Homeಮುಖಪುಟಉ.ಪ್ರದೇಶ: ದಲಿತ ಮಹಿಳೆಯ ಕೊಲೆ ಆರೋಪ, ತಲೆ ಮರೆಸಿಕೊಂಡ ಪೊಲೀಸ್ ಪೇದೆ!

ಉ.ಪ್ರದೇಶ: ದಲಿತ ಮಹಿಳೆಯ ಕೊಲೆ ಆರೋಪ, ತಲೆ ಮರೆಸಿಕೊಂಡ ಪೊಲೀಸ್ ಪೇದೆ!

- Advertisement -
- Advertisement -

ಉತ್ತರ ಪ್ರದೇಶದ ಪೊಲೀಸ್ ಪೇದೆಯೊಬ್ಬ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ದೂರು ದಾಖಲಾಗುವ ಮುನ್ನವೆ ಆತ ತಲೆಮರೆಸಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಕಳೆದ ಶನಿವಾರ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ರಾಘವೇಂದ್ರ ಸಿಂಗ್‌ನನ್ನು (26) ಆಗ್ರಾದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

ಮೃತ ಮಹಿಳೆಯ ತಂದೆ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳನ್ನೂ ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಾನ್ಸ್ಟೆಬಲ್ ತನ್ನ ಮಗಳನ್ನು ಆಗ್ರಾದಲ್ಲಿರುವ ತನ್ನ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾರೆ. ನಂತರ ಕತ್ತು ಹಿಸುಕಿ ಕೊಂದಿದ್ದಾನೆ. ನನ್ನ ಮಗಳನ್ನು ಕೊಲೆ ಮಾಡಿದ ನಂತರ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಪರಾರಿಯಾಗಿದ್ದಾನೆ’ ಮೃತ ಮಹಿಳೆಯ ತಂದೆ ಆರೋಪಿಸಿದ್ದಾರೆ.

‘ಆರೋಪಿ ರಾಘವೇಂದ್ರ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ಸಮಿತಿ ನಡೆಸುತ್ತಿದೆ ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೋ ಮಾಡಲಾಗುತ್ತಿದೆ’ ಎಂದು ಆಗ್ರಾದ ಎಸಿಪಿ ರಾಕೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

‘ಸಂತ್ರಸ್ತೆ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ವರ್ಷಗಳಿಂದ ಕಾನ್ಸ್ಟೆಬಲ್ ಪರಿಚಯವಿತ್ತು. ಅವರು ಝಾನ್ಸಿಯ ನರ್ಸಿಂಗ್ ಶಾಲೆಯಲ್ಲಿ ಓದುತ್ತಿದ್ದಾಗ ಪರಸ್ಪರ ಸಂಪರ್ಕಕ್ಕೆ ಬಂದರು; ಮದುವೆಯಾಗಲು ಬಯಸಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಸಿಂಗ್ ಶುಕ್ರವಾರ ಮಧ್ಯಾಹ್ನ ಆಗ್ರಾದಲ್ಲಿರುವ ತನ್ನ ಸ್ನೇಹಿತ ಆಕಾಶ್‌ ಎಂಬುವವರಿಗೆ ಕರೆ ಮಾಡಿ, ‘ಗುರುವಾರ ರಾತ್ರಿ ಮಹಿಳಾ ಸ್ನೇಹಿತೆಯೊಬ್ಬರು ತಮ್ಮ ಮನೆಗೆ ಬಂದಿದ್ದಾರೆ’ ಎಂದು ತಿಳಿಸಿದ್ದಾನೆ. ಮರುದಿನ ಬೆಳಿಗ್ಗೆ (ಶುಕ್ರವಾರ) ಅವಳನ್ನು ಮನೆಯಲ್ಲಿ ಬಿಟ್ಟು ಕಚೇರಿಗೆ ಹೋದೆ ಎಂದು ಆತನ ತನ್ನ ಸ್ನೇಹಿತನಿಗೆ ಹೇಳಿದ್ದು, ಸುಮಾರು ಎರಡು ಗಂಟೆಗಳ ನಂತರ ರಾಘವೇಂದ್ರ ಮನೆಗೆ ಹಿಂದಿರುಗಿದಾಗ, ಆಕೆ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ತಂಡ ಆಸ್ಪತ್ರೆಗೆ ಧಾವಿಸುವಷ್ಟರಲ್ಲಿ ಸಿಂಗ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಆತನ ಮನೆಗೆ ತಲುಪಿದಾಗ ಬೀಗ ಹಾಕಲಾಗಿತ್ತು. ಬಾಗಿಲು ಒಡೆದು ಮನೆಯನ್ನು ಶೋಧಿಸಿದ್ದಾರೆ. ಆದರೆ, ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

‘ಪ್ರಾಥಮಿಕ ವಿಚಾರಣೆಯಲ್ಲಿ ಸಿಂಗ್ ಮತ್ತು ಮೃತ ಮಹಿಳೆ ಸಂಬಂಧ ಹೊಂದಿದ್ದು ಬೆಳಕಿಗೆ ಬಂದಿದೆ. ರಾಘವೇಂದ್ರನ ತಂದೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಕಳೆದ ತಿಂಗಳಿನಿಂದ ಜೋಡಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಗುರುವಾರ ರಾತ್ರಿ ಸಂತ್ರಸ್ತೆ ಆಗ್ರಾಕ್ಕೆ ಬಂದು ಕಾನ್ಸ್ಟೆಬಲ್ ಮನೆಗೆ ಹೋಗಿದ್ದಳು’ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...