Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...