Homeಮುಖಪುಟಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

- Advertisement -
- Advertisement -

ಲಖಿಂಪುರ ಖೇರಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅವಧೇಶ್ ಸಿಂಗ್ ಮತ್ತು ಅವರ ಪತ್ನಿ, ಮಾಜಿ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷೆಯೂ ಆಗಿರುವ ಪುಷ್ಪಾ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ಅವಧೇಶ್ ಸಿಂಗ್ ಅವರ ಇಬ್ಬರು ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಮತ್ತು ಮೂರು ಡಜನ್ ಗೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಸಹ ಈ ಘಟನೆಗೆ ಸಂಬಂಧಿಸಿದಂತೆ ಅರ್ಬನ್ ಕೋಆಪರೇಟಿವ್ ಬ್ಯಾಂಕ್ (ಯುಸಿಬಿ) ಬೋರ್ಡ್ ಚುನಾವಣೆಗೆ ಅದರ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ 
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ರಾತ್ರಿ ಕೊತ್ವಾಲಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಖೇರಿ ಕೊತ್ವಾಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಲಖಿಂಪುರಿ ಖೇರಿಯ ಬಿಜೆಪಿ ಶಾಸಕ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪಕ್ಷದ ಸದಸ್ಯರಾಗಿದ್ದ ಅವಧೇಶ್ ಸಿಂಗ್ ಮತ್ತು ಅವರ ಸಹಚರರನ್ನು ಬಿಜೆಪಿ ಅಮಾನತುಗೊಳಿಸಿದ ಐದು ದಿನಗಳ ನಂತರ ಈ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಅಕ್ಟೋಬರ್ 9 ರಂದು ಯುಸಿಬಿ ಬೋರ್ಡ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅವಧೇಶ್ ಸಿಂಗ್ ಮತ್ತು ಪುಷ್ಪಾ ಸಿಂಗ್ ಅವರು ಬಿಜೆಪಿ ವ್ಯಾಪಾರಿ ಮಂಡಲ್ ಸೆಲ್‌ನ ಜಿಲ್ಲಾ ಸಂಚಾಲಕ ರಾಜು ಅಗರವಾಲ್ ಅವರ ನಾಮಪತ್ರವನ್ನು ಕಸಿದುಕೊಂಡಿದ್ದರು. ಈ ವೇಳೆ ಶಾಸಕನ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ದೂರು ಆರೋಪಿಸಿದೆ. ಅದೇ ವೇಳೆ ಅವರ ಚಿನ್ನದ ಸರವನ್ನೂ ಕಿತ್ತುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಆರೋಪಿಸಿದ್ದಾರೆ.

ಅವಧೇಶ್ ಸಿಂಗ್ ಮತ್ತು ಅವರ ಪತ್ನಿ ತಮ್ಮ 30 ರಿಂದ 40 ಸಹಚರರೊಂದಿಗೆ ಸೇರಿ ಹಲವು ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಕಸಿದುಕೊಂಡಿದ್ದರು. ಈ ಬಗ್ಗೆ ಏನಾಯಿತು ಎಂದು ತಿಳಿದು ಪ್ರತಿಭಟಿಸಲು ತಾನು ಸ್ಥಳಕ್ಕೆ ತಲುಪಿದಾಗ, ಅವಧೇಶ್ ಸಿಂಗ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಅವರಿಗೆ ಹಿಂದಿನಿಂದ ಹೊಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸರು ಮತ್ತು ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಇದೆಲ್ಲ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ್ ನಾರಾಯಣ್ ಶುಕ್ಲಾ ಅವರು ಅವಧೇಶ್ ಸಿಂಗ್, ಪುಷ್ಪಾ ಸಿಂಗ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅನಿಲ್ ಯಾದವ್ ಮತ್ತು ಬಿಜೆಪಿ ಕಾರ್ಯಕರ್ತ ಜ್ಯೋತಿ ಶುಕ್ಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ವರ್ಮಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅವರಿಂದ ವಿವರಣೆ ಕೇಳಿದ್ದಾರೆ. ಭಾನುವಾರ ನಾಲ್ವರನ್ನು ಅಶಿಸ್ತು ಆರೋಪದ ಮೇಲೆ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...