿಗೂ ಕೇಳಿಸದೇ 18 ಗಂಟೆಗಳ ಕಾಲ ಶೌಚಗೃಹದಲ್ಲೇ ಉಳಿದಿಕೊಂಡಿದ್ದ” ಎಂದು ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ದಲಿತ ಮಕ್ಕಳೊಂದಿಗೆ ಶಿಕ್ಷಕರ ವರ್ತನೆ ಸರಿಯಿಲ್ಲ. ಶಾಲೆಯ ಎಲ್ಲಾ ದಲಿತ ಮಕ್ಕಳೊಂದಿಗೆ ಅವರು ಅನುಚಿತವಾಗಿ ವರ್ತಿಸುತ್ತಾರೆ. ಊಟದಲ್ಲಿ ಪಲ್ಯ ಬಡಿಸುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ” ಎಂದು ಸಂತ್ರಸ್ತ ಬಾಲಕ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನ ಸಾವಿನ ಹೊಣೆಹೊತ್ತು ಕಾಂಗ್ರೆಸ್ ಶಾಸಕನ ರಾಜೀನಾಮೆ

ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮದ ಜನರೊಂದಿಗೆ ಆಗಮಿಸಿದ ಸಂಬಂಧಿಕರು ಶಾಲೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಿಒ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...