Homeಮುಖಪುಟಎಸ್ಸಿ ಎಸ್ಟಿ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಜಾತಿಪದ್ಧತಿ ಇದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಗಳು...

ಎಸ್ಸಿ ಎಸ್ಟಿ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಜಾತಿಪದ್ಧತಿ ಇದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಗಳು ಹೇಗಿದ್ದವು ಗೊತ್ತೆ?

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಇಂದು ಜಾತಿಪದ್ದತಿ ಅಸ್ತಿತ್ವದಲ್ಲಿದೆ ಎಂದು ಉತ್ತರ ಪ್ರದೇಶದ ಬಲ್ಲಿಯ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಜಾತಿಪದ್ದತಿಯು ದಲಿತರಿಂದಲೇ ಇದೆ. ಅವರ ರಕ್ಷಣೆಗೆ ನೀಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಿತ್ತುಹಾಕಿದರೆ ಅಸ್ಪೃಶ್ಯತೆ ತಾನಾಗಿಯೇ ನಾಶವಾಗುತ್ತದೆ ಎಂದಿದ್ದಾರೆ. ಹಾಗೆಯೇ ಮೀಸಲಾತಿಯನ್ನು ರದ್ದು ಮಾಡಿದರೆ ಜಾತಿ ಪದ್ಧತಿ ಇಲ್ಲವಾಗುತ್ತದೆ ಎಂದಿದ್ದಾರೆ ಎಂದು ಎ.ಎನ್.ಐ ವರದಿ ಮಾಡಿದೆ.

ಇದಕ್ಕೆ ಉತ್ತರ ಪ್ರದೇಶ ಮಾಧವ ಎಂಬುವವರು ತಿರುಗೇಟು ನೀಡಿದ್ದಾರೆ. “ನಿಮ್ಮ ಪ್ರಕಾರ ಕ್ರಿಮಿನಲ್ ಕಾನೂನುಗಳಿರುವುದರಿಂದಲೇ ಅಪರಾಧಗಳು ನಡೆಯುತ್ತಿವೆ. ಹಾಗಾಗಿ ದೇಶದ ಎಲ್ಲಾ ಕಾನೂನುಗಳನ್ನು ಕಿತ್ತುಹಾಕೋಣವೇ” ಎಂದು ಪ್ರಶ್ನಿಸಿದ್ದಾರೆ.

“ಎಸ್ಸಿ ಎಸ್ಟಿ ಆಕ್ಟ್ 1989 ರಲ್ಲಿ ರೂಪುಗೊಂಡಿತು

ಭಾರತದಲ್ಲಿ ಜಾತಿಯು ವೇದಕಾಲದಿಂದಲೇ ಇದೆ. (ವರ್ಣ ವ್ಯವಸ್ಥೆ)

ಯಾರಾದರೂ ಆ ಶಾಸಕನನ್ನು ಮತ್ತೆ ಶಾಲೆಗೆ ಕಳುಹಿಸಿ” ಎಂದು ಮಿಸ್ಟರ್ ಬೀನ್ ಎಂಬುವವರು ರಿಪ್ಲೈ ನೀಡಿದ್ದಾರೆ.

ಮೊದಲು ಆತ ಮತ್ತು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ತಳಸಮುದಾಯದವರೊಂದಿಗೆ ಮದುವೆ ಮಾಡಿಸಲಿ. ನಂತರ ಮಾತಾಡಲಿ ಎಂದು ಕುಲವೀರ್ ಸಿಂಗ್ ಹೇಳಿದ್ದಾರೆ.

ಮ್ಯಾನ್ ಹೋಲ್ ನಲ್ಲಿ ಸ್ವಚ್ಛಮಾಡುವ ಕೆಲಸಕ್ಕೆ ಮೇಲ್ಜಾತಿಗಳು ಬರಲಿ. ನಂತರ ಮೀಸಲಾತಿ ಬಗ್ಗೆ ಮಾತಾಡಲಿ ಎಂದು ಅಲ್ಲಾಮ್ಯಾಕ್ಸ್ ಎಂಬುವವರು ತಿರುಗೇಟು ನೀಡಿದ್ದಾರೆ.

ಈ ಬಿಜೆಪಿ ಶಾಸಕ ಈ ಹಿಂದೆಯೂ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಹಲವು ಟೀಕೆಗಳನ್ನು ಎದುರಿಸಿದ್ದಾರೆ. ಜುಲೈ 30 ರಂದು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಬಾಹುಳ್ಯ ಪ್ರದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ನೀತಿಗಳು ದಮನಕ್ಕೊಳಗಾಗುತ್ತಿವೆ ಎಂಬ ಹೇಳಿಕೆ ನೀಡಿದ್ದರು.

ಜುಲೈ 23ರಂದು ಹಿಂದೂಗಳು ಸಂಪರ್ಕ ಕಡಿದುಕೊಳ್ಳುವ ತೀರ್ಮಾನ ಮಾಡಿದರೆ ಮುಸ್ಲಿಂ ಹಸಿವಿನಿಂದ ಸಾಯಬೇಕಾಗುತ್ತದೆ ಎಂದು ಇವರು ಹೇಳಿಕೆ ನೀಡಿದ್ದರು.

ಕಳೆದ ವರ್ಷ ಇವರು ಮುಸ್ಲಿಮರು ಪ್ರಾಣಿಗಳ ರೀತಿ ಒಬ್ಬರಿಗಿಂತ ಹೆಚ್ಚು ಹೆಂಡತಿಯರನ್ನು ಹೊಂದಿ ಹೆಚ್ಚು ಮಕ್ಕಳು ಮಾಡುತ್ತಿದ್ದಾರೆ, ಹಾಗಾಗಿ ಹಿಂದೂಗಳು ಕನಿಷ್ಟ 5 ಮಕ್ಕಳನ್ನು ಹೆರಬೇಕೆಂದು ಕರೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನೆಷ್ಟು ಮಕ್ಕಳನ್ನು ಹುಟ್ಟಿಸಿ ಸಾಕುತ್ತಿದ್ದಾನೆ?

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...