Homeಮುಖಪುಟಉತ್ತರ ಪ್ರದೇಶ ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ: ಸಿಎಂ ಯೋಗಿ ಹೊಗಳಿದ ಪಿಎಂ ಮೋದಿ

ಉತ್ತರ ಪ್ರದೇಶ ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ: ಸಿಎಂ ಯೋಗಿ ಹೊಗಳಿದ ಪಿಎಂ ಮೋದಿ

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದೆ. ಕೋವಿಡ್ ನಿರ್ವಹಣೆಯಲ್ಲಿ ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆ ಎಂಬ ಆರೋಪಗಳಿಂದ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕತ್ವ ಬದಲಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈ ವದಂತಿಗಳ ಹಿನ್ನೆಲೆಯಲ್ಲಿಯೇ ಬಿ.ಎಲ್ ಸಂತೋಷ್ ಮತ್ತು ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೆ ಸಿಎಂ ಯೋಗಿ ಆದಿತ್ಯನಾಥ್ ದೆಹಲಿಗೆ ಭೇಟಿ ನೀಡಿ ಪಿಎಂ ಮೋದಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆ ಸಭೆಯ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ..

ಇದೆಲ್ಲದರ ನಡುವೆ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯೋಗಿ ಆದಿತ್ಯನಾಥ್‌ರವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. “ಉತ್ತರ ಪ್ರದೇಶದ ಹಿರಿಯ ನಾಗರಿಕರ ಕುರಿತು ಕಾಳಜಿ ವಹಿಸುವ ಹೆಲ್ಫ್‌ಲೈನ್‌ ಅನ್ನು ಸಿಎಂ ಯೋಗಿ ಆದಿತ್ಯನಾಥ್ ದೇಶದಲ್ಲಿ ಮೊದಲ ಬಾರಿಗೆ ಆರಂಭಿಸಿದ್ದಾರೆ” ಎಂದು ಎಬಿಪಿ ಲೈವ್ ಪ್ರಕಟಿಸಿದ ಲೇಖನವನ್ನು ಟ್ವೀಟ್ ಮಾಡಿರುವ ಮೋದಿ, ತುಂಬಾ ಒಳ್ಳೆಯ ಉಪಕ್ರಮ! ಎಂದು ಮೋದಿ ಬರೆದಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಗಂಗಾ ನದಿಯಲ್ಲಿ ಹೆಣಗಳು ತೇಲಿ ಬಂದಿದ್ದು, ನದಿ ತೀರಗಳು ಸಾಮೂಹಿಕ ಚಿತಾಗಾರಗಳಾಗಿ ಬದಲಾಗಿದ್ದು ದೇಶ-ವಿದೇಶದ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಆಸ್ಪದ ನೀಡಿದ್ದವು. ಅದೇ ಸಮಯದಲ್ಲಿ ಯುಪಿ ಬಿಜೆಪಿ ಪಕ್ಷದ ಶಾಸಕರೆ ಯೋಗಿ ಆದಿತ್ಯನಾಥ್ ವಿರುದ್ಧ ದನಿಯೆತ್ತಿದ್ದರು. ಕೋವಿಡ್ ಪರಿಸ್ಥಿತಿಯನ್ನು ಪ್ರಶ್ನಿಸಿದರೆ ನನಗೆ ದೇಶದ್ರೋಹಿಯ ಪಟ್ಟ ಕಟ್ಟಬಹುದು ಎಂದು ಬಿಜೆಪಿ ಶಾಸಕ ಆತಂಕ ವ್ಯಕ್ತಪಡಿಸಿದ್ದರು.

ಅದೇ ಸಮಯದಲ್ಲಿ ಯುಪಿ ಸಚಿವ ಸಂಪುಟ ವಿಸ್ತರಣೆಯಲ್ಲಿಯೂ ಭಿನ್ನಾಭಿಪ್ರಾಯ ತಲೆದೋರಿತ್ತು. ಮೋದಿಯವರ ಆಪ್ತ ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಇದು 2022ರ ವಿಧಾನಸಭಾ ಚುನಾವಣೆಯ ಮೇಲೆ ನಕರಾತ್ಮಕ ಪರಿಣಾಮ ಬೀರಬಹುದು ಎಂಬ ಆತಂಕಗಳು ಬಿಜೆಪಿಯನ್ನು ಕಾಡಿದ್ದವು.

ಈಗ ಸ್ವತಃ ನರೇಂದ್ರ ಮೋದಿಯವರೆ ಯೋಗಿ ಹೊಗಳಿ ಟ್ವೀಟ್ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ಮುಂದಾಗಿದ್ದಾರೆ. ಇದು ಎಷ್ಟರಮಟ್ಟಿಗೆ ಪ್ರಯೋಜನವಾಗಲಿದೆ ಎಂಬುದು ಸದ್ಯದಲ್ಲಿಯೇ ತಿಳಿಯಲಿದೆ.


ಇದನ್ನೂ ಓದಿ: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...