Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...