Homeಮುಖಪುಟಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು “ಪರೀಕ್ಷೆ ಇಲ್ಲ-ಕರೋನಾ ಇಲ್ಲ” ಎಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಕ್ಕಾಗಿ ಉತ್ತರ ಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮ್ಮ ಅಧಿಕಾರಾವಧಿ ಮುಗಿಯುವುದಕ್ಕೆ ಆರು ತಿಂಗಳ ಮೊದಲು 2015 ರಲ್ಲಿ ಸ್ವಯಂ ಪ್ರೇರಿತ ನಿವೃತ್ತಿಯನ್ನು ಪಡೆದ ಸೂರ್ಯ ಪ್ರತಾಪ್ ಸಿಂಗ್ “ಉತ್ತರ ಪ್ರದೇಶದಲ್ಲಿ ಪ್ರಾಮಾಣಿಕ ಅಧಿಕಾರಿಯೊಬ್ಬರು ಸೇವೆ ಸಲ್ಲಿಸುವುದು ಅಸಾಧ್ಯ” ಎಂದು ಹೇಳುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸೂರ್ಯ ಪ್ರತಾಪ್ ಸಿಂಗ್ ಬುಧವಾರ ಟ್ವೀಟ್ ಮಾಡಿ “ಮುಖ್ಯ ಕಾರ್ಯದರ್ಶಿ ಕೆಲವು ಡಿಎಂಗಳನ್ನು ಯೋಗಿಯ ತಂಡ -11 ರ ಸಭೆ ಮಾಡಿ ಖಂಡಿಸಿ, ’ನೀವು ಇಷ್ಟು ಜೋರಾಗಿ ಪರೀಕ್ಷೆ ಪರೀಕ್ಷೆ ಎಂದು ಕೂಗುತ್ತಿದ್ದೀರಿ ನೀವು ಯಾವುದಾದರು ಪ್ರಶಸ್ತಿಗಳನ್ನು ನಿರೀಕ್ಷಿಸಿದ್ದೀರಾ?’ ಎಂದು ಕೇಳಿದರು. ಯುಪಿ ಮುಖ್ಯ ಕಾರ್ಯದರ್ಶಿ ಪರಿಸ್ಥಿತಿಯನ್ನು ಸ್ಪಷ್ಟಪಡಿಸುತ್ತಾರೆಯೇ ? ಉತ್ತರ ಪ್ರದೇಶದ ತಂತ್ರ: ಪರೀಕ್ಷೆ ಇಲ್ಲ = ಕರೋನಾ ಇಲ್ಲ.” ಎಂದು ಬರೆದಿದ್ದರು.

ಲಾಕ್‌ಡೌನ್‌ ಹಾಗೂ ಕೊರೊನಾ ವೈರಸ್ ಹರಡುವಿಕೆಯಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಮುಖ್ಯಮಂತ್ರಿ ಆದಿತ್ಯನಾಥ್ 11 ಜನರು ಐಎಎಸ್ ಅಧಿಕಾರಿಗಳ ತಂಡವನ್ನು ರಚಿಸಿ ’ಟೀಮ್ 11’ ಹಸರು ಕೊಟ್ಟಿದ್ದರು.

ಸೆಕ್ರಟರಿಯೇಟ್ ಪೊಲೀಸ್ ಠಾಣೆಯ ಅಧಿಕಾರಿ ಸುಭಾಷ್ ಸಿಂಗ್, ಸೂರ್ಯ ಪ್ರತಾಪ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗುರುವಾರ ಸಂಜೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾವಣೆಯಾದ ಎಫ್‌ಐಆರ್ ನಲ್ಲಿ “ನಿವೃತ್ತ ಐಎಎಸ್ ಅಧಿಕಾರಿಯೂ ತಪ್ಪು ಸಂಗತಿಗಳ ಆಧಾರದ ಮೇಲೆ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಹಾಗೂ ಇದು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ” ಎಂದು ಆರೋಪಿಸಲಾಗಿದೆ.

ಆದಾಗ್ಯೂ, ಸೂರ್ಯ ಪ್ರತಾಪ್ ಸಿಂಗ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ ಹಾಗೂ ಸರ್ಕಾರದಿಂದ ಸ್ಪಷ್ಟೀಕರಣವನ್ನು ನಿರೀಕ್ಷಿಸುತ್ತಿದ್ದಾರೆ.

“ಮುಖ್ಯ ಕಾರ್ಯದರ್ಶಿ (ಆರ್.ಕೆ. ತಿವಾರಿ) ಒಬ್ಬ ಒಳ್ಳೆಯ ವ್ಯಕ್ತಿ ಮತ್ತು ಉತ್ತಮ ಅಧಿಕಾರಿ. ದುರದೃಷ್ಟವಶಾತ್, ಅವರು ರಾಜಕಾರಣಿಗಳ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಸೂರ್ಯ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.

“ಬಿಜೆಪಿಯ ನಾಯಕರು ನಾನು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಹಿಂದಿನ ಸರ್ಕಾರದ ವಿರುದ್ಧ ಚಳವಳಿಯನ್ನು ನಡೆಸಿದಾಗ ನನ್ನ ಬೆನ್ನು ತಟ್ಟುತ್ತಿದ್ದರು.” ಎಂದು ಅವರು ಹೇಳಿದ್ದಾರೆ.

2014 ರಲ್ಲಿ ಅಖಿಲೇಶ್ ಯಾದವ್ ಆಳ್ವಿಕೆಯಲ್ಲಿ ಉತ್ತರ ಪ್ರದೇಶ ಮಂಡಳಿಯ ಪರೀಕ್ಷೆಗಳಲ್ಲಿ ಮೋಸ ಮಾಫಿಯಾ ಏರಿಕೆಯ ವಿರುದ್ಧ ಸೂರ್ಯ ಪ್ರತಾಪ್ ಸಿಂಗ್ ಮಾತನಾಡಿದ್ದರು.

“ನನ್ನ ಉತ್ತಮ ಉದ್ದೇಶಗಳು ಮತ್ತು ಚಿಂತನೆಗಳನ್ನು 25 ವರ್ಷಗಳ ಉದ್ಯೋಗದಲ್ಲಿ 54 ವರ್ಗಾವಣೆಗಳಿಂದ ಬದಲಾಯಿಸಲಾಗಿಲ್ಲ, ಇನ್ನು ಒಂದು ಎಫ್‌ಐಆರ್ ನಲ್ಲಿ ಬದಲಾಗುತ್ತದೆಯೇ? ” ಸೂರ್ಯ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

69,000 ಶಾಲಾ ಶಿಕ್ಷಕರ ನೇಮಕಾತಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದ ಕಾರಣ ಆದಿತ್ಯನಾಥ್ ಅವರೊಂದಿಗೆ ಕೋಪಗೊಂಡಿದ್ದಾರೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಹೇಳಿದ್ದಾರೆ.


ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...