Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...