Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...