Homeಮುಖಪುಟಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮೌನವಹಿಸಿದೆ. ಆ ಸಾಧ್ಯತೆಯನ್ನು ಅದು ತಳ್ಳಿಹಾಕಿಲ್ಲ. “ಅಂತಹ ಪ್ರೊಜೆಕ್ಷನ್ ಅನ್ನು ಈಗಲೇ ನೀಡುವುದು ತೀರ ಮುಂಚಿತವಾಗುತ್ತದೆ. ಸೂಕ್ತ ಸಮಯ ಬರಲಿ” ಎಂದು ಪ್ರಿಯಾಂಕಾ ಗಾಂಧಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ದೇಶದ ಅತಿದೊಡ್ಡದಾದ ಮತ್ತು ರಾಜಕೀಯವಾಗಿ ಅತ್ಯಂತ ನಿರ್ಣಾಯಕ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ 2019 ರಿಂದ ಪ್ರಿಯಾಂಕಾಗಾಂಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶ ಉಸ್ತುವಾರಿ ಹೊತ್ತಿರುವ ಅವರು ಪಕ್ಷವನ್ನು ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಅವರು ಉತ್ತರ ಪ್ರದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪಕ್ಷದ ಧ್ಯೇಯವನ್ನು ಮನೆ-ಮನೆಗಳಿಗೆ ತಲುಪಿಸುವುದು ಅವರ ಸದ್ಯದ ಯೋಜನೆಯಾಗಿದೆ. ಅವರು ಕೆಲವು ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಪಕ್ಷದ ಹೊಸ ತಲೆಮಾರಿನ ನಾಯಕರು ಮತ್ತು ಹಳೆಯ ಕಾರ್ಯಕರ್ತರನ್ನು ಒಂದೇ ವೇದಿಕೆಯಲ್ಲಿ ತರಲು ಯತ್ನಿಸುತ್ತಿದ್ದಾರೆ.

“ಅವರ ಭೇಟಿಯು ಪ್ರಾಥಮಿಕವಾಗಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿಸುವುದಾಗಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ಅವರ ದೀರ್ಘಾವಧಿಯ ಅನುಪಸ್ಥಿತಿಯು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಪಕ್ಷವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಭದ್ರಗೊಳಿಸುವುದು. ಜಿಲ್ಲಾ ಮಟ್ಟದ ನಾಯರಿಗೆ ಪಕ್ಷದಲ್ಲಿ ತಮ್ಮ ಪಾತ್ರವನ್ನು ಅರ್ಥೈಸುವುದು. ಉತ್ತರ ಪ್ರದೇಶದಲ್ಲಿ ಪಕ್ಷದ ಪ್ರಭಾವವನ್ನು ಹೆಚ್ಚಿಸುವುದು ಸೇರಿದಂತೆ ಕೆಲವು ಕಠಿಣ ಸವಾಲುಗಳಿವೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಒಪ್ಪಿಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಲಲ್ಲು ಅವರು ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ರಾಯ್ ಬರೇಲಿಯಲ್ಲಿ ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಅಮೇಥಿಯಲ್ಲಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಳ್ಳುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷದ ಮೇಲ್ವಿಚಾರಣೆಯನ್ನು ನೋಡಿಕೊಂಡಿದ್ದರು.

ಇದು ಅವರಿಗೆ ಹೆಚ್ಚಿನ ಒತ್ತಡವನ್ನು ತಂದಿತ್ತು. ಮಾತ್ರವಲ್ಲದೆ, ಫಲಿತಾಂಶವು ನಿರಾಶಾದಾಯಕವಾಗಿತ್ತು. ಕಾಂಗ್ರೆಸ್ ತನ್ನ ಭದ್ರಕೋಟೆಯಾದ ಅಮೇಥಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸೋತಿತು. ರಾಯ್ ಬರೇಲಿಯಲ್ಲಿ ಮಾತ್ರ ಗೆದ್ದು, ಒಂದೇ ಒಂದು ಸ್ಥಾನವನ್ನು ಉಳಿಸಿಕೊಂಡಿತು.

ಆದ್ದರಿಂದ, 2022ರ ಚುನಾವಣೆಯು ಪ್ರಿಯಾಂಕಾಗೆ ಮಹತ್ವವನ್ನು ನೀಡುತ್ತದೆ. ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ತಮ್ಮ ಚುನಾವಣಾ ಸ್ಟ್ರಾಟಜಿಯನ್ನು ಒರಗೆ ಹಚ್ಚಬೇಕಿದೆ. ಏಕೆಂದರೆ ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟದಲ್ಲಿದೆ. ಅದು ಕೇವಲ ಏಳು ಶಾಸಕರನ್ನು ಹೊಂದಿದೆ. ಅವರಲ್ಲೂ ಇಬ್ಬರು ಪಕ್ಷದ ವಿರುದ್ಧ ಬಂಡೆದಿದ್ದಾರೆ.

“ಕಳೆದ ಮೂರು ದಶಕಗಳಲ್ಲಿ, ಪಕ್ಷವು ಯುಪಿಯಲ್ಲಿ ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ; ಪಕ್ಷದ ಸಂಘಟನೆ ನೆಲಕಚ್ಚಿದೆ. ತನ್ನ ನೆಲೆಯನ್ನು ಮರಳಿ ಪಡೆಯಲು ಪ್ರಿಯಾಂಕಾ ಹೆಚ್ಚಿನ ಶ್ರಮ ಹಾಕುವ ಅಗತ್ಯವಿದೆ. ಅವರು ಅದನ್ನು ಮಾಡಲು ಸಾಧ್ಯವಾಗುತ್ತದೆಯೇ ಎಂಬುದು ಒಂದು ಮುಖ್ಯ ಪ್ರಶ್ನೆಯಾಗಿದೆ”ಎಂದು ರಾಜಕೀಯ ವೀಕ್ಷಕರಾದ ಪ್ರೊಫೆಸರ್ ಎ.ಕೆ ಮಿಶ್ರಾ ಹೇಳುತ್ತಾರೆ.

ಪಕ್ಷವು 500 ಸದಸ್ಯರ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಹೊಂದಿತ್ತು. ಪ್ರಿಯಾಂಕಾ ಆ ಸಂಖ್ಯೆಯನ್ನು 115 ಕ್ಕೆ ಇಳಿಸಿದರು. ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಅಜಯ್ ಕುಮಾರ್ ಲಲ್ಲು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಈ 115ರಲ್ಲಿ ಶೇಕಡ 34 ರಷ್ಟು ಮೇಲ್ಜಾತಿಗಳು ಮತ್ತು ಹಿಂದುಳಿದವರು, ಶೇಕಡಾ 17 ರಷ್ಟು ಮುಸ್ಲಿಮರು ಮತ್ತು 12 % SC/ST ಮುಖಂಡರಿದ್ದಾರೆ.

ಈಗ ಯುಪಿಸಿಸಿ ಕಾರ್ಯಕಾರಿಣಿ 16 ಪ್ರಧಾನ ಕಾರ್ಯದರ್ಶಿಗಳು ಮತ್ತು ಆರು ಉಪಾಧ್ಯಕ್ಷರನ್ನು ಹೊಂದಿದೆ.

“ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಮರ್ಪಕ ಕ್ರಮಕ್ಕೆ ತರಲು ರಾಜ್ಯ ಮಟ್ಟದಲ್ಲಿ ರಚನೆಯಾದ ವಿವಿಧ ಸಮಿತಿಗಳಲ್ಲಿ ಅನುಭವಿಗಳನ್ನು ನೇಮಿಸಲಾಗಿದೆ” ಎಂದು ಲಲ್ಲೂ ಹೇಳುತ್ತಾರೆ.

ಆದರೆ ರಾಜ್ಯದಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಗೊಂದಲವಿದೆ. ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಮೈತ್ರಿಯ ವಿರುದ್ಧ ಇದ್ದರೂ, ಕಳೆದ ತಿಂಗಳು ನಡೆದ ಸಭೆಯಲ್ಲಿ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂದು ಪ್ರಿಯಾಂಕಾ ಹೇಳಿದ್ದರು.

ಚುನಾವಣೆಗೆ 160-165 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದರೊಂದಿಗೆ ಪಕ್ಷದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳುತ್ತವೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...