Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...