Homeಮುಖಪುಟಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು “ಪರೀಕ್ಷೆ ಇಲ್ಲ-ಕರೋನಾ ಇಲ್ಲ” ಎಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಕ್ಕಾಗಿ ಉತ್ತರ ಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮ್ಮ ಅಧಿಕಾರಾವಧಿ ಮುಗಿಯುವುದಕ್ಕೆ ಆರು ತಿಂಗಳ ಮೊದಲು 2015 ರಲ್ಲಿ ಸ್ವಯಂ ಪ್ರೇರಿತ ನಿವೃತ್ತಿಯನ್ನು ಪಡೆದ ಸೂರ್ಯ ಪ್ರತಾಪ್ ಸಿಂಗ್ “ಉತ್ತರ ಪ್ರದೇಶದಲ್ಲಿ ಪ್ರಾಮಾಣಿಕ ಅಧಿಕಾರಿಯೊಬ್ಬರು ಸೇವೆ ಸಲ್ಲಿಸುವುದು ಅಸಾಧ್ಯ” ಎಂದು ಹೇಳುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸೂರ್ಯ ಪ್ರತಾಪ್ ಸಿಂಗ್ ಬುಧವಾರ ಟ್ವೀಟ್ ಮಾಡಿ “ಮುಖ್ಯ ಕಾರ್ಯದರ್ಶಿ ಕೆಲವು ಡಿಎಂಗಳನ್ನು ಯೋಗಿಯ ತಂಡ -11 ರ ಸಭೆ ಮಾಡಿ ಖಂಡಿಸಿ, ’ನೀವು ಇಷ್ಟು ಜೋರಾಗಿ ಪರೀಕ್ಷೆ ಪರೀಕ್ಷೆ ಎಂದು ಕೂಗುತ್ತಿದ್ದೀರಿ ನೀವು ಯಾವುದಾದರು ಪ್ರಶಸ್ತಿಗಳನ್ನು ನಿರೀಕ್ಷಿಸಿದ್ದೀರಾ?’ ಎಂದು ಕೇಳಿದರು. ಯುಪಿ ಮುಖ್ಯ ಕಾರ್ಯದರ್ಶಿ ಪರಿಸ್ಥಿತಿಯನ್ನು ಸ್ಪಷ್ಟಪಡಿಸುತ್ತಾರೆಯೇ ? ಉತ್ತರ ಪ್ರದೇಶದ ತಂತ್ರ: ಪರೀಕ್ಷೆ ಇಲ್ಲ = ಕರೋನಾ ಇಲ್ಲ.” ಎಂದು ಬರೆದಿದ್ದರು.

ಲಾಕ್‌ಡೌನ್‌ ಹಾಗೂ ಕೊರೊನಾ ವೈರಸ್ ಹರಡುವಿಕೆಯಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಮುಖ್ಯಮಂತ್ರಿ ಆದಿತ್ಯನಾಥ್ 11 ಜನರು ಐಎಎಸ್ ಅಧಿಕಾರಿಗಳ ತಂಡವನ್ನು ರಚಿಸಿ ’ಟೀಮ್ 11’ ಹಸರು ಕೊಟ್ಟಿದ್ದರು.

ಸೆಕ್ರಟರಿಯೇಟ್ ಪೊಲೀಸ್ ಠಾಣೆಯ ಅಧಿಕಾರಿ ಸುಭಾಷ್ ಸಿಂಗ್, ಸೂರ್ಯ ಪ್ರತಾಪ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗುರುವಾರ ಸಂಜೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ನೋಂದಾವಣೆಯಾದ ಎಫ್‌ಐಆರ್ ನಲ್ಲಿ “ನಿವೃತ್ತ ಐಎಎಸ್ ಅಧಿಕಾರಿಯೂ ತಪ್ಪು ಸಂಗತಿಗಳ ಆಧಾರದ ಮೇಲೆ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಹಾಗೂ ಇದು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ” ಎಂದು ಆರೋಪಿಸಲಾಗಿದೆ.

ಆದಾಗ್ಯೂ, ಸೂರ್ಯ ಪ್ರತಾಪ್ ಸಿಂಗ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ ಹಾಗೂ ಸರ್ಕಾರದಿಂದ ಸ್ಪಷ್ಟೀಕರಣವನ್ನು ನಿರೀಕ್ಷಿಸುತ್ತಿದ್ದಾರೆ.

“ಮುಖ್ಯ ಕಾರ್ಯದರ್ಶಿ (ಆರ್.ಕೆ. ತಿವಾರಿ) ಒಬ್ಬ ಒಳ್ಳೆಯ ವ್ಯಕ್ತಿ ಮತ್ತು ಉತ್ತಮ ಅಧಿಕಾರಿ. ದುರದೃಷ್ಟವಶಾತ್, ಅವರು ರಾಜಕಾರಣಿಗಳ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಸೂರ್ಯ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.

“ಬಿಜೆಪಿಯ ನಾಯಕರು ನಾನು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಹಿಂದಿನ ಸರ್ಕಾರದ ವಿರುದ್ಧ ಚಳವಳಿಯನ್ನು ನಡೆಸಿದಾಗ ನನ್ನ ಬೆನ್ನು ತಟ್ಟುತ್ತಿದ್ದರು.” ಎಂದು ಅವರು ಹೇಳಿದ್ದಾರೆ.

2014 ರಲ್ಲಿ ಅಖಿಲೇಶ್ ಯಾದವ್ ಆಳ್ವಿಕೆಯಲ್ಲಿ ಉತ್ತರ ಪ್ರದೇಶ ಮಂಡಳಿಯ ಪರೀಕ್ಷೆಗಳಲ್ಲಿ ಮೋಸ ಮಾಫಿಯಾ ಏರಿಕೆಯ ವಿರುದ್ಧ ಸೂರ್ಯ ಪ್ರತಾಪ್ ಸಿಂಗ್ ಮಾತನಾಡಿದ್ದರು.

“ನನ್ನ ಉತ್ತಮ ಉದ್ದೇಶಗಳು ಮತ್ತು ಚಿಂತನೆಗಳನ್ನು 25 ವರ್ಷಗಳ ಉದ್ಯೋಗದಲ್ಲಿ 54 ವರ್ಗಾವಣೆಗಳಿಂದ ಬದಲಾಯಿಸಲಾಗಿಲ್ಲ, ಇನ್ನು ಒಂದು ಎಫ್‌ಐಆರ್ ನಲ್ಲಿ ಬದಲಾಗುತ್ತದೆಯೇ? ” ಸೂರ್ಯ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

69,000 ಶಾಲಾ ಶಿಕ್ಷಕರ ನೇಮಕಾತಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದ ಕಾರಣ ಆದಿತ್ಯನಾಥ್ ಅವರೊಂದಿಗೆ ಕೋಪಗೊಂಡಿದ್ದಾರೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಹೇಳಿದ್ದಾರೆ.


ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...