Homeಮುಖಪುಟಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

- Advertisement -
- Advertisement -

ಲಖಿಂಪುರ ಖೇರಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅವಧೇಶ್ ಸಿಂಗ್ ಮತ್ತು ಅವರ ಪತ್ನಿ, ಮಾಜಿ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷೆಯೂ ಆಗಿರುವ ಪುಷ್ಪಾ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ಅವಧೇಶ್ ಸಿಂಗ್ ಅವರ ಇಬ್ಬರು ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಮತ್ತು ಮೂರು ಡಜನ್ ಗೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಸಹ ಈ ಘಟನೆಗೆ ಸಂಬಂಧಿಸಿದಂತೆ ಅರ್ಬನ್ ಕೋಆಪರೇಟಿವ್ ಬ್ಯಾಂಕ್ (ಯುಸಿಬಿ) ಬೋರ್ಡ್ ಚುನಾವಣೆಗೆ ಅದರ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ 
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ರಾತ್ರಿ ಕೊತ್ವಾಲಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಖೇರಿ ಕೊತ್ವಾಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಲಖಿಂಪುರಿ ಖೇರಿಯ ಬಿಜೆಪಿ ಶಾಸಕ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪಕ್ಷದ ಸದಸ್ಯರಾಗಿದ್ದ ಅವಧೇಶ್ ಸಿಂಗ್ ಮತ್ತು ಅವರ ಸಹಚರರನ್ನು ಬಿಜೆಪಿ ಅಮಾನತುಗೊಳಿಸಿದ ಐದು ದಿನಗಳ ನಂತರ ಈ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಅಕ್ಟೋಬರ್ 9 ರಂದು ಯುಸಿಬಿ ಬೋರ್ಡ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅವಧೇಶ್ ಸಿಂಗ್ ಮತ್ತು ಪುಷ್ಪಾ ಸಿಂಗ್ ಅವರು ಬಿಜೆಪಿ ವ್ಯಾಪಾರಿ ಮಂಡಲ್ ಸೆಲ್‌ನ ಜಿಲ್ಲಾ ಸಂಚಾಲಕ ರಾಜು ಅಗರವಾಲ್ ಅವರ ನಾಮಪತ್ರವನ್ನು ಕಸಿದುಕೊಂಡಿದ್ದರು. ಈ ವೇಳೆ ಶಾಸಕನ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ದೂರು ಆರೋಪಿಸಿದೆ. ಅದೇ ವೇಳೆ ಅವರ ಚಿನ್ನದ ಸರವನ್ನೂ ಕಿತ್ತುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಆರೋಪಿಸಿದ್ದಾರೆ.

ಅವಧೇಶ್ ಸಿಂಗ್ ಮತ್ತು ಅವರ ಪತ್ನಿ ತಮ್ಮ 30 ರಿಂದ 40 ಸಹಚರರೊಂದಿಗೆ ಸೇರಿ ಹಲವು ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಕಸಿದುಕೊಂಡಿದ್ದರು. ಈ ಬಗ್ಗೆ ಏನಾಯಿತು ಎಂದು ತಿಳಿದು ಪ್ರತಿಭಟಿಸಲು ತಾನು ಸ್ಥಳಕ್ಕೆ ತಲುಪಿದಾಗ, ಅವಧೇಶ್ ಸಿಂಗ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಅವರಿಗೆ ಹಿಂದಿನಿಂದ ಹೊಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸರು ಮತ್ತು ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಇದೆಲ್ಲ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ್ ನಾರಾಯಣ್ ಶುಕ್ಲಾ ಅವರು ಅವಧೇಶ್ ಸಿಂಗ್, ಪುಷ್ಪಾ ಸಿಂಗ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅನಿಲ್ ಯಾದವ್ ಮತ್ತು ಬಿಜೆಪಿ ಕಾರ್ಯಕರ್ತ ಜ್ಯೋತಿ ಶುಕ್ಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ವರ್ಮಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅವರಿಂದ ವಿವರಣೆ ಕೇಳಿದ್ದಾರೆ. ಭಾನುವಾರ ನಾಲ್ವರನ್ನು ಅಶಿಸ್ತು ಆರೋಪದ ಮೇಲೆ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...