Homeಮುಖಪುಟಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು “ಪರೀಕ್ಷೆ ಇಲ್ಲ-ಕರೋನಾ ಇಲ್ಲ” ಎಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಕ್ಕಾಗಿ ಉತ್ತರ ಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮ್ಮ ಅಧಿಕಾರಾವಧಿ ಮುಗಿಯುವುದಕ್ಕೆ ಆರು ತಿಂಗಳ ಮೊದಲು 2015 ರಲ್ಲಿ ಸ್ವಯಂ ಪ್ರೇರಿತ ನಿವೃತ್ತಿಯನ್ನು ಪಡೆದ ಸೂರ್ಯ ಪ್ರತಾಪ್ ಸಿಂಗ್ “ಉತ್ತರ ಪ್ರದೇಶದಲ್ಲಿ ಪ್ರಾಮಾಣಿಕ ಅಧಿಕಾರಿಯೊಬ್ಬರು ಸೇವೆ ಸಲ್ಲಿಸುವುದು ಅಸಾಧ್ಯ” ಎಂದು ಹೇಳುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸೂರ್ಯ ಪ್ರತಾಪ್ ಸಿಂಗ್ ಬುಧವಾರ ಟ್ವೀಟ್ ಮಾಡಿ “ಮುಖ್ಯ ಕಾರ್ಯದರ್ಶಿ ಕೆಲವು ಡಿಎಂಗಳನ್ನು ಯೋಗಿಯ ತಂಡ -11 ರ ಸಭೆ ಮಾಡಿ ಖಂಡಿಸಿ, ’ನೀವು ಇಷ್ಟು ಜೋರಾಗಿ ಪರೀಕ್ಷೆ ಪರೀಕ್ಷೆ ಎಂದು ಕೂಗುತ್ತಿದ್ದೀರಿ ನೀವು ಯಾವುದಾದರು ಪ್ರಶಸ್ತಿಗಳನ್ನು ನಿರೀಕ್ಷಿಸಿದ್ದೀರಾ?’ ಎಂದು ಕೇಳಿದರು. ಯುಪಿ ಮುಖ್ಯ ಕಾರ್ಯದರ್ಶಿ ಪರಿಸ್ಥಿತಿಯನ್ನು ಸ್ಪಷ್ಟಪಡಿಸುತ್ತಾರೆಯೇ ? ಉತ್ತರ ಪ್ರದೇಶದ ತಂತ್ರ: ಪರೀಕ್ಷೆ ಇಲ್ಲ = ಕರೋನಾ ಇಲ್ಲ.” ಎಂದು ಬರೆದಿದ್ದರು.

ಲಾಕ್‌ಡೌನ್‌ ಹಾಗೂ ಕೊರೊನಾ ವೈರಸ್ ಹರಡುವಿಕೆಯಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಮುಖ್ಯಮಂತ್ರಿ ಆದಿತ್ಯನಾಥ್ 11 ಜನರು ಐಎಎಸ್ ಅಧಿಕಾರಿಗಳ ತಂಡವನ್ನು ರಚಿಸಿ ’ಟೀಮ್ 11’ ಹಸರು ಕೊಟ್ಟಿದ್ದರು.

ಸೆಕ್ರಟರಿಯೇಟ್ ಪೊಲೀಸ್ ಠಾಣೆಯ ಅಧಿಕಾರಿ ಸುಭಾಷ್ ಸಿಂಗ್, ಸೂರ್ಯ ಪ್ರತಾಪ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗುರುವಾರ ಸಂಜೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾವಣೆಯಾದ ಎಫ್‌ಐಆರ್ ನಲ್ಲಿ “ನಿವೃತ್ತ ಐಎಎಸ್ ಅಧಿಕಾರಿಯೂ ತಪ್ಪು ಸಂಗತಿಗಳ ಆಧಾರದ ಮೇಲೆ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಹಾಗೂ ಇದು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ” ಎಂದು ಆರೋಪಿಸಲಾಗಿದೆ.

ಆದಾಗ್ಯೂ, ಸೂರ್ಯ ಪ್ರತಾಪ್ ಸಿಂಗ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ ಹಾಗೂ ಸರ್ಕಾರದಿಂದ ಸ್ಪಷ್ಟೀಕರಣವನ್ನು ನಿರೀಕ್ಷಿಸುತ್ತಿದ್ದಾರೆ.

“ಮುಖ್ಯ ಕಾರ್ಯದರ್ಶಿ (ಆರ್.ಕೆ. ತಿವಾರಿ) ಒಬ್ಬ ಒಳ್ಳೆಯ ವ್ಯಕ್ತಿ ಮತ್ತು ಉತ್ತಮ ಅಧಿಕಾರಿ. ದುರದೃಷ್ಟವಶಾತ್, ಅವರು ರಾಜಕಾರಣಿಗಳ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಸೂರ್ಯ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.

“ಬಿಜೆಪಿಯ ನಾಯಕರು ನಾನು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಹಿಂದಿನ ಸರ್ಕಾರದ ವಿರುದ್ಧ ಚಳವಳಿಯನ್ನು ನಡೆಸಿದಾಗ ನನ್ನ ಬೆನ್ನು ತಟ್ಟುತ್ತಿದ್ದರು.” ಎಂದು ಅವರು ಹೇಳಿದ್ದಾರೆ.

2014 ರಲ್ಲಿ ಅಖಿಲೇಶ್ ಯಾದವ್ ಆಳ್ವಿಕೆಯಲ್ಲಿ ಉತ್ತರ ಪ್ರದೇಶ ಮಂಡಳಿಯ ಪರೀಕ್ಷೆಗಳಲ್ಲಿ ಮೋಸ ಮಾಫಿಯಾ ಏರಿಕೆಯ ವಿರುದ್ಧ ಸೂರ್ಯ ಪ್ರತಾಪ್ ಸಿಂಗ್ ಮಾತನಾಡಿದ್ದರು.

“ನನ್ನ ಉತ್ತಮ ಉದ್ದೇಶಗಳು ಮತ್ತು ಚಿಂತನೆಗಳನ್ನು 25 ವರ್ಷಗಳ ಉದ್ಯೋಗದಲ್ಲಿ 54 ವರ್ಗಾವಣೆಗಳಿಂದ ಬದಲಾಯಿಸಲಾಗಿಲ್ಲ, ಇನ್ನು ಒಂದು ಎಫ್‌ಐಆರ್ ನಲ್ಲಿ ಬದಲಾಗುತ್ತದೆಯೇ? ” ಸೂರ್ಯ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

69,000 ಶಾಲಾ ಶಿಕ್ಷಕರ ನೇಮಕಾತಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದ ಕಾರಣ ಆದಿತ್ಯನಾಥ್ ಅವರೊಂದಿಗೆ ಕೋಪಗೊಂಡಿದ್ದಾರೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಹೇಳಿದ್ದಾರೆ.


ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...