Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...