Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ರಾಜಸ್ಥಾನದ ಘಟನೆ ಮಾಸುವ ಮುನ್ನವೆ ಯುಪಿಯಲ್ಲಿ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ

- Advertisement -
- Advertisement -

ರಾಜಸ್ತಾನದಲ್ಲಿ ಕೊಡವನ್ನು ಮುಟ್ಟಿ ನೀರು ಕುಡಿದ ಕಾರಣಕ್ಕೆ ಸವರ್ಣೀಯ ಶಿಕ್ಷಕನೊಬ್ಬ ದಲಿತ ಬಾಲಕನನ್ನು ಥಳಿಸಿ ಕೊಂದಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ ಜಾತಿ ದೌರ್ಜನ್ಯವೊಂದು ಉತ್ತರ ಪ್ರದೇಶದಲ್ಲಿ ತಡವಾಗಿ ವರದಿಯಾಗಿದೆ. ರಾಜ್ಯದ ಔರೈಯಾದ ಬಿದುನಾ ತಾಲೂಕಿನ ಪಿಪ್ರೌಲಿ ಶಿವ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಆಗಸ್ಟ್‌‌ 5 ರಂದು ದಲಿತ ವಿದ್ಯಾರ್ಥಿಯೊಬ್ಬರನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿ ಹಾಕಿ ಅಮಾನವಿಯವಾಗಿ ನಡೆಸಿಕೊಳ್ಳಲಾಗಿದೆ. ಮರುದಿನ ಶಾಲೆಗೆ ಬಂದ ಶಿಕ್ಷಕರು ಶೌಚಾಲಯದ ಬೀಗ ತೆಗೆದಾಗ ಬಾಲಕ ಹೊರಗೆ ಬಂದಿದ್ದಾರೆ. ಇದರ ನಂತರ ಮನೆಗೆ ತೆರಳಿರುವ ವಿದ್ಯಾರ್ಥಿಯು ಕುಟುಂಬಸ್ಥರ ಬಳಿ ಘಟನೆಯನ್ನು ವಿವರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂರ್ವ ದೂಜೆ ಗ್ರಾಮದ 11 ವರ್ಷದ ವಿದ್ಯಾರ್ಥಿಯು ಆಗಸ್ಟ್ 5ರಂದು ಶಾಲೆಗೆ ಹೋಗಿದ್ದರು. ಆದರೆ ಅಂದು ಅವರು ಶಾಲೆ ಬಿಟ್ಟರೂ ಮನೆಗೆ ಹಿಂದಿರುಗಲಿಲ್ಲ ಎಂದು ವಿದ್ಯಾರ್ಥಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾತ್ರಿಯಿಡಿ ಊರಿನಲ್ಲಿ ಮತ್ತು ಸಂಬಂಧಿಕರು, ಸ್ನೇಹಿತರನ್ನು ವಿಚಾರಿಸಿರೂ ಮಗನ ಬಗ್ಗೆ ಯಾವುದೇ ವಿಷಯ ತಿಳಿಯಲಿಲ್ಲ.

ಇದನ್ನೂ ಓದಿ: ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ಆಗಸ್ಟ್ 6 ರಂದು ಬೆಳಗ್ಗೆ 8 ಗಂಟೆಗೆ ಶಾಲೆಯ ಬಾಗಿಲು ತೆರೆಯಲು ಶಿಕ್ಷಕರು ಬಂದಾಗ ಕೊಠಡಿಗಳ ಜತೆಗೆ ಶೌಚಾಲಯದ ಬೀಗವನ್ನೂ ತೆರೆಯಲಾಗಿತ್ತು. ಈ ವೇಳೆ, ತಮ್ಮ ಮಗ ಶೌಚಾಲಯದಿಂದ ಹೊರಗೆ ಬಂದಿದ್ದಾರೆ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿದ್ದಾರೆ.

“ಶಾಲೆಗೆ ರಜೆ ಇದ್ದ ಕಾರಣ ನಾನು ಮನೆಗೆ ಬರುತ್ತಿದ್ದೆ. ಆಗ ಶಿಕ್ಷಕ ವಿಜಯ್ ಕುಶ್ವಾಹ ಅವರು ನನ್ನನ್ನು ತಡೆದು ಮಧ್ಯಾಹ್ನ 2 ಗಂಟೆಗೆ ಶೌಚಾಲಯಕ್ಕೆ ತಳ್ಳಿದರು ಮತ್ತು ಹೊರಗಿನಿಂದ ಬಾಗಿಲು ಮುಚ್ಚಿದರು. ಆ ಬಳಿಕ ಶೌಚಾಲಯಕ್ಕೂ ಬೀಗ ಹಾಕಲಾಗಿತ್ತು. ಎಲ್ಲರೂ ಹೊರಟು ಹೋಗಿದ್ದರು. ನಾನು ರಾತ್ರಿ ಸಹಾಯಕ್ಕಾಗಿ ಕಿರುಚುತ್ತಿದ್ದೆ” ಎಂದು ತಮ್ಮ ಮಗ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ಶಾಲೆಯ ಬಳಿ ಯಾವುದೇ ಮನೆ ಇಲ್ಲ. ಹೀಗಾಗಿ ಮಗನ ಧ್ವನಿ ಯಾರಿಗೂ ಕೇಳಿಸದೇ 18 ಗಂಟೆಗಳ ಕಾಲ ಶೌಚಗೃಹದಲ್ಲೇ ಉಳಿದಿಕೊಂಡಿದ್ದ” ಎಂದು ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ದಲಿತ ಮಕ್ಕಳೊಂದಿಗೆ ಶಿಕ್ಷಕರ ವರ್ತನೆ ಸರಿಯಿಲ್ಲ. ಶಾಲೆಯ ಎಲ್ಲಾ ದಲಿತ ಮಕ್ಕಳೊಂದಿಗೆ ಅವರು ಅನುಚಿತವಾಗಿ ವರ್ತಿಸುತ್ತಾರೆ. ಊಟದಲ್ಲಿ ಪಲ್ಯ ಬಡಿಸುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ” ಎಂದು ಸಂತ್ರಸ್ತ ಬಾಲಕ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನ ಸಾವಿನ ಹೊಣೆಹೊತ್ತು ಕಾಂಗ್ರೆಸ್ ಶಾಸಕನ ರಾಜೀನಾಮೆ

ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮದ ಜನರೊಂದಿಗೆ ಆಗಮಿಸಿದ ಸಂಬಂಧಿಕರು ಶಾಲೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಿಒ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...