Homeಮುಖಪುಟಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮೌನವಹಿಸಿದೆ. ಆ ಸಾಧ್ಯತೆಯನ್ನು ಅದು ತಳ್ಳಿಹಾಕಿಲ್ಲ. “ಅಂತಹ ಪ್ರೊಜೆಕ್ಷನ್ ಅನ್ನು ಈಗಲೇ ನೀಡುವುದು ತೀರ ಮುಂಚಿತವಾಗುತ್ತದೆ. ಸೂಕ್ತ ಸಮಯ ಬರಲಿ” ಎಂದು ಪ್ರಿಯಾಂಕಾ ಗಾಂಧಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ದೇಶದ ಅತಿದೊಡ್ಡದಾದ ಮತ್ತು ರಾಜಕೀಯವಾಗಿ ಅತ್ಯಂತ ನಿರ್ಣಾಯಕ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ 2019 ರಿಂದ ಪ್ರಿಯಾಂಕಾಗಾಂಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶ ಉಸ್ತುವಾರಿ ಹೊತ್ತಿರುವ ಅವರು ಪಕ್ಷವನ್ನು ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಅವರು ಉತ್ತರ ಪ್ರದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪಕ್ಷದ ಧ್ಯೇಯವನ್ನು ಮನೆ-ಮನೆಗಳಿಗೆ ತಲುಪಿಸುವುದು ಅವರ ಸದ್ಯದ ಯೋಜನೆಯಾಗಿದೆ. ಅವರು ಕೆಲವು ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಪಕ್ಷದ ಹೊಸ ತಲೆಮಾರಿನ ನಾಯಕರು ಮತ್ತು ಹಳೆಯ ಕಾರ್ಯಕರ್ತರನ್ನು ಒಂದೇ ವೇದಿಕೆಯಲ್ಲಿ ತರಲು ಯತ್ನಿಸುತ್ತಿದ್ದಾರೆ.

“ಅವರ ಭೇಟಿಯು ಪ್ರಾಥಮಿಕವಾಗಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿಸುವುದಾಗಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ಅವರ ದೀರ್ಘಾವಧಿಯ ಅನುಪಸ್ಥಿತಿಯು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಪಕ್ಷವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಭದ್ರಗೊಳಿಸುವುದು. ಜಿಲ್ಲಾ ಮಟ್ಟದ ನಾಯರಿಗೆ ಪಕ್ಷದಲ್ಲಿ ತಮ್ಮ ಪಾತ್ರವನ್ನು ಅರ್ಥೈಸುವುದು. ಉತ್ತರ ಪ್ರದೇಶದಲ್ಲಿ ಪಕ್ಷದ ಪ್ರಭಾವವನ್ನು ಹೆಚ್ಚಿಸುವುದು ಸೇರಿದಂತೆ ಕೆಲವು ಕಠಿಣ ಸವಾಲುಗಳಿವೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಒಪ್ಪಿಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಲಲ್ಲು ಅವರು ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ರಾಯ್ ಬರೇಲಿಯಲ್ಲಿ ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಅಮೇಥಿಯಲ್ಲಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಳ್ಳುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷದ ಮೇಲ್ವಿಚಾರಣೆಯನ್ನು ನೋಡಿಕೊಂಡಿದ್ದರು.

ಇದು ಅವರಿಗೆ ಹೆಚ್ಚಿನ ಒತ್ತಡವನ್ನು ತಂದಿತ್ತು. ಮಾತ್ರವಲ್ಲದೆ, ಫಲಿತಾಂಶವು ನಿರಾಶಾದಾಯಕವಾಗಿತ್ತು. ಕಾಂಗ್ರೆಸ್ ತನ್ನ ಭದ್ರಕೋಟೆಯಾದ ಅಮೇಥಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸೋತಿತು. ರಾಯ್ ಬರೇಲಿಯಲ್ಲಿ ಮಾತ್ರ ಗೆದ್ದು, ಒಂದೇ ಒಂದು ಸ್ಥಾನವನ್ನು ಉಳಿಸಿಕೊಂಡಿತು.

ಆದ್ದರಿಂದ, 2022ರ ಚುನಾವಣೆಯು ಪ್ರಿಯಾಂಕಾಗೆ ಮಹತ್ವವನ್ನು ನೀಡುತ್ತದೆ. ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ತಮ್ಮ ಚುನಾವಣಾ ಸ್ಟ್ರಾಟಜಿಯನ್ನು ಒರಗೆ ಹಚ್ಚಬೇಕಿದೆ. ಏಕೆಂದರೆ ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟದಲ್ಲಿದೆ. ಅದು ಕೇವಲ ಏಳು ಶಾಸಕರನ್ನು ಹೊಂದಿದೆ. ಅವರಲ್ಲೂ ಇಬ್ಬರು ಪಕ್ಷದ ವಿರುದ್ಧ ಬಂಡೆದಿದ್ದಾರೆ.

“ಕಳೆದ ಮೂರು ದಶಕಗಳಲ್ಲಿ, ಪಕ್ಷವು ಯುಪಿಯಲ್ಲಿ ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ; ಪಕ್ಷದ ಸಂಘಟನೆ ನೆಲಕಚ್ಚಿದೆ. ತನ್ನ ನೆಲೆಯನ್ನು ಮರಳಿ ಪಡೆಯಲು ಪ್ರಿಯಾಂಕಾ ಹೆಚ್ಚಿನ ಶ್ರಮ ಹಾಕುವ ಅಗತ್ಯವಿದೆ. ಅವರು ಅದನ್ನು ಮಾಡಲು ಸಾಧ್ಯವಾಗುತ್ತದೆಯೇ ಎಂಬುದು ಒಂದು ಮುಖ್ಯ ಪ್ರಶ್ನೆಯಾಗಿದೆ”ಎಂದು ರಾಜಕೀಯ ವೀಕ್ಷಕರಾದ ಪ್ರೊಫೆಸರ್ ಎ.ಕೆ ಮಿಶ್ರಾ ಹೇಳುತ್ತಾರೆ.

ಪಕ್ಷವು 500 ಸದಸ್ಯರ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಹೊಂದಿತ್ತು. ಪ್ರಿಯಾಂಕಾ ಆ ಸಂಖ್ಯೆಯನ್ನು 115 ಕ್ಕೆ ಇಳಿಸಿದರು. ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಅಜಯ್ ಕುಮಾರ್ ಲಲ್ಲು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಈ 115ರಲ್ಲಿ ಶೇಕಡ 34 ರಷ್ಟು ಮೇಲ್ಜಾತಿಗಳು ಮತ್ತು ಹಿಂದುಳಿದವರು, ಶೇಕಡಾ 17 ರಷ್ಟು ಮುಸ್ಲಿಮರು ಮತ್ತು 12 % SC/ST ಮುಖಂಡರಿದ್ದಾರೆ.

ಈಗ ಯುಪಿಸಿಸಿ ಕಾರ್ಯಕಾರಿಣಿ 16 ಪ್ರಧಾನ ಕಾರ್ಯದರ್ಶಿಗಳು ಮತ್ತು ಆರು ಉಪಾಧ್ಯಕ್ಷರನ್ನು ಹೊಂದಿದೆ.

“ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಮರ್ಪಕ ಕ್ರಮಕ್ಕೆ ತರಲು ರಾಜ್ಯ ಮಟ್ಟದಲ್ಲಿ ರಚನೆಯಾದ ವಿವಿಧ ಸಮಿತಿಗಳಲ್ಲಿ ಅನುಭವಿಗಳನ್ನು ನೇಮಿಸಲಾಗಿದೆ” ಎಂದು ಲಲ್ಲೂ ಹೇಳುತ್ತಾರೆ.

ಆದರೆ ರಾಜ್ಯದಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಗೊಂದಲವಿದೆ. ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಮೈತ್ರಿಯ ವಿರುದ್ಧ ಇದ್ದರೂ, ಕಳೆದ ತಿಂಗಳು ನಡೆದ ಸಭೆಯಲ್ಲಿ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂದು ಪ್ರಿಯಾಂಕಾ ಹೇಳಿದ್ದರು.

ಚುನಾವಣೆಗೆ 160-165 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದರೊಂದಿಗೆ ಪಕ್ಷದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳುತ್ತವೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...