Homeಮುಖಪುಟಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮೌನವಹಿಸಿದೆ. ಆ ಸಾಧ್ಯತೆಯನ್ನು ಅದು ತಳ್ಳಿಹಾಕಿಲ್ಲ. “ಅಂತಹ ಪ್ರೊಜೆಕ್ಷನ್ ಅನ್ನು ಈಗಲೇ ನೀಡುವುದು ತೀರ ಮುಂಚಿತವಾಗುತ್ತದೆ. ಸೂಕ್ತ ಸಮಯ ಬರಲಿ” ಎಂದು ಪ್ರಿಯಾಂಕಾ ಗಾಂಧಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ದೇಶದ ಅತಿದೊಡ್ಡದಾದ ಮತ್ತು ರಾಜಕೀಯವಾಗಿ ಅತ್ಯಂತ ನಿರ್ಣಾಯಕ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ 2019 ರಿಂದ ಪ್ರಿಯಾಂಕಾಗಾಂಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶ ಉಸ್ತುವಾರಿ ಹೊತ್ತಿರುವ ಅವರು ಪಕ್ಷವನ್ನು ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಅವರು ಉತ್ತರ ಪ್ರದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪಕ್ಷದ ಧ್ಯೇಯವನ್ನು ಮನೆ-ಮನೆಗಳಿಗೆ ತಲುಪಿಸುವುದು ಅವರ ಸದ್ಯದ ಯೋಜನೆಯಾಗಿದೆ. ಅವರು ಕೆಲವು ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಪಕ್ಷದ ಹೊಸ ತಲೆಮಾರಿನ ನಾಯಕರು ಮತ್ತು ಹಳೆಯ ಕಾರ್ಯಕರ್ತರನ್ನು ಒಂದೇ ವೇದಿಕೆಯಲ್ಲಿ ತರಲು ಯತ್ನಿಸುತ್ತಿದ್ದಾರೆ.

“ಅವರ ಭೇಟಿಯು ಪ್ರಾಥಮಿಕವಾಗಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿಸುವುದಾಗಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ಅವರ ದೀರ್ಘಾವಧಿಯ ಅನುಪಸ್ಥಿತಿಯು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಪಕ್ಷವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಭದ್ರಗೊಳಿಸುವುದು. ಜಿಲ್ಲಾ ಮಟ್ಟದ ನಾಯರಿಗೆ ಪಕ್ಷದಲ್ಲಿ ತಮ್ಮ ಪಾತ್ರವನ್ನು ಅರ್ಥೈಸುವುದು. ಉತ್ತರ ಪ್ರದೇಶದಲ್ಲಿ ಪಕ್ಷದ ಪ್ರಭಾವವನ್ನು ಹೆಚ್ಚಿಸುವುದು ಸೇರಿದಂತೆ ಕೆಲವು ಕಠಿಣ ಸವಾಲುಗಳಿವೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಒಪ್ಪಿಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಲಲ್ಲು ಅವರು ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ರಾಯ್ ಬರೇಲಿಯಲ್ಲಿ ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಅಮೇಥಿಯಲ್ಲಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಳ್ಳುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷದ ಮೇಲ್ವಿಚಾರಣೆಯನ್ನು ನೋಡಿಕೊಂಡಿದ್ದರು.

ಇದು ಅವರಿಗೆ ಹೆಚ್ಚಿನ ಒತ್ತಡವನ್ನು ತಂದಿತ್ತು. ಮಾತ್ರವಲ್ಲದೆ, ಫಲಿತಾಂಶವು ನಿರಾಶಾದಾಯಕವಾಗಿತ್ತು. ಕಾಂಗ್ರೆಸ್ ತನ್ನ ಭದ್ರಕೋಟೆಯಾದ ಅಮೇಥಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸೋತಿತು. ರಾಯ್ ಬರೇಲಿಯಲ್ಲಿ ಮಾತ್ರ ಗೆದ್ದು, ಒಂದೇ ಒಂದು ಸ್ಥಾನವನ್ನು ಉಳಿಸಿಕೊಂಡಿತು.

ಆದ್ದರಿಂದ, 2022ರ ಚುನಾವಣೆಯು ಪ್ರಿಯಾಂಕಾಗೆ ಮಹತ್ವವನ್ನು ನೀಡುತ್ತದೆ. ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ತಮ್ಮ ಚುನಾವಣಾ ಸ್ಟ್ರಾಟಜಿಯನ್ನು ಒರಗೆ ಹಚ್ಚಬೇಕಿದೆ. ಏಕೆಂದರೆ ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟದಲ್ಲಿದೆ. ಅದು ಕೇವಲ ಏಳು ಶಾಸಕರನ್ನು ಹೊಂದಿದೆ. ಅವರಲ್ಲೂ ಇಬ್ಬರು ಪಕ್ಷದ ವಿರುದ್ಧ ಬಂಡೆದಿದ್ದಾರೆ.

“ಕಳೆದ ಮೂರು ದಶಕಗಳಲ್ಲಿ, ಪಕ್ಷವು ಯುಪಿಯಲ್ಲಿ ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ; ಪಕ್ಷದ ಸಂಘಟನೆ ನೆಲಕಚ್ಚಿದೆ. ತನ್ನ ನೆಲೆಯನ್ನು ಮರಳಿ ಪಡೆಯಲು ಪ್ರಿಯಾಂಕಾ ಹೆಚ್ಚಿನ ಶ್ರಮ ಹಾಕುವ ಅಗತ್ಯವಿದೆ. ಅವರು ಅದನ್ನು ಮಾಡಲು ಸಾಧ್ಯವಾಗುತ್ತದೆಯೇ ಎಂಬುದು ಒಂದು ಮುಖ್ಯ ಪ್ರಶ್ನೆಯಾಗಿದೆ”ಎಂದು ರಾಜಕೀಯ ವೀಕ್ಷಕರಾದ ಪ್ರೊಫೆಸರ್ ಎ.ಕೆ ಮಿಶ್ರಾ ಹೇಳುತ್ತಾರೆ.

ಪಕ್ಷವು 500 ಸದಸ್ಯರ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಹೊಂದಿತ್ತು. ಪ್ರಿಯಾಂಕಾ ಆ ಸಂಖ್ಯೆಯನ್ನು 115 ಕ್ಕೆ ಇಳಿಸಿದರು. ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಅಜಯ್ ಕುಮಾರ್ ಲಲ್ಲು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಈ 115ರಲ್ಲಿ ಶೇಕಡ 34 ರಷ್ಟು ಮೇಲ್ಜಾತಿಗಳು ಮತ್ತು ಹಿಂದುಳಿದವರು, ಶೇಕಡಾ 17 ರಷ್ಟು ಮುಸ್ಲಿಮರು ಮತ್ತು 12 % SC/ST ಮುಖಂಡರಿದ್ದಾರೆ.

ಈಗ ಯುಪಿಸಿಸಿ ಕಾರ್ಯಕಾರಿಣಿ 16 ಪ್ರಧಾನ ಕಾರ್ಯದರ್ಶಿಗಳು ಮತ್ತು ಆರು ಉಪಾಧ್ಯಕ್ಷರನ್ನು ಹೊಂದಿದೆ.

“ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಮರ್ಪಕ ಕ್ರಮಕ್ಕೆ ತರಲು ರಾಜ್ಯ ಮಟ್ಟದಲ್ಲಿ ರಚನೆಯಾದ ವಿವಿಧ ಸಮಿತಿಗಳಲ್ಲಿ ಅನುಭವಿಗಳನ್ನು ನೇಮಿಸಲಾಗಿದೆ” ಎಂದು ಲಲ್ಲೂ ಹೇಳುತ್ತಾರೆ.

ಆದರೆ ರಾಜ್ಯದಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಗೊಂದಲವಿದೆ. ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಮೈತ್ರಿಯ ವಿರುದ್ಧ ಇದ್ದರೂ, ಕಳೆದ ತಿಂಗಳು ನಡೆದ ಸಭೆಯಲ್ಲಿ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂದು ಪ್ರಿಯಾಂಕಾ ಹೇಳಿದ್ದರು.

ಚುನಾವಣೆಗೆ 160-165 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದರೊಂದಿಗೆ ಪಕ್ಷದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳುತ್ತವೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...