Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...