Homeಮುಖಪುಟಎಸ್ಸಿ ಎಸ್ಟಿ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಜಾತಿಪದ್ಧತಿ ಇದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಗಳು...

ಎಸ್ಸಿ ಎಸ್ಟಿ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಜಾತಿಪದ್ಧತಿ ಇದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಗಳು ಹೇಗಿದ್ದವು ಗೊತ್ತೆ?

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಇಂದು ಜಾತಿಪದ್ದತಿ ಅಸ್ತಿತ್ವದಲ್ಲಿದೆ ಎಂದು ಉತ್ತರ ಪ್ರದೇಶದ ಬಲ್ಲಿಯ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಜಾತಿಪದ್ದತಿಯು ದಲಿತರಿಂದಲೇ ಇದೆ. ಅವರ ರಕ್ಷಣೆಗೆ ನೀಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಿತ್ತುಹಾಕಿದರೆ ಅಸ್ಪೃಶ್ಯತೆ ತಾನಾಗಿಯೇ ನಾಶವಾಗುತ್ತದೆ ಎಂದಿದ್ದಾರೆ. ಹಾಗೆಯೇ ಮೀಸಲಾತಿಯನ್ನು ರದ್ದು ಮಾಡಿದರೆ ಜಾತಿ ಪದ್ಧತಿ ಇಲ್ಲವಾಗುತ್ತದೆ ಎಂದಿದ್ದಾರೆ ಎಂದು ಎ.ಎನ್.ಐ ವರದಿ ಮಾಡಿದೆ.

ಇದಕ್ಕೆ ಉತ್ತರ ಪ್ರದೇಶ ಮಾಧವ ಎಂಬುವವರು ತಿರುಗೇಟು ನೀಡಿದ್ದಾರೆ. “ನಿಮ್ಮ ಪ್ರಕಾರ ಕ್ರಿಮಿನಲ್ ಕಾನೂನುಗಳಿರುವುದರಿಂದಲೇ ಅಪರಾಧಗಳು ನಡೆಯುತ್ತಿವೆ. ಹಾಗಾಗಿ ದೇಶದ ಎಲ್ಲಾ ಕಾನೂನುಗಳನ್ನು ಕಿತ್ತುಹಾಕೋಣವೇ” ಎಂದು ಪ್ರಶ್ನಿಸಿದ್ದಾರೆ.

“ಎಸ್ಸಿ ಎಸ್ಟಿ ಆಕ್ಟ್ 1989 ರಲ್ಲಿ ರೂಪುಗೊಂಡಿತು

ಭಾರತದಲ್ಲಿ ಜಾತಿಯು ವೇದಕಾಲದಿಂದಲೇ ಇದೆ. (ವರ್ಣ ವ್ಯವಸ್ಥೆ)

ಯಾರಾದರೂ ಆ ಶಾಸಕನನ್ನು ಮತ್ತೆ ಶಾಲೆಗೆ ಕಳುಹಿಸಿ” ಎಂದು ಮಿಸ್ಟರ್ ಬೀನ್ ಎಂಬುವವರು ರಿಪ್ಲೈ ನೀಡಿದ್ದಾರೆ.

ಮೊದಲು ಆತ ಮತ್ತು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ತಳಸಮುದಾಯದವರೊಂದಿಗೆ ಮದುವೆ ಮಾಡಿಸಲಿ. ನಂತರ ಮಾತಾಡಲಿ ಎಂದು ಕುಲವೀರ್ ಸಿಂಗ್ ಹೇಳಿದ್ದಾರೆ.

ಮ್ಯಾನ್ ಹೋಲ್ ನಲ್ಲಿ ಸ್ವಚ್ಛಮಾಡುವ ಕೆಲಸಕ್ಕೆ ಮೇಲ್ಜಾತಿಗಳು ಬರಲಿ. ನಂತರ ಮೀಸಲಾತಿ ಬಗ್ಗೆ ಮಾತಾಡಲಿ ಎಂದು ಅಲ್ಲಾಮ್ಯಾಕ್ಸ್ ಎಂಬುವವರು ತಿರುಗೇಟು ನೀಡಿದ್ದಾರೆ.

ಈ ಬಿಜೆಪಿ ಶಾಸಕ ಈ ಹಿಂದೆಯೂ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಹಲವು ಟೀಕೆಗಳನ್ನು ಎದುರಿಸಿದ್ದಾರೆ. ಜುಲೈ 30 ರಂದು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಬಾಹುಳ್ಯ ಪ್ರದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ನೀತಿಗಳು ದಮನಕ್ಕೊಳಗಾಗುತ್ತಿವೆ ಎಂಬ ಹೇಳಿಕೆ ನೀಡಿದ್ದರು.

ಜುಲೈ 23ರಂದು ಹಿಂದೂಗಳು ಸಂಪರ್ಕ ಕಡಿದುಕೊಳ್ಳುವ ತೀರ್ಮಾನ ಮಾಡಿದರೆ ಮುಸ್ಲಿಂ ಹಸಿವಿನಿಂದ ಸಾಯಬೇಕಾಗುತ್ತದೆ ಎಂದು ಇವರು ಹೇಳಿಕೆ ನೀಡಿದ್ದರು.

ಕಳೆದ ವರ್ಷ ಇವರು ಮುಸ್ಲಿಮರು ಪ್ರಾಣಿಗಳ ರೀತಿ ಒಬ್ಬರಿಗಿಂತ ಹೆಚ್ಚು ಹೆಂಡತಿಯರನ್ನು ಹೊಂದಿ ಹೆಚ್ಚು ಮಕ್ಕಳು ಮಾಡುತ್ತಿದ್ದಾರೆ, ಹಾಗಾಗಿ ಹಿಂದೂಗಳು ಕನಿಷ್ಟ 5 ಮಕ್ಕಳನ್ನು ಹೆರಬೇಕೆಂದು ಕರೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನೆಷ್ಟು ಮಕ್ಕಳನ್ನು ಹುಟ್ಟಿಸಿ ಸಾಕುತ್ತಿದ್ದಾನೆ?

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...