Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ರಾಜಸ್ಥಾನದ ಘಟನೆ ಮಾಸುವ ಮುನ್ನವೆ ಯುಪಿಯಲ್ಲಿ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ

- Advertisement -
- Advertisement -

ರಾಜಸ್ತಾನದಲ್ಲಿ ಕೊಡವನ್ನು ಮುಟ್ಟಿ ನೀರು ಕುಡಿದ ಕಾರಣಕ್ಕೆ ಸವರ್ಣೀಯ ಶಿಕ್ಷಕನೊಬ್ಬ ದಲಿತ ಬಾಲಕನನ್ನು ಥಳಿಸಿ ಕೊಂದಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ ಜಾತಿ ದೌರ್ಜನ್ಯವೊಂದು ಉತ್ತರ ಪ್ರದೇಶದಲ್ಲಿ ತಡವಾಗಿ ವರದಿಯಾಗಿದೆ. ರಾಜ್ಯದ ಔರೈಯಾದ ಬಿದುನಾ ತಾಲೂಕಿನ ಪಿಪ್ರೌಲಿ ಶಿವ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಆಗಸ್ಟ್‌‌ 5 ರಂದು ದಲಿತ ವಿದ್ಯಾರ್ಥಿಯೊಬ್ಬರನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿ ಹಾಕಿ ಅಮಾನವಿಯವಾಗಿ ನಡೆಸಿಕೊಳ್ಳಲಾಗಿದೆ. ಮರುದಿನ ಶಾಲೆಗೆ ಬಂದ ಶಿಕ್ಷಕರು ಶೌಚಾಲಯದ ಬೀಗ ತೆಗೆದಾಗ ಬಾಲಕ ಹೊರಗೆ ಬಂದಿದ್ದಾರೆ. ಇದರ ನಂತರ ಮನೆಗೆ ತೆರಳಿರುವ ವಿದ್ಯಾರ್ಥಿಯು ಕುಟುಂಬಸ್ಥರ ಬಳಿ ಘಟನೆಯನ್ನು ವಿವರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂರ್ವ ದೂಜೆ ಗ್ರಾಮದ 11 ವರ್ಷದ ವಿದ್ಯಾರ್ಥಿಯು ಆಗಸ್ಟ್ 5ರಂದು ಶಾಲೆಗೆ ಹೋಗಿದ್ದರು. ಆದರೆ ಅಂದು ಅವರು ಶಾಲೆ ಬಿಟ್ಟರೂ ಮನೆಗೆ ಹಿಂದಿರುಗಲಿಲ್ಲ ಎಂದು ವಿದ್ಯಾರ್ಥಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾತ್ರಿಯಿಡಿ ಊರಿನಲ್ಲಿ ಮತ್ತು ಸಂಬಂಧಿಕರು, ಸ್ನೇಹಿತರನ್ನು ವಿಚಾರಿಸಿರೂ ಮಗನ ಬಗ್ಗೆ ಯಾವುದೇ ವಿಷಯ ತಿಳಿಯಲಿಲ್ಲ.

ಇದನ್ನೂ ಓದಿ: ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ಆಗಸ್ಟ್ 6 ರಂದು ಬೆಳಗ್ಗೆ 8 ಗಂಟೆಗೆ ಶಾಲೆಯ ಬಾಗಿಲು ತೆರೆಯಲು ಶಿಕ್ಷಕರು ಬಂದಾಗ ಕೊಠಡಿಗಳ ಜತೆಗೆ ಶೌಚಾಲಯದ ಬೀಗವನ್ನೂ ತೆರೆಯಲಾಗಿತ್ತು. ಈ ವೇಳೆ, ತಮ್ಮ ಮಗ ಶೌಚಾಲಯದಿಂದ ಹೊರಗೆ ಬಂದಿದ್ದಾರೆ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿದ್ದಾರೆ.

“ಶಾಲೆಗೆ ರಜೆ ಇದ್ದ ಕಾರಣ ನಾನು ಮನೆಗೆ ಬರುತ್ತಿದ್ದೆ. ಆಗ ಶಿಕ್ಷಕ ವಿಜಯ್ ಕುಶ್ವಾಹ ಅವರು ನನ್ನನ್ನು ತಡೆದು ಮಧ್ಯಾಹ್ನ 2 ಗಂಟೆಗೆ ಶೌಚಾಲಯಕ್ಕೆ ತಳ್ಳಿದರು ಮತ್ತು ಹೊರಗಿನಿಂದ ಬಾಗಿಲು ಮುಚ್ಚಿದರು. ಆ ಬಳಿಕ ಶೌಚಾಲಯಕ್ಕೂ ಬೀಗ ಹಾಕಲಾಗಿತ್ತು. ಎಲ್ಲರೂ ಹೊರಟು ಹೋಗಿದ್ದರು. ನಾನು ರಾತ್ರಿ ಸಹಾಯಕ್ಕಾಗಿ ಕಿರುಚುತ್ತಿದ್ದೆ” ಎಂದು ತಮ್ಮ ಮಗ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ಶಾಲೆಯ ಬಳಿ ಯಾವುದೇ ಮನೆ ಇಲ್ಲ. ಹೀಗಾಗಿ ಮಗನ ಧ್ವನಿ ಯಾರಿಗೂ ಕೇಳಿಸದೇ 18 ಗಂಟೆಗಳ ಕಾಲ ಶೌಚಗೃಹದಲ್ಲೇ ಉಳಿದಿಕೊಂಡಿದ್ದ” ಎಂದು ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ದಲಿತ ಮಕ್ಕಳೊಂದಿಗೆ ಶಿಕ್ಷಕರ ವರ್ತನೆ ಸರಿಯಿಲ್ಲ. ಶಾಲೆಯ ಎಲ್ಲಾ ದಲಿತ ಮಕ್ಕಳೊಂದಿಗೆ ಅವರು ಅನುಚಿತವಾಗಿ ವರ್ತಿಸುತ್ತಾರೆ. ಊಟದಲ್ಲಿ ಪಲ್ಯ ಬಡಿಸುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ” ಎಂದು ಸಂತ್ರಸ್ತ ಬಾಲಕ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನ ಸಾವಿನ ಹೊಣೆಹೊತ್ತು ಕಾಂಗ್ರೆಸ್ ಶಾಸಕನ ರಾಜೀನಾಮೆ

ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮದ ಜನರೊಂದಿಗೆ ಆಗಮಿಸಿದ ಸಂಬಂಧಿಕರು ಶಾಲೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಿಒ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...