Homeಮುಖಪುಟಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

- Advertisement -
- Advertisement -

ಲಖಿಂಪುರ ಖೇರಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅವಧೇಶ್ ಸಿಂಗ್ ಮತ್ತು ಅವರ ಪತ್ನಿ, ಮಾಜಿ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷೆಯೂ ಆಗಿರುವ ಪುಷ್ಪಾ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ಅವಧೇಶ್ ಸಿಂಗ್ ಅವರ ಇಬ್ಬರು ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಮತ್ತು ಮೂರು ಡಜನ್ ಗೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಸಹ ಈ ಘಟನೆಗೆ ಸಂಬಂಧಿಸಿದಂತೆ ಅರ್ಬನ್ ಕೋಆಪರೇಟಿವ್ ಬ್ಯಾಂಕ್ (ಯುಸಿಬಿ) ಬೋರ್ಡ್ ಚುನಾವಣೆಗೆ ಅದರ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ 
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ರಾತ್ರಿ ಕೊತ್ವಾಲಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಖೇರಿ ಕೊತ್ವಾಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಲಖಿಂಪುರಿ ಖೇರಿಯ ಬಿಜೆಪಿ ಶಾಸಕ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪಕ್ಷದ ಸದಸ್ಯರಾಗಿದ್ದ ಅವಧೇಶ್ ಸಿಂಗ್ ಮತ್ತು ಅವರ ಸಹಚರರನ್ನು ಬಿಜೆಪಿ ಅಮಾನತುಗೊಳಿಸಿದ ಐದು ದಿನಗಳ ನಂತರ ಈ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಅಕ್ಟೋಬರ್ 9 ರಂದು ಯುಸಿಬಿ ಬೋರ್ಡ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅವಧೇಶ್ ಸಿಂಗ್ ಮತ್ತು ಪುಷ್ಪಾ ಸಿಂಗ್ ಅವರು ಬಿಜೆಪಿ ವ್ಯಾಪಾರಿ ಮಂಡಲ್ ಸೆಲ್‌ನ ಜಿಲ್ಲಾ ಸಂಚಾಲಕ ರಾಜು ಅಗರವಾಲ್ ಅವರ ನಾಮಪತ್ರವನ್ನು ಕಸಿದುಕೊಂಡಿದ್ದರು. ಈ ವೇಳೆ ಶಾಸಕನ ಮೇಲೆ ಕೂಡಾ ಹಲ್ಲೆ ನಡೆಸಿದ್ದಾರೆ ಎಂದು ದೂರು ಆರೋಪಿಸಿದೆ. ಅದೇ ವೇಳೆ ಅವರ ಚಿನ್ನದ ಸರವನ್ನೂ ಕಿತ್ತುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಆರೋಪಿಸಿದ್ದಾರೆ.

ಅವಧೇಶ್ ಸಿಂಗ್ ಮತ್ತು ಅವರ ಪತ್ನಿ ತಮ್ಮ 30 ರಿಂದ 40 ಸಹಚರರೊಂದಿಗೆ ಸೇರಿ ಹಲವು ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಕಸಿದುಕೊಂಡಿದ್ದರು. ಈ ಬಗ್ಗೆ ಏನಾಯಿತು ಎಂದು ತಿಳಿದು ಪ್ರತಿಭಟಿಸಲು ತಾನು ಸ್ಥಳಕ್ಕೆ ತಲುಪಿದಾಗ, ಅವಧೇಶ್ ಸಿಂಗ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಅವರಿಗೆ ಹಿಂದಿನಿಂದ ಹೊಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸರು ಮತ್ತು ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಇದೆಲ್ಲ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ್ ನಾರಾಯಣ್ ಶುಕ್ಲಾ ಅವರು ಅವಧೇಶ್ ಸಿಂಗ್, ಪುಷ್ಪಾ ಸಿಂಗ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅನಿಲ್ ಯಾದವ್ ಮತ್ತು ಬಿಜೆಪಿ ಕಾರ್ಯಕರ್ತ ಜ್ಯೋತಿ ಶುಕ್ಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ವರ್ಮಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅವರಿಂದ ವಿವರಣೆ ಕೇಳಿದ್ದಾರೆ. ಭಾನುವಾರ ನಾಲ್ವರನ್ನು ಅಶಿಸ್ತು ಆರೋಪದ ಮೇಲೆ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...