Homeಮುಖಪುಟಉತ್ತರಪ್ರದೇಶ: ಪತ್ರಕರ್ತ ಪ್ರಶಾಂತ್ ಕನೋಜಿಯಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು

ಉತ್ತರಪ್ರದೇಶ: ಪತ್ರಕರ್ತ ಪ್ರಶಾಂತ್ ಕನೋಜಿಯಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದಂತೆ ನಕಲಿ ಟ್ವೀಟ್ ಮಾಡಿದ್ದರು ಎಂದು ಆರೋಪಿಸಿ ಆಗಸ್ಟ್ ತಿಂಗಳಿನಲ್ಲಿ ಬಂಧಿಸಲಾಗಿತ್ತು.

- Advertisement -
- Advertisement -

ರಾಮ ಮಂದಿರಕ್ಕೆ ಸಂಬಂಧಿಸಿದಂತೆ ನಕಲಿ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ದಿ ವೈರ್ ನ ಮಾಜಿ ವರದಿಗಾರ ಪತ್ರಕರ್ತ  ಪ್ರಶಾಂತ್ ಕನೋಜಿಯಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಇಂದು ಜಾಮೀನು ನೀಡಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ನಕಲಿ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಆಗಸ್ಟ್ 18 ರಂದು ಅವರ ದೆಹಲಿ ಮನೆಯಿಂದ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಈಗ ಅವರಿಗೆ ಜಾಮೀನು ಸಿಕ್ಕಿದೆ.

ಇದರ ಕುರಿತು ಟ್ವೀಟ್ ಮಾಡಿರುವ ಕನೋಜಿಯಾ ಪತ್ನಿ ಜಗಿಶಾ ಅರೋರಾ, “ಪ್ರಶಾಂತ್ ಅವರಿಗೆ ಹೈಕೋರ್ಟ್‌ನಿಂದ ಜಾಮೀನು ಸಿಕ್ಕಿತು. ನ್ಯಾಯಾಂಗ ಮತ್ತು ಬಾಬಾ ಸಾಹೇಬರ ಸಂವಿಧಾನದ ಮೇಲಿನ ನನ್ನ ನಂಬಿಕೆ ಈ ಫಲಿತಾಂಶವನ್ನು ತಂದಿತು. ನನ್ನ ಹೋರಾಟದಲ್ಲಿ ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಯುಪಿ ಪೋಲಿಸರಿಂದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಬಂಧನ

ಇದನ್ನೂ ಓದಿ: ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

“ಕನೋಜಿಯಾ ದ್ವೇಷವನ್ನು ಹರಡಲು ಹಿಂದೂ ಸೇನೆಯ ಮುಖಂಡ ಸುಶೀಲ್ ತಿವಾರಿ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ನ  ಫೋಟೋವನ್ನು ಎಡಿಟ್ ಮಾಡಿ ಟ್ವೀಟ್ ಮಾಡಿದ್ದಾರೆ” ಎಂದು ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಲಾದ ಎಫ್‌ಐಆರ್‌ನಲ್ಲಿ ಹೇಳಲಾಗಿತ್ತು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 153 ಬಿ, 420, 465, 468, 469 ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಸೋಷಿಯಲ್ ಮೀಡಿಯಾ ಪೋಸ್ಟ್‌ಗೆ ಸಂಬಂಧಿಸಿದಂತೆ ಯುಪಿ ಪೊಲೀಸರು ಕನೋಜಿಯಾ ವಿರುದ್ಧ ಮೂರನೇ ಬಾರಿ ಎಫ್‌ಐಆರ್ ದಾಖಲಿಸಿದ್ದರು.

ತಿವಾರಿ ಅವರ ಫೇಸ್‌ಬುಕ್ ಪೋಸ್ಟ್, “ಯುಪಿಎಸ್‌ಸಿಯಲ್ಲಿ ಇಸ್ಲಾಮಿಕ್ ಅಧ್ಯಯನಕ್ಕೆ ಬದಲಾಗಿ ವೈದಿಕ ಅಧ್ಯಯನಗಳು ತಕ್ಷಣ ಬದಲಾಯಿಸಬೇಕೆಂದು” ಒತ್ತಾಯಿಸಿದೆ.

ಇದನ್ನೂ ಓದಿ: ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಆದರೆ, ಕನೋಜಿಯಾ ಟ್ವೀಟ್ ಮಾಡಿದ ಫೋಟೋದಲ್ಲಿ, ಚಿತ್ರ ಮತ್ತು ಹಿನ್ನೆಲೆ ಒಂದೇ ರೀತಿ ಕಾಣುತ್ತದೆ. ಆದರೆ, “ತಿವಾರಿ ಆದೇಶದ ಪ್ರಕಾರ, ರಾಮ ಮಂದಿರದೊಳಗೆ ಯಾವುದೇ ಶೂದ್ರ, ಎಸ್‌ಸಿ, ಎಸ್‌ಟಿ ಅಥವಾ ಒಬಿಸಿಗಳಿಗೆ ಪ್ರವೇಶವಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಎಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

2019 ರಲ್ಲಿ, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಮದುವೆಯಾಗಲು ಬಯಸುತ್ತೇನೆ’ ಎಂದು ಹೇಳಿಕೊಂಡ ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿದ್ದಕ್ಕಾಗಿ ಕನೋಜಿಯಾನನ್ನು ಬಂಧಿಸಲಾಗಿತ್ತು.

ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ವಿರುದ್ಧ “ಆಕ್ಷೇಪಾರ್ಹ ಟ್ವೀಟ್” ಮಾಡಿದ್ದಕ್ಕಾಗಿ ಇವರನ್ನು ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....