Homeಮುಖಪುಟಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

- Advertisement -
- Advertisement -

ಜಾಕೀರ್ ಹುಸೇನ್ ಎಂಬ ಮುಸ್ಲಿಂ ವ್ಯಕ್ತಿಗೆ ಸೇರಿದ ಗೋದಾಮಿನೊಳಗೆ ರಂಜಾನ್ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಮುಸ್ಲಿಮರನ್ನು ಬಜರಂಗದಳದ ಗುಂಪು ಶನಿವಾರ ತಡೆದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಮುಸ್ಲಿಂರ ಗುಂಪೊಂದು ಪ್ರಾರ್ಥನೆ ಸಲ್ಲಿಸುವುದನ್ನು ಬಲಪಂಥೀಯ ಸಂಘಟನೆ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ರೋಹನ್ ಸಕ್ಸೇನಾ ನೇತೃತ್ವದ ಗುಂಪು ವಿರೋಧಿಸಿದೆ. ರಂಜಾನ್ ಪ್ರಾರ್ಥನಾ ಸಭೆಗೆ ನುಗ್ಗಿ ಗದ್ದಲವನ್ನು ಸೃಷ್ಟಿಸಿದ್ದಾರೆ. ಆ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ಶಾಂತಗೊಳಿಸಲಾಯಿತು.

”ನಗರದ ಲಜಪತ್ ನಗರ ಪ್ರದೇಶದ ನಿವಾಸಿಗಳಿಂದ ಪ್ರಾರ್ಥನಾ ಸಭೆಯ ಬಗ್ಗೆ ದೂರು ಸ್ವೀಕರಿಸಿದ್ದೇವೆ” ಎಂದು ಮೊರಾದಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲಜಪತ್ ನಗರವು ಹಿಂದೂ ಬಹುಸಂಖ್ಯಾತ ವಿವಿಧ ಧರ್ಮಗಳ ಜನರಿಂದ ಕೂಡಿದೆ. ಪೊಲೀಸರ ಸಮ್ಮುಖದಲ್ಲಿ ಪ್ರಾರ್ಥನಾ ಸಭೆಯನ್ನು ಶನಿವಾರ ನಡೆಸಲು ಅನುಮತಿಸಲಾಗಿದೆ. ಆದರೆ ಪ್ರದೇಶದ ಮುಸ್ಲಿಮರು ತಮ್ಮ ಮನೆಗಳಲ್ಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಕೇಳಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ನಗರದಲ್ಲಿ ಹೊಸ ಸಂಪ್ರದಾಯಗಳನ್ನು (ಸಂಪ್ರದಾಯ) ನಡೆಸಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

”ಝಾಕಿರ್ ತನ್ನ ಮುಸ್ಲಿಂ ಸಹೋದರರೊಂದಿಗೆ ಪ್ರಾರ್ಥನೆ ನಡೆಸುವ ಮೂಲಕ ಹೊಸ ಸಂಪ್ರದಾಯವನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನಾವು ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಮತ್ತು ನಮ್ಮ ನಗರ ಅಥವಾ ರಾಜ್ಯದಲ್ಲಿ ಅಂತಹ ಯಾವುದೇ ಸಂಪ್ರದಾಯವನ್ನು ಹುಟ್ಟುಹಾಕಲು ಬಿಡುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ.

”ನಮಗೆ ನಮಗೆ ಈ ಗೋದಾಮಿನ ನೆರೆಹೊರೆಯವರಿಂದ ಈ ಮಾಹಿತಿ ಬಂದಿದೆ. ನಮ್ಮಲ್ಲಿ ಪುರಾವೆಯಾಗಿ ಚಿತ್ರಗಳೂ ಇವೆ. ನಾವು ಇದನ್ನು ಸಹಿಸುವುದಿಲ್ಲ” ಅವರ ವಿರುದ್ಧ ದೂರು ದಾಖಲಿಸಲು ನಾವು ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದೇವೆ. ಮತ್ತು ಅವರು ಕ್ರಮ ತಗೆದುಕೊಳ್ಳದಿದ್ದರೆ, ರಾಷ್ಟ್ರೀಯ ಬಜರಂಗದಳವು ಅದರ ವಿರುದ್ಧ ಪ್ರತಿಭಟಿಸಲು ಬೀದಿಗೆ ಬರಲಿದೆ ಎಂದು ಸಕ್ಸೇನಾ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಾದ ಹಿಂದುತ್ವ ಸಂಘಟನೆಗಳ ದಾಳಿಗಳು

ಕಳೆದ ಕೆಲವು ವರ್ಷಗಳಿಂದ, ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದ್ದಕ್ಕಾಗಿ ಮುಸ್ಲಿಮರನ್ನು ಬಂಧಿಸುವ ಅಥವಾ ಕಿರುಕುಳ ನೀಡುವ ಹಲವಾರು ನಿದರ್ಶನಗಳಿವೆ. ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆಯ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾನೂನು ತಜ್ಞರು ಸ್ಕ್ರಾಲ್‌ ಅವರು, ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು ಮುಂತಾದ ವಿವಿಧ ಆರೋಪಗಳ ಅಡಿಯಲ್ಲಿ ಬಂಧನಗಳನ್ನು ಮಾಡಲಾಗಿದೆ. ಸಾರ್ವಜನಿಕವಾಗಿ ಪ್ರಾರ್ಥನೆ ಸಲ್ಲಿಸುವ ಜನರನ್ನು ಬಂಧಿಸುವುದನ್ನು ಭಾರತೀಯ ಕಾನೂನನು ಬೆಂಬಲಿಸಲಾಗುವುದಿಲ್ಲ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...