Homeಮುಖಪುಟಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮೌನವಹಿಸಿದೆ. ಆ ಸಾಧ್ಯತೆಯನ್ನು ಅದು ತಳ್ಳಿಹಾಕಿಲ್ಲ. “ಅಂತಹ ಪ್ರೊಜೆಕ್ಷನ್ ಅನ್ನು ಈಗಲೇ ನೀಡುವುದು ತೀರ ಮುಂಚಿತವಾಗುತ್ತದೆ. ಸೂಕ್ತ ಸಮಯ ಬರಲಿ” ಎಂದು ಪ್ರಿಯಾಂಕಾ ಗಾಂಧಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ದೇಶದ ಅತಿದೊಡ್ಡದಾದ ಮತ್ತು ರಾಜಕೀಯವಾಗಿ ಅತ್ಯಂತ ನಿರ್ಣಾಯಕ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ 2019 ರಿಂದ ಪ್ರಿಯಾಂಕಾಗಾಂಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶ ಉಸ್ತುವಾರಿ ಹೊತ್ತಿರುವ ಅವರು ಪಕ್ಷವನ್ನು ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಅವರು ಉತ್ತರ ಪ್ರದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪಕ್ಷದ ಧ್ಯೇಯವನ್ನು ಮನೆ-ಮನೆಗಳಿಗೆ ತಲುಪಿಸುವುದು ಅವರ ಸದ್ಯದ ಯೋಜನೆಯಾಗಿದೆ. ಅವರು ಕೆಲವು ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಪಕ್ಷದ ಹೊಸ ತಲೆಮಾರಿನ ನಾಯಕರು ಮತ್ತು ಹಳೆಯ ಕಾರ್ಯಕರ್ತರನ್ನು ಒಂದೇ ವೇದಿಕೆಯಲ್ಲಿ ತರಲು ಯತ್ನಿಸುತ್ತಿದ್ದಾರೆ.

“ಅವರ ಭೇಟಿಯು ಪ್ರಾಥಮಿಕವಾಗಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿಸುವುದಾಗಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ಅವರ ದೀರ್ಘಾವಧಿಯ ಅನುಪಸ್ಥಿತಿಯು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಪಕ್ಷವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಭದ್ರಗೊಳಿಸುವುದು. ಜಿಲ್ಲಾ ಮಟ್ಟದ ನಾಯರಿಗೆ ಪಕ್ಷದಲ್ಲಿ ತಮ್ಮ ಪಾತ್ರವನ್ನು ಅರ್ಥೈಸುವುದು. ಉತ್ತರ ಪ್ರದೇಶದಲ್ಲಿ ಪಕ್ಷದ ಪ್ರಭಾವವನ್ನು ಹೆಚ್ಚಿಸುವುದು ಸೇರಿದಂತೆ ಕೆಲವು ಕಠಿಣ ಸವಾಲುಗಳಿವೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಒಪ್ಪಿಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಲಲ್ಲು ಅವರು ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ರಾಯ್ ಬರೇಲಿಯಲ್ಲಿ ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಅಮೇಥಿಯಲ್ಲಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಳ್ಳುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷದ ಮೇಲ್ವಿಚಾರಣೆಯನ್ನು ನೋಡಿಕೊಂಡಿದ್ದರು.

ಇದು ಅವರಿಗೆ ಹೆಚ್ಚಿನ ಒತ್ತಡವನ್ನು ತಂದಿತ್ತು. ಮಾತ್ರವಲ್ಲದೆ, ಫಲಿತಾಂಶವು ನಿರಾಶಾದಾಯಕವಾಗಿತ್ತು. ಕಾಂಗ್ರೆಸ್ ತನ್ನ ಭದ್ರಕೋಟೆಯಾದ ಅಮೇಥಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸೋತಿತು. ರಾಯ್ ಬರೇಲಿಯಲ್ಲಿ ಮಾತ್ರ ಗೆದ್ದು, ಒಂದೇ ಒಂದು ಸ್ಥಾನವನ್ನು ಉಳಿಸಿಕೊಂಡಿತು.

ಆದ್ದರಿಂದ, 2022ರ ಚುನಾವಣೆಯು ಪ್ರಿಯಾಂಕಾಗೆ ಮಹತ್ವವನ್ನು ನೀಡುತ್ತದೆ. ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ತಮ್ಮ ಚುನಾವಣಾ ಸ್ಟ್ರಾಟಜಿಯನ್ನು ಒರಗೆ ಹಚ್ಚಬೇಕಿದೆ. ಏಕೆಂದರೆ ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟದಲ್ಲಿದೆ. ಅದು ಕೇವಲ ಏಳು ಶಾಸಕರನ್ನು ಹೊಂದಿದೆ. ಅವರಲ್ಲೂ ಇಬ್ಬರು ಪಕ್ಷದ ವಿರುದ್ಧ ಬಂಡೆದಿದ್ದಾರೆ.

“ಕಳೆದ ಮೂರು ದಶಕಗಳಲ್ಲಿ, ಪಕ್ಷವು ಯುಪಿಯಲ್ಲಿ ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ; ಪಕ್ಷದ ಸಂಘಟನೆ ನೆಲಕಚ್ಚಿದೆ. ತನ್ನ ನೆಲೆಯನ್ನು ಮರಳಿ ಪಡೆಯಲು ಪ್ರಿಯಾಂಕಾ ಹೆಚ್ಚಿನ ಶ್ರಮ ಹಾಕುವ ಅಗತ್ಯವಿದೆ. ಅವರು ಅದನ್ನು ಮಾಡಲು ಸಾಧ್ಯವಾಗುತ್ತದೆಯೇ ಎಂಬುದು ಒಂದು ಮುಖ್ಯ ಪ್ರಶ್ನೆಯಾಗಿದೆ”ಎಂದು ರಾಜಕೀಯ ವೀಕ್ಷಕರಾದ ಪ್ರೊಫೆಸರ್ ಎ.ಕೆ ಮಿಶ್ರಾ ಹೇಳುತ್ತಾರೆ.

ಪಕ್ಷವು 500 ಸದಸ್ಯರ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಹೊಂದಿತ್ತು. ಪ್ರಿಯಾಂಕಾ ಆ ಸಂಖ್ಯೆಯನ್ನು 115 ಕ್ಕೆ ಇಳಿಸಿದರು. ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಅಜಯ್ ಕುಮಾರ್ ಲಲ್ಲು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಈ 115ರಲ್ಲಿ ಶೇಕಡ 34 ರಷ್ಟು ಮೇಲ್ಜಾತಿಗಳು ಮತ್ತು ಹಿಂದುಳಿದವರು, ಶೇಕಡಾ 17 ರಷ್ಟು ಮುಸ್ಲಿಮರು ಮತ್ತು 12 % SC/ST ಮುಖಂಡರಿದ್ದಾರೆ.

ಈಗ ಯುಪಿಸಿಸಿ ಕಾರ್ಯಕಾರಿಣಿ 16 ಪ್ರಧಾನ ಕಾರ್ಯದರ್ಶಿಗಳು ಮತ್ತು ಆರು ಉಪಾಧ್ಯಕ್ಷರನ್ನು ಹೊಂದಿದೆ.

“ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಮರ್ಪಕ ಕ್ರಮಕ್ಕೆ ತರಲು ರಾಜ್ಯ ಮಟ್ಟದಲ್ಲಿ ರಚನೆಯಾದ ವಿವಿಧ ಸಮಿತಿಗಳಲ್ಲಿ ಅನುಭವಿಗಳನ್ನು ನೇಮಿಸಲಾಗಿದೆ” ಎಂದು ಲಲ್ಲೂ ಹೇಳುತ್ತಾರೆ.

ಆದರೆ ರಾಜ್ಯದಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಗೊಂದಲವಿದೆ. ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಮೈತ್ರಿಯ ವಿರುದ್ಧ ಇದ್ದರೂ, ಕಳೆದ ತಿಂಗಳು ನಡೆದ ಸಭೆಯಲ್ಲಿ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂದು ಪ್ರಿಯಾಂಕಾ ಹೇಳಿದ್ದರು.

ಚುನಾವಣೆಗೆ 160-165 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದರೊಂದಿಗೆ ಪಕ್ಷದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳುತ್ತವೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...