Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ...

ಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯ ಬಿಜೆಪಿ ನಾಯಕರ ನೇತೃತ್ವದ ಗುಂಪು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಘಟನೆಯ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಸುಮಾರು 400ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯು ಸೋಮವಾರ ರಾತ್ರಿ ನಡೆದಿದ್ದು, ಕಾಸ್‌ಗಂಜ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಭೂದೇವ್ ಅವರು ಗ್ರಾಮ ಪ್ರಧಾನ್ ಮೂಲಕ ರೈತರೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಇದನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ (ಸ್ವರಾಜ್) ರೈತ ಸಂಘದ ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಕೆಲವು ಹೊರಗಿನ ಜನರು ಅಲ್ಲಿಗೆ ಬಂದಿದ್ದು, ನಂತರ ಘರ್ಷಣೆ ಉಂಟಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ದೀಪಕ್ ಕುಮಾರ್ ಮಂಗಳವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದ್ದು, ರೈತರು ರಕ್ತದಲ್ಲಿ ಮುಳುಗಿರುವ ದೃಶ್ಯಗಳು ಮತ್ತು ಚಿತ್ರಗಳು ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ‘ಶ್ರಮಜೀವಿಗಳು, ವೈರಾಗ್ಯ ಮತ್ತು ಮತಧರ್ಮ’: ‘ಜರ್ಮನ್ ರೈತ ಯುದ್ಧ’ ಪುಸ್ತಕದ ಆಯ್ದ ಭಾಗ

“ಆಸ್ಪತ್ರೆಗೆ ಕನಿಷ್ಠ 47 ಗಾಯಗೊಂಡ ಜನರು ದಾಖಲಾಗಿದ್ದಾರೆ” ಎಂದು ಕಾಸ್ಗಂಜ್‌ನ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಎಪಿ ಕಿಶೋರ್ ಹೇಳಿದ್ದಾರೆ. ಗಾಯಗೊಂಡ ಪ್ರಕರಣಗಳ ಸಂಖ್ಯೆ 100 ಕ್ಕಿಂತ ಹೆಚ್ಚು ಎಂದು ರೈತರೊಬ್ಬರು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಪಿ. ಸಿಂಗ್ ಮತ್ತು ಪಕ್ಷದ ಕಿಸಾನ್ ಮೋರ್ಚಾ ಜಿಲ್ಲಾ ಮುಖ್ಯಸ್ಥ ದೇವೇಂದ್ರ ಸಿಂಗ್ ಲೋಧಿ ನೇತೃತ್ವದ ಜನರ ಗುಂಪು ಪೊಲೀಸ್ ಠಾಣೆಯೊಳಗೆ ರೈತರ ಮೇಲೆ ಲಾಠಿ ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಬಿಕೆಯು (ಸ್ವರಾಜ್) ರಾಷ್ಟ್ರೀಯ ಅಧ್ಯಕ್ಷ ಕುಲದೀಪ್ ಪಾಂಡೆ ಹೇಳಿದ್ದಾರೆ.

“100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುಮಾರು 40 ರೈತರಿಗೆ ತಲೆಗೆ ಗಾಯಗಳು ಉಂಟಾಗಿವೆ. ಕೆಲವರು ಕಾಸ್ಗಂಜ್‌ನಲ್ಲಿ ಚಿಕಿತ್ಸೆ ಪಡೆದಿದ್ದು, ಇತರರನ್ನು ಅಲಿಗಢಕ್ಕೆ ಕಳುಹಿಸಲಾಗಿದೆ” ಎಂದು ಕುಲದೀಪ್‌ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ಒಟ್ಟು ಮೂರು ಎಫ್‌ಐಆರ್‌ಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇದರಲ್ಲಿ 52 ಜನರನ್ನು ಗುರುತಿಸಲಾಗಿದ್ದು, 150 ಅಪರಿಚಿತ ರೈತರನ್ನು ಹೆಸರಿಸಲಾಗಿದೆ.

ಮತ್ತೊಂದು ಎಫ್‌ಐಆರ್ ಅನ್ನು ಬಿಜೆಪಿ ನಾಯಕ ಲೋಧಿ ಅವರು ಯೂನಿಯನ್ ಮುಖಂಡರು ಮತ್ತು 50 ಅಪರಿಚಿತರ ವಿರುದ್ಧ ದಾಖಲಿಸಿದ್ದಾರೆ. ಬಿಜೆಪಿಯ ಕೆ.ಪಿ. ಸಿಂಗ್, ಲೋಧಿ ಮತ್ತು ಇತರ 150 ಜನರ ವಿರುದ್ಧ ಬಿಕೆಯು (ಸ್ವರಾಜ್) ದೂರಿನ ಮೇರೆಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ.

ಬಿಕೆಯು (ಸ್ವರಾಜ್ಯ) ಮುಖಂಡ ಸುಜೀತ್ ಸತ್ಯದರ್ಶಿ ಮಾತನಾಡಿ, “ರೈತರ ಮೇಲಿನ ಹಲ್ಲೆ ಪೂರ್ವ ಯೋಜಿತವಾಗಿತ್ತು. ಬೆಳಗ್ಗೆಯಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದೆವು. ಸಂಜೆ ವೇಳೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ನಂತರ ಬಿಜೆಪಿ ಸದಸ್ಯರು ಪೊಲೀಸ್ ಠಾಣೆ ಮತ್ತು ನಮ್ಮ ಮೇಲೆ ದಾಳಿ ನಡೆಸಿದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭರವಸೆಯಲ್ಲೇ ಉಳಿದ ‘ರೈತಮಿತ್ರ’ ನೇಮಕಾತಿ; ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

“ಅಷ್ಟೆಲ್ಲೆ, ಪೊಲೀಸರು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಲಾಠಿಚಾರ್ಜ್ ಮಾಡಿದರು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯ ಪೊಲೀಸರೊಂದಿಗೆ ಸೇರಿ ಪ್ರತಿಭಟನಾ ಸ್ಥಳದ ಬಳಿಯ ರಸ್ತೆಯಲ್ಲಿ ರೈತರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸುಜೀತ್‌ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಕಾಸ್‌ಗಂಜ್‌‌ ಎಸ್‌ಪಿ ಬಿಬಿಜಿಟಿಎಸ್‌ ಮೂರ್ತಿ,‘‘ರೈತ ಸಂಘಕ್ಕೆ ಸಂಬಂಧಿಸಿದವರು ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದರು. ಹಲವು ಬಾರಿ ಮನವೊಲಿಸಲು ಯತ್ನಿಸಿದರೂ ಪ್ರತಿಭಟನೆ ಕೈಬಿಡಲಿಲ್ಲ. ಸಂಜೆ ವೇಳೆಗೆ ಅವರು ಸ್ಥಳೀಯ ನಿವಾಸಿಗಳ ಗುಂಪಿನೊಂದಿಗೆ ವಾಗ್ವಾದ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪರಸ್ಪರ ಹಲ್ಲೆ ನಡೆಸುತ್ತಿರುವ ಜನರ ಮೇಲೆ ಲಾಠಿ ಚಾರ್ಜ್ ಮಾಡಬೇಕಾಯಿತು. ಸಂಪೂರ್ಣ ವಿಷಯವನ್ನು ವಿವರವಾಗಿ ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ” ಎಂದು ಹೇಳಿದ್ದಾರೆ.

“ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 47 ಜನರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಅವರಲ್ಲಿ ಹದಿನಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅಲಿಘರ್‌ನಲ್ಲಿರುವ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದು ಸಿಎಂಒ ಕಿಶೋರ್ ತಿಳಿಸಿದ್ದಾರೆ.

ಇದನ್ನೂ ಓದಿ: ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

“ರೈತ ಸಂಘದ ಕುಲದೀಪ್ ಪಾಂಡೆ ಅವರು ನಕಲಿ ರೈತ ಸಂಘವನ್ನು ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಅವರು ಮಾಡಿರುವ ಆರೋಪಗಳು ತಪ್ಪು” ಎಂದು ಬಿಜೆಪಿ ನಾಯಕ ಕೆ.ಪಿ. ಸಿಂಗ್ ಹೇಳಿದ್ದಾರೆ. “ಕುಲದೀಪ್ ವಿರುದ್ಧ 28 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವರು ಸುಲಿಗೆಕೋರರಾಗಿದ್ದು, ರೈತರ ಹಿತಾಸಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಕಾಸ್‌ಗಂಜ್‌ ಶಾಸಕ ದೇವೇಂದ್ರ ಸಿಂಗ್ ರಜಪೂ‌ತ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....