Homeಮುಖಪುಟಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು “ಪರೀಕ್ಷೆ ಇಲ್ಲ-ಕರೋನಾ ಇಲ್ಲ” ಎಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಕ್ಕಾಗಿ ಉತ್ತರ ಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮ್ಮ ಅಧಿಕಾರಾವಧಿ ಮುಗಿಯುವುದಕ್ಕೆ ಆರು ತಿಂಗಳ ಮೊದಲು 2015 ರಲ್ಲಿ ಸ್ವಯಂ ಪ್ರೇರಿತ ನಿವೃತ್ತಿಯನ್ನು ಪಡೆದ ಸೂರ್ಯ ಪ್ರತಾಪ್ ಸಿಂಗ್ “ಉತ್ತರ ಪ್ರದೇಶದಲ್ಲಿ ಪ್ರಾಮಾಣಿಕ ಅಧಿಕಾರಿಯೊಬ್ಬರು ಸೇವೆ ಸಲ್ಲಿಸುವುದು ಅಸಾಧ್ಯ” ಎಂದು ಹೇಳುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸೂರ್ಯ ಪ್ರತಾಪ್ ಸಿಂಗ್ ಬುಧವಾರ ಟ್ವೀಟ್ ಮಾಡಿ “ಮುಖ್ಯ ಕಾರ್ಯದರ್ಶಿ ಕೆಲವು ಡಿಎಂಗಳನ್ನು ಯೋಗಿಯ ತಂಡ -11 ರ ಸಭೆ ಮಾಡಿ ಖಂಡಿಸಿ, ’ನೀವು ಇಷ್ಟು ಜೋರಾಗಿ ಪರೀಕ್ಷೆ ಪರೀಕ್ಷೆ ಎಂದು ಕೂಗುತ್ತಿದ್ದೀರಿ ನೀವು ಯಾವುದಾದರು ಪ್ರಶಸ್ತಿಗಳನ್ನು ನಿರೀಕ್ಷಿಸಿದ್ದೀರಾ?’ ಎಂದು ಕೇಳಿದರು. ಯುಪಿ ಮುಖ್ಯ ಕಾರ್ಯದರ್ಶಿ ಪರಿಸ್ಥಿತಿಯನ್ನು ಸ್ಪಷ್ಟಪಡಿಸುತ್ತಾರೆಯೇ ? ಉತ್ತರ ಪ್ರದೇಶದ ತಂತ್ರ: ಪರೀಕ್ಷೆ ಇಲ್ಲ = ಕರೋನಾ ಇಲ್ಲ.” ಎಂದು ಬರೆದಿದ್ದರು.

ಲಾಕ್‌ಡೌನ್‌ ಹಾಗೂ ಕೊರೊನಾ ವೈರಸ್ ಹರಡುವಿಕೆಯಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಮುಖ್ಯಮಂತ್ರಿ ಆದಿತ್ಯನಾಥ್ 11 ಜನರು ಐಎಎಸ್ ಅಧಿಕಾರಿಗಳ ತಂಡವನ್ನು ರಚಿಸಿ ’ಟೀಮ್ 11’ ಹಸರು ಕೊಟ್ಟಿದ್ದರು.

ಸೆಕ್ರಟರಿಯೇಟ್ ಪೊಲೀಸ್ ಠಾಣೆಯ ಅಧಿಕಾರಿ ಸುಭಾಷ್ ಸಿಂಗ್, ಸೂರ್ಯ ಪ್ರತಾಪ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗುರುವಾರ ಸಂಜೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾವಣೆಯಾದ ಎಫ್‌ಐಆರ್ ನಲ್ಲಿ “ನಿವೃತ್ತ ಐಎಎಸ್ ಅಧಿಕಾರಿಯೂ ತಪ್ಪು ಸಂಗತಿಗಳ ಆಧಾರದ ಮೇಲೆ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಹಾಗೂ ಇದು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ” ಎಂದು ಆರೋಪಿಸಲಾಗಿದೆ.

ಆದಾಗ್ಯೂ, ಸೂರ್ಯ ಪ್ರತಾಪ್ ಸಿಂಗ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ ಹಾಗೂ ಸರ್ಕಾರದಿಂದ ಸ್ಪಷ್ಟೀಕರಣವನ್ನು ನಿರೀಕ್ಷಿಸುತ್ತಿದ್ದಾರೆ.

“ಮುಖ್ಯ ಕಾರ್ಯದರ್ಶಿ (ಆರ್.ಕೆ. ತಿವಾರಿ) ಒಬ್ಬ ಒಳ್ಳೆಯ ವ್ಯಕ್ತಿ ಮತ್ತು ಉತ್ತಮ ಅಧಿಕಾರಿ. ದುರದೃಷ್ಟವಶಾತ್, ಅವರು ರಾಜಕಾರಣಿಗಳ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಸೂರ್ಯ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.

“ಬಿಜೆಪಿಯ ನಾಯಕರು ನಾನು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಹಿಂದಿನ ಸರ್ಕಾರದ ವಿರುದ್ಧ ಚಳವಳಿಯನ್ನು ನಡೆಸಿದಾಗ ನನ್ನ ಬೆನ್ನು ತಟ್ಟುತ್ತಿದ್ದರು.” ಎಂದು ಅವರು ಹೇಳಿದ್ದಾರೆ.

2014 ರಲ್ಲಿ ಅಖಿಲೇಶ್ ಯಾದವ್ ಆಳ್ವಿಕೆಯಲ್ಲಿ ಉತ್ತರ ಪ್ರದೇಶ ಮಂಡಳಿಯ ಪರೀಕ್ಷೆಗಳಲ್ಲಿ ಮೋಸ ಮಾಫಿಯಾ ಏರಿಕೆಯ ವಿರುದ್ಧ ಸೂರ್ಯ ಪ್ರತಾಪ್ ಸಿಂಗ್ ಮಾತನಾಡಿದ್ದರು.

“ನನ್ನ ಉತ್ತಮ ಉದ್ದೇಶಗಳು ಮತ್ತು ಚಿಂತನೆಗಳನ್ನು 25 ವರ್ಷಗಳ ಉದ್ಯೋಗದಲ್ಲಿ 54 ವರ್ಗಾವಣೆಗಳಿಂದ ಬದಲಾಯಿಸಲಾಗಿಲ್ಲ, ಇನ್ನು ಒಂದು ಎಫ್‌ಐಆರ್ ನಲ್ಲಿ ಬದಲಾಗುತ್ತದೆಯೇ? ” ಸೂರ್ಯ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

69,000 ಶಾಲಾ ಶಿಕ್ಷಕರ ನೇಮಕಾತಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದ ಕಾರಣ ಆದಿತ್ಯನಾಥ್ ಅವರೊಂದಿಗೆ ಕೋಪಗೊಂಡಿದ್ದಾರೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಹೇಳಿದ್ದಾರೆ.


ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...