Homeಮುಖಪುಟಉ.ಪ್ರದೇಶ: ದಲಿತ ಮಹಿಳೆಯ ಕೊಲೆ ಆರೋಪ, ತಲೆ ಮರೆಸಿಕೊಂಡ ಪೊಲೀಸ್ ಪೇದೆ!

ಉ.ಪ್ರದೇಶ: ದಲಿತ ಮಹಿಳೆಯ ಕೊಲೆ ಆರೋಪ, ತಲೆ ಮರೆಸಿಕೊಂಡ ಪೊಲೀಸ್ ಪೇದೆ!

- Advertisement -
- Advertisement -

ಉತ್ತರ ಪ್ರದೇಶದ ಪೊಲೀಸ್ ಪೇದೆಯೊಬ್ಬ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ದೂರು ದಾಖಲಾಗುವ ಮುನ್ನವೆ ಆತ ತಲೆಮರೆಸಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಕಳೆದ ಶನಿವಾರ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ರಾಘವೇಂದ್ರ ಸಿಂಗ್‌ನನ್ನು (26) ಆಗ್ರಾದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

ಮೃತ ಮಹಿಳೆಯ ತಂದೆ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳನ್ನೂ ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಾನ್ಸ್ಟೆಬಲ್ ತನ್ನ ಮಗಳನ್ನು ಆಗ್ರಾದಲ್ಲಿರುವ ತನ್ನ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾರೆ. ನಂತರ ಕತ್ತು ಹಿಸುಕಿ ಕೊಂದಿದ್ದಾನೆ. ನನ್ನ ಮಗಳನ್ನು ಕೊಲೆ ಮಾಡಿದ ನಂತರ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಪರಾರಿಯಾಗಿದ್ದಾನೆ’ ಮೃತ ಮಹಿಳೆಯ ತಂದೆ ಆರೋಪಿಸಿದ್ದಾರೆ.

‘ಆರೋಪಿ ರಾಘವೇಂದ್ರ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ಸಮಿತಿ ನಡೆಸುತ್ತಿದೆ ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೋ ಮಾಡಲಾಗುತ್ತಿದೆ’ ಎಂದು ಆಗ್ರಾದ ಎಸಿಪಿ ರಾಕೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

‘ಸಂತ್ರಸ್ತೆ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ವರ್ಷಗಳಿಂದ ಕಾನ್ಸ್ಟೆಬಲ್ ಪರಿಚಯವಿತ್ತು. ಅವರು ಝಾನ್ಸಿಯ ನರ್ಸಿಂಗ್ ಶಾಲೆಯಲ್ಲಿ ಓದುತ್ತಿದ್ದಾಗ ಪರಸ್ಪರ ಸಂಪರ್ಕಕ್ಕೆ ಬಂದರು; ಮದುವೆಯಾಗಲು ಬಯಸಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಸಿಂಗ್ ಶುಕ್ರವಾರ ಮಧ್ಯಾಹ್ನ ಆಗ್ರಾದಲ್ಲಿರುವ ತನ್ನ ಸ್ನೇಹಿತ ಆಕಾಶ್‌ ಎಂಬುವವರಿಗೆ ಕರೆ ಮಾಡಿ, ‘ಗುರುವಾರ ರಾತ್ರಿ ಮಹಿಳಾ ಸ್ನೇಹಿತೆಯೊಬ್ಬರು ತಮ್ಮ ಮನೆಗೆ ಬಂದಿದ್ದಾರೆ’ ಎಂದು ತಿಳಿಸಿದ್ದಾನೆ. ಮರುದಿನ ಬೆಳಿಗ್ಗೆ (ಶುಕ್ರವಾರ) ಅವಳನ್ನು ಮನೆಯಲ್ಲಿ ಬಿಟ್ಟು ಕಚೇರಿಗೆ ಹೋದೆ ಎಂದು ಆತನ ತನ್ನ ಸ್ನೇಹಿತನಿಗೆ ಹೇಳಿದ್ದು, ಸುಮಾರು ಎರಡು ಗಂಟೆಗಳ ನಂತರ ರಾಘವೇಂದ್ರ ಮನೆಗೆ ಹಿಂದಿರುಗಿದಾಗ, ಆಕೆ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ತಂಡ ಆಸ್ಪತ್ರೆಗೆ ಧಾವಿಸುವಷ್ಟರಲ್ಲಿ ಸಿಂಗ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಆತನ ಮನೆಗೆ ತಲುಪಿದಾಗ ಬೀಗ ಹಾಕಲಾಗಿತ್ತು. ಬಾಗಿಲು ಒಡೆದು ಮನೆಯನ್ನು ಶೋಧಿಸಿದ್ದಾರೆ. ಆದರೆ, ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

‘ಪ್ರಾಥಮಿಕ ವಿಚಾರಣೆಯಲ್ಲಿ ಸಿಂಗ್ ಮತ್ತು ಮೃತ ಮಹಿಳೆ ಸಂಬಂಧ ಹೊಂದಿದ್ದು ಬೆಳಕಿಗೆ ಬಂದಿದೆ. ರಾಘವೇಂದ್ರನ ತಂದೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಕಳೆದ ತಿಂಗಳಿನಿಂದ ಜೋಡಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಗುರುವಾರ ರಾತ್ರಿ ಸಂತ್ರಸ್ತೆ ಆಗ್ರಾಕ್ಕೆ ಬಂದು ಕಾನ್ಸ್ಟೆಬಲ್ ಮನೆಗೆ ಹೋಗಿದ್ದಳು’ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...