Homeಮುಖಪುಟಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ 'ಬೀಫ್‌ ಕರಿ' ಲೇಬಲ್‌'; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

- Advertisement -
- Advertisement -

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ ‘ಬೀಫ್‌ ಕರಿ’ ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ ಗೊಂದಲದಲ್ಲಿ ಕೊನೆಗೊಂಡಿತು.

ಭೀಪ್‌ ವಿಚಾಅರಕ್ಕೆ ಆರಂಭವಾದ ಗಲಾಟೆ ಪೊಲೀಸರ ಹಸ್ತಕ್ಷೇಪಕ್ಕೆ ಕಾರಣವಾಯಿತು. “ಬೀಫ್‌” ಎಂಬ ಪದವನ್ನು ಸಾಮಾನ್ಯವಾಗಿ ಈ ಪ್ರದೇಶದಲ್ಲಿ ಎಮ್ಮೆ ಮಾಂಸಕ್ಕೆ ಬಳಸಲಾಗುತ್ತದೆ, ರಾಜ್ಯದಲ್ಲಿ ಕಾನೂನುಬದ್ಧವಾಗಿದ್ದು, ಹಸುವಿನ ಮಾಂಸವನ್ನು ನಿಷೇಧಿಸಲಾಗಿದೆ.

ಆರತಕ್ಷತೆಗೆ ಆಗಮಿಸಿದ್ದ ಅತಿಥಿಗಳಾದ ಆಕಾಶ್ ಮತ್ತು ಗೌರವ್ ಕುಮಾರ್, ಬೀಫ್‌ ಲೇಬಲ್ ಅನ್ನು ಗಮನಿಸಿ ವೀಡಿಯೊ ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ ತೊಂದರೆ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಚಟುವಟಿಕೆಗಳು ವಾಗ್ವಾದಕ್ಕೆ ಕಾರಣವಾಗಿ ಶೀಘ್ರದಲ್ಲೇ ಉಲ್ಬಣಗೊಂಡಿತು. ಪೊಲೀಸ್ ತಂಡ, ಆಹಾರ ಮತ್ತು ಔಷಧ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ಪರೀಕ್ಷೆಗಾಗಿ ಆಹಾರ ಮಾದರಿಗಳನ್ನು ಸಂಗ್ರಹಿಸಿದರು.

ಜಗಳದಲ್ಲಿ ಭಾಗಿಯಾಗಿರುವ ಮೂವರನ್ನು, ಅಡುಗೆ ಭಟ್ಟರು ಮತ್ತು ಇತರ ಇಬ್ಬರನ್ನು ವಿಚಾರಣೆಗಾಗಿ ಬಂಧಿಸಲಾಗಿತ್ತು. ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್ ಸರ್ವಂ ಸಿಂಗ್ ಹೇಳಿದ್ದಾರೆ. “ಯಾವ ರೀತಿಯ ಮಾಂಸ ಬಡಿಸಲಾಗಿದೆ ಎಂದು ವಿಧಿವಿಜ್ಞಾನ ವರದಿಯು ದೃಢಪಡಿಸಿದ ನಂತರವೇ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಅವರು ಹೇಳಿದರು.

ಗೌರವ್ ಕುಮಾರ್ ಕೂಡ ಲಿಖಿತ ದೂರು ಸಲ್ಲಿಸಿದ್ದು, ಅಡುಗೆ ಒದಗಿಸುವವರು ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ಬೀಫ್‌” ಎಂಬ ಪದದ ಬಗ್ಗೆ ತಪ್ಪು ತಿಳುವಳಿಕೆ ಹೆಚ್ಚಾಗಿ ಈ ಪ್ರದೇಶದಲ್ಲಿ ಉದ್ವಿಗ್ನತೆಗೆ ಕಾರಣವಾಗುತ್ತದೆ ಎಂದು ಪೊಲೀಸರು ಪುನರುಚ್ಚರಿಸಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಜಮಾಯಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬಿಎಸ್‌ಪಿ ನಾಯಕ ಸಲ್ಮಾನ್ ಶಾಹಿದ್ ಕೂಡ ಸ್ಥಳಕ್ಕೆ ಆಗಮಿಸಿ ಬಿಜೆಪಿ ಕಾರ್ಯಕರ್ತರನ್ನು ‘ಉಗ್ರ ವರ್ತನೆ’ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...