Homeಮುಖಪುಟಎಸ್ಸಿ ಎಸ್ಟಿ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಜಾತಿಪದ್ಧತಿ ಇದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಗಳು...

ಎಸ್ಸಿ ಎಸ್ಟಿ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಜಾತಿಪದ್ಧತಿ ಇದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಗಳು ಹೇಗಿದ್ದವು ಗೊತ್ತೆ?

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಮತ್ತು ಮೀಸಲಾತಿಯಿಂದಲೇ ಇಂದು ಜಾತಿಪದ್ದತಿ ಅಸ್ತಿತ್ವದಲ್ಲಿದೆ ಎಂದು ಉತ್ತರ ಪ್ರದೇಶದ ಬಲ್ಲಿಯ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಜಾತಿಪದ್ದತಿಯು ದಲಿತರಿಂದಲೇ ಇದೆ. ಅವರ ರಕ್ಷಣೆಗೆ ನೀಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಿತ್ತುಹಾಕಿದರೆ ಅಸ್ಪೃಶ್ಯತೆ ತಾನಾಗಿಯೇ ನಾಶವಾಗುತ್ತದೆ ಎಂದಿದ್ದಾರೆ. ಹಾಗೆಯೇ ಮೀಸಲಾತಿಯನ್ನು ರದ್ದು ಮಾಡಿದರೆ ಜಾತಿ ಪದ್ಧತಿ ಇಲ್ಲವಾಗುತ್ತದೆ ಎಂದಿದ್ದಾರೆ ಎಂದು ಎ.ಎನ್.ಐ ವರದಿ ಮಾಡಿದೆ.

ಇದಕ್ಕೆ ಉತ್ತರ ಪ್ರದೇಶ ಮಾಧವ ಎಂಬುವವರು ತಿರುಗೇಟು ನೀಡಿದ್ದಾರೆ. “ನಿಮ್ಮ ಪ್ರಕಾರ ಕ್ರಿಮಿನಲ್ ಕಾನೂನುಗಳಿರುವುದರಿಂದಲೇ ಅಪರಾಧಗಳು ನಡೆಯುತ್ತಿವೆ. ಹಾಗಾಗಿ ದೇಶದ ಎಲ್ಲಾ ಕಾನೂನುಗಳನ್ನು ಕಿತ್ತುಹಾಕೋಣವೇ” ಎಂದು ಪ್ರಶ್ನಿಸಿದ್ದಾರೆ.

“ಎಸ್ಸಿ ಎಸ್ಟಿ ಆಕ್ಟ್ 1989 ರಲ್ಲಿ ರೂಪುಗೊಂಡಿತು

ಭಾರತದಲ್ಲಿ ಜಾತಿಯು ವೇದಕಾಲದಿಂದಲೇ ಇದೆ. (ವರ್ಣ ವ್ಯವಸ್ಥೆ)

ಯಾರಾದರೂ ಆ ಶಾಸಕನನ್ನು ಮತ್ತೆ ಶಾಲೆಗೆ ಕಳುಹಿಸಿ” ಎಂದು ಮಿಸ್ಟರ್ ಬೀನ್ ಎಂಬುವವರು ರಿಪ್ಲೈ ನೀಡಿದ್ದಾರೆ.

ಮೊದಲು ಆತ ಮತ್ತು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ತಳಸಮುದಾಯದವರೊಂದಿಗೆ ಮದುವೆ ಮಾಡಿಸಲಿ. ನಂತರ ಮಾತಾಡಲಿ ಎಂದು ಕುಲವೀರ್ ಸಿಂಗ್ ಹೇಳಿದ್ದಾರೆ.

ಮ್ಯಾನ್ ಹೋಲ್ ನಲ್ಲಿ ಸ್ವಚ್ಛಮಾಡುವ ಕೆಲಸಕ್ಕೆ ಮೇಲ್ಜಾತಿಗಳು ಬರಲಿ. ನಂತರ ಮೀಸಲಾತಿ ಬಗ್ಗೆ ಮಾತಾಡಲಿ ಎಂದು ಅಲ್ಲಾಮ್ಯಾಕ್ಸ್ ಎಂಬುವವರು ತಿರುಗೇಟು ನೀಡಿದ್ದಾರೆ.

ಈ ಬಿಜೆಪಿ ಶಾಸಕ ಈ ಹಿಂದೆಯೂ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಹಲವು ಟೀಕೆಗಳನ್ನು ಎದುರಿಸಿದ್ದಾರೆ. ಜುಲೈ 30 ರಂದು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಬಾಹುಳ್ಯ ಪ್ರದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ನೀತಿಗಳು ದಮನಕ್ಕೊಳಗಾಗುತ್ತಿವೆ ಎಂಬ ಹೇಳಿಕೆ ನೀಡಿದ್ದರು.

ಜುಲೈ 23ರಂದು ಹಿಂದೂಗಳು ಸಂಪರ್ಕ ಕಡಿದುಕೊಳ್ಳುವ ತೀರ್ಮಾನ ಮಾಡಿದರೆ ಮುಸ್ಲಿಂ ಹಸಿವಿನಿಂದ ಸಾಯಬೇಕಾಗುತ್ತದೆ ಎಂದು ಇವರು ಹೇಳಿಕೆ ನೀಡಿದ್ದರು.

ಕಳೆದ ವರ್ಷ ಇವರು ಮುಸ್ಲಿಮರು ಪ್ರಾಣಿಗಳ ರೀತಿ ಒಬ್ಬರಿಗಿಂತ ಹೆಚ್ಚು ಹೆಂಡತಿಯರನ್ನು ಹೊಂದಿ ಹೆಚ್ಚು ಮಕ್ಕಳು ಮಾಡುತ್ತಿದ್ದಾರೆ, ಹಾಗಾಗಿ ಹಿಂದೂಗಳು ಕನಿಷ್ಟ 5 ಮಕ್ಕಳನ್ನು ಹೆರಬೇಕೆಂದು ಕರೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನೆಷ್ಟು ಮಕ್ಕಳನ್ನು ಹುಟ್ಟಿಸಿ ಸಾಕುತ್ತಿದ್ದಾನೆ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...