Homeಮುಖಪುಟಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

- Advertisement -
- Advertisement -

ಜಾಕೀರ್ ಹುಸೇನ್ ಎಂಬ ಮುಸ್ಲಿಂ ವ್ಯಕ್ತಿಗೆ ಸೇರಿದ ಗೋದಾಮಿನೊಳಗೆ ರಂಜಾನ್ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಮುಸ್ಲಿಮರನ್ನು ಬಜರಂಗದಳದ ಗುಂಪು ಶನಿವಾರ ತಡೆದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಮುಸ್ಲಿಂರ ಗುಂಪೊಂದು ಪ್ರಾರ್ಥನೆ ಸಲ್ಲಿಸುವುದನ್ನು ಬಲಪಂಥೀಯ ಸಂಘಟನೆ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ರೋಹನ್ ಸಕ್ಸೇನಾ ನೇತೃತ್ವದ ಗುಂಪು ವಿರೋಧಿಸಿದೆ. ರಂಜಾನ್ ಪ್ರಾರ್ಥನಾ ಸಭೆಗೆ ನುಗ್ಗಿ ಗದ್ದಲವನ್ನು ಸೃಷ್ಟಿಸಿದ್ದಾರೆ. ಆ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ಶಾಂತಗೊಳಿಸಲಾಯಿತು.

”ನಗರದ ಲಜಪತ್ ನಗರ ಪ್ರದೇಶದ ನಿವಾಸಿಗಳಿಂದ ಪ್ರಾರ್ಥನಾ ಸಭೆಯ ಬಗ್ಗೆ ದೂರು ಸ್ವೀಕರಿಸಿದ್ದೇವೆ” ಎಂದು ಮೊರಾದಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲಜಪತ್ ನಗರವು ಹಿಂದೂ ಬಹುಸಂಖ್ಯಾತ ವಿವಿಧ ಧರ್ಮಗಳ ಜನರಿಂದ ಕೂಡಿದೆ. ಪೊಲೀಸರ ಸಮ್ಮುಖದಲ್ಲಿ ಪ್ರಾರ್ಥನಾ ಸಭೆಯನ್ನು ಶನಿವಾರ ನಡೆಸಲು ಅನುಮತಿಸಲಾಗಿದೆ. ಆದರೆ ಪ್ರದೇಶದ ಮುಸ್ಲಿಮರು ತಮ್ಮ ಮನೆಗಳಲ್ಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಕೇಳಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ನಗರದಲ್ಲಿ ಹೊಸ ಸಂಪ್ರದಾಯಗಳನ್ನು (ಸಂಪ್ರದಾಯ) ನಡೆಸಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

”ಝಾಕಿರ್ ತನ್ನ ಮುಸ್ಲಿಂ ಸಹೋದರರೊಂದಿಗೆ ಪ್ರಾರ್ಥನೆ ನಡೆಸುವ ಮೂಲಕ ಹೊಸ ಸಂಪ್ರದಾಯವನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನಾವು ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಮತ್ತು ನಮ್ಮ ನಗರ ಅಥವಾ ರಾಜ್ಯದಲ್ಲಿ ಅಂತಹ ಯಾವುದೇ ಸಂಪ್ರದಾಯವನ್ನು ಹುಟ್ಟುಹಾಕಲು ಬಿಡುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ.

”ನಮಗೆ ನಮಗೆ ಈ ಗೋದಾಮಿನ ನೆರೆಹೊರೆಯವರಿಂದ ಈ ಮಾಹಿತಿ ಬಂದಿದೆ. ನಮ್ಮಲ್ಲಿ ಪುರಾವೆಯಾಗಿ ಚಿತ್ರಗಳೂ ಇವೆ. ನಾವು ಇದನ್ನು ಸಹಿಸುವುದಿಲ್ಲ” ಅವರ ವಿರುದ್ಧ ದೂರು ದಾಖಲಿಸಲು ನಾವು ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದೇವೆ. ಮತ್ತು ಅವರು ಕ್ರಮ ತಗೆದುಕೊಳ್ಳದಿದ್ದರೆ, ರಾಷ್ಟ್ರೀಯ ಬಜರಂಗದಳವು ಅದರ ವಿರುದ್ಧ ಪ್ರತಿಭಟಿಸಲು ಬೀದಿಗೆ ಬರಲಿದೆ ಎಂದು ಸಕ್ಸೇನಾ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಾದ ಹಿಂದುತ್ವ ಸಂಘಟನೆಗಳ ದಾಳಿಗಳು

ಕಳೆದ ಕೆಲವು ವರ್ಷಗಳಿಂದ, ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದ್ದಕ್ಕಾಗಿ ಮುಸ್ಲಿಮರನ್ನು ಬಂಧಿಸುವ ಅಥವಾ ಕಿರುಕುಳ ನೀಡುವ ಹಲವಾರು ನಿದರ್ಶನಗಳಿವೆ. ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆಯ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾನೂನು ತಜ್ಞರು ಸ್ಕ್ರಾಲ್‌ ಅವರು, ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು ಮುಂತಾದ ವಿವಿಧ ಆರೋಪಗಳ ಅಡಿಯಲ್ಲಿ ಬಂಧನಗಳನ್ನು ಮಾಡಲಾಗಿದೆ. ಸಾರ್ವಜನಿಕವಾಗಿ ಪ್ರಾರ್ಥನೆ ಸಲ್ಲಿಸುವ ಜನರನ್ನು ಬಂಧಿಸುವುದನ್ನು ಭಾರತೀಯ ಕಾನೂನನು ಬೆಂಬಲಿಸಲಾಗುವುದಿಲ್ಲ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...