Homeಮುಖಪುಟಉತ್ತರಪ್ರದೇಶ: ಪತ್ರಕರ್ತ ಪ್ರಶಾಂತ್ ಕನೋಜಿಯಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು

ಉತ್ತರಪ್ರದೇಶ: ಪತ್ರಕರ್ತ ಪ್ರಶಾಂತ್ ಕನೋಜಿಯಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದಂತೆ ನಕಲಿ ಟ್ವೀಟ್ ಮಾಡಿದ್ದರು ಎಂದು ಆರೋಪಿಸಿ ಆಗಸ್ಟ್ ತಿಂಗಳಿನಲ್ಲಿ ಬಂಧಿಸಲಾಗಿತ್ತು.

- Advertisement -
- Advertisement -

ರಾಮ ಮಂದಿರಕ್ಕೆ ಸಂಬಂಧಿಸಿದಂತೆ ನಕಲಿ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ದಿ ವೈರ್ ನ ಮಾಜಿ ವರದಿಗಾರ ಪತ್ರಕರ್ತ  ಪ್ರಶಾಂತ್ ಕನೋಜಿಯಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಇಂದು ಜಾಮೀನು ನೀಡಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ನಕಲಿ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಆಗಸ್ಟ್ 18 ರಂದು ಅವರ ದೆಹಲಿ ಮನೆಯಿಂದ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಈಗ ಅವರಿಗೆ ಜಾಮೀನು ಸಿಕ್ಕಿದೆ.

ಇದರ ಕುರಿತು ಟ್ವೀಟ್ ಮಾಡಿರುವ ಕನೋಜಿಯಾ ಪತ್ನಿ ಜಗಿಶಾ ಅರೋರಾ, “ಪ್ರಶಾಂತ್ ಅವರಿಗೆ ಹೈಕೋರ್ಟ್‌ನಿಂದ ಜಾಮೀನು ಸಿಕ್ಕಿತು. ನ್ಯಾಯಾಂಗ ಮತ್ತು ಬಾಬಾ ಸಾಹೇಬರ ಸಂವಿಧಾನದ ಮೇಲಿನ ನನ್ನ ನಂಬಿಕೆ ಈ ಫಲಿತಾಂಶವನ್ನು ತಂದಿತು. ನನ್ನ ಹೋರಾಟದಲ್ಲಿ ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಯುಪಿ ಪೋಲಿಸರಿಂದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಬಂಧನ

ಇದನ್ನೂ ಓದಿ: ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

“ಕನೋಜಿಯಾ ದ್ವೇಷವನ್ನು ಹರಡಲು ಹಿಂದೂ ಸೇನೆಯ ಮುಖಂಡ ಸುಶೀಲ್ ತಿವಾರಿ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ನ  ಫೋಟೋವನ್ನು ಎಡಿಟ್ ಮಾಡಿ ಟ್ವೀಟ್ ಮಾಡಿದ್ದಾರೆ” ಎಂದು ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಲಾದ ಎಫ್‌ಐಆರ್‌ನಲ್ಲಿ ಹೇಳಲಾಗಿತ್ತು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 153 ಬಿ, 420, 465, 468, 469 ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಸೋಷಿಯಲ್ ಮೀಡಿಯಾ ಪೋಸ್ಟ್‌ಗೆ ಸಂಬಂಧಿಸಿದಂತೆ ಯುಪಿ ಪೊಲೀಸರು ಕನೋಜಿಯಾ ವಿರುದ್ಧ ಮೂರನೇ ಬಾರಿ ಎಫ್‌ಐಆರ್ ದಾಖಲಿಸಿದ್ದರು.

ತಿವಾರಿ ಅವರ ಫೇಸ್‌ಬುಕ್ ಪೋಸ್ಟ್, “ಯುಪಿಎಸ್‌ಸಿಯಲ್ಲಿ ಇಸ್ಲಾಮಿಕ್ ಅಧ್ಯಯನಕ್ಕೆ ಬದಲಾಗಿ ವೈದಿಕ ಅಧ್ಯಯನಗಳು ತಕ್ಷಣ ಬದಲಾಯಿಸಬೇಕೆಂದು” ಒತ್ತಾಯಿಸಿದೆ.

ಇದನ್ನೂ ಓದಿ: ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಆದರೆ, ಕನೋಜಿಯಾ ಟ್ವೀಟ್ ಮಾಡಿದ ಫೋಟೋದಲ್ಲಿ, ಚಿತ್ರ ಮತ್ತು ಹಿನ್ನೆಲೆ ಒಂದೇ ರೀತಿ ಕಾಣುತ್ತದೆ. ಆದರೆ, “ತಿವಾರಿ ಆದೇಶದ ಪ್ರಕಾರ, ರಾಮ ಮಂದಿರದೊಳಗೆ ಯಾವುದೇ ಶೂದ್ರ, ಎಸ್‌ಸಿ, ಎಸ್‌ಟಿ ಅಥವಾ ಒಬಿಸಿಗಳಿಗೆ ಪ್ರವೇಶವಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಎಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

2019 ರಲ್ಲಿ, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಮದುವೆಯಾಗಲು ಬಯಸುತ್ತೇನೆ’ ಎಂದು ಹೇಳಿಕೊಂಡ ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿದ್ದಕ್ಕಾಗಿ ಕನೋಜಿಯಾನನ್ನು ಬಂಧಿಸಲಾಗಿತ್ತು.

ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ವಿರುದ್ಧ “ಆಕ್ಷೇಪಾರ್ಹ ಟ್ವೀಟ್” ಮಾಡಿದ್ದಕ್ಕಾಗಿ ಇವರನ್ನು ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...