Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ...

ಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯ ಬಿಜೆಪಿ ನಾಯಕರ ನೇತೃತ್ವದ ಗುಂಪು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಘಟನೆಯ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಸುಮಾರು 400ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯು ಸೋಮವಾರ ರಾತ್ರಿ ನಡೆದಿದ್ದು, ಕಾಸ್‌ಗಂಜ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಭೂದೇವ್ ಅವರು ಗ್ರಾಮ ಪ್ರಧಾನ್ ಮೂಲಕ ರೈತರೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಇದನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ (ಸ್ವರಾಜ್) ರೈತ ಸಂಘದ ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಕೆಲವು ಹೊರಗಿನ ಜನರು ಅಲ್ಲಿಗೆ ಬಂದಿದ್ದು, ನಂತರ ಘರ್ಷಣೆ ಉಂಟಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ದೀಪಕ್ ಕುಮಾರ್ ಮಂಗಳವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದ್ದು, ರೈತರು ರಕ್ತದಲ್ಲಿ ಮುಳುಗಿರುವ ದೃಶ್ಯಗಳು ಮತ್ತು ಚಿತ್ರಗಳು ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ‘ಶ್ರಮಜೀವಿಗಳು, ವೈರಾಗ್ಯ ಮತ್ತು ಮತಧರ್ಮ’: ‘ಜರ್ಮನ್ ರೈತ ಯುದ್ಧ’ ಪುಸ್ತಕದ ಆಯ್ದ ಭಾಗ

“ಆಸ್ಪತ್ರೆಗೆ ಕನಿಷ್ಠ 47 ಗಾಯಗೊಂಡ ಜನರು ದಾಖಲಾಗಿದ್ದಾರೆ” ಎಂದು ಕಾಸ್ಗಂಜ್‌ನ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಎಪಿ ಕಿಶೋರ್ ಹೇಳಿದ್ದಾರೆ. ಗಾಯಗೊಂಡ ಪ್ರಕರಣಗಳ ಸಂಖ್ಯೆ 100 ಕ್ಕಿಂತ ಹೆಚ್ಚು ಎಂದು ರೈತರೊಬ್ಬರು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಪಿ. ಸಿಂಗ್ ಮತ್ತು ಪಕ್ಷದ ಕಿಸಾನ್ ಮೋರ್ಚಾ ಜಿಲ್ಲಾ ಮುಖ್ಯಸ್ಥ ದೇವೇಂದ್ರ ಸಿಂಗ್ ಲೋಧಿ ನೇತೃತ್ವದ ಜನರ ಗುಂಪು ಪೊಲೀಸ್ ಠಾಣೆಯೊಳಗೆ ರೈತರ ಮೇಲೆ ಲಾಠಿ ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಬಿಕೆಯು (ಸ್ವರಾಜ್) ರಾಷ್ಟ್ರೀಯ ಅಧ್ಯಕ್ಷ ಕುಲದೀಪ್ ಪಾಂಡೆ ಹೇಳಿದ್ದಾರೆ.

“100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುಮಾರು 40 ರೈತರಿಗೆ ತಲೆಗೆ ಗಾಯಗಳು ಉಂಟಾಗಿವೆ. ಕೆಲವರು ಕಾಸ್ಗಂಜ್‌ನಲ್ಲಿ ಚಿಕಿತ್ಸೆ ಪಡೆದಿದ್ದು, ಇತರರನ್ನು ಅಲಿಗಢಕ್ಕೆ ಕಳುಹಿಸಲಾಗಿದೆ” ಎಂದು ಕುಲದೀಪ್‌ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ಒಟ್ಟು ಮೂರು ಎಫ್‌ಐಆರ್‌ಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇದರಲ್ಲಿ 52 ಜನರನ್ನು ಗುರುತಿಸಲಾಗಿದ್ದು, 150 ಅಪರಿಚಿತ ರೈತರನ್ನು ಹೆಸರಿಸಲಾಗಿದೆ.

ಮತ್ತೊಂದು ಎಫ್‌ಐಆರ್ ಅನ್ನು ಬಿಜೆಪಿ ನಾಯಕ ಲೋಧಿ ಅವರು ಯೂನಿಯನ್ ಮುಖಂಡರು ಮತ್ತು 50 ಅಪರಿಚಿತರ ವಿರುದ್ಧ ದಾಖಲಿಸಿದ್ದಾರೆ. ಬಿಜೆಪಿಯ ಕೆ.ಪಿ. ಸಿಂಗ್, ಲೋಧಿ ಮತ್ತು ಇತರ 150 ಜನರ ವಿರುದ್ಧ ಬಿಕೆಯು (ಸ್ವರಾಜ್) ದೂರಿನ ಮೇರೆಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ.

ಬಿಕೆಯು (ಸ್ವರಾಜ್ಯ) ಮುಖಂಡ ಸುಜೀತ್ ಸತ್ಯದರ್ಶಿ ಮಾತನಾಡಿ, “ರೈತರ ಮೇಲಿನ ಹಲ್ಲೆ ಪೂರ್ವ ಯೋಜಿತವಾಗಿತ್ತು. ಬೆಳಗ್ಗೆಯಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದೆವು. ಸಂಜೆ ವೇಳೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ನಂತರ ಬಿಜೆಪಿ ಸದಸ್ಯರು ಪೊಲೀಸ್ ಠಾಣೆ ಮತ್ತು ನಮ್ಮ ಮೇಲೆ ದಾಳಿ ನಡೆಸಿದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭರವಸೆಯಲ್ಲೇ ಉಳಿದ ‘ರೈತಮಿತ್ರ’ ನೇಮಕಾತಿ; ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

“ಅಷ್ಟೆಲ್ಲೆ, ಪೊಲೀಸರು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಲಾಠಿಚಾರ್ಜ್ ಮಾಡಿದರು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯ ಪೊಲೀಸರೊಂದಿಗೆ ಸೇರಿ ಪ್ರತಿಭಟನಾ ಸ್ಥಳದ ಬಳಿಯ ರಸ್ತೆಯಲ್ಲಿ ರೈತರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸುಜೀತ್‌ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಕಾಸ್‌ಗಂಜ್‌‌ ಎಸ್‌ಪಿ ಬಿಬಿಜಿಟಿಎಸ್‌ ಮೂರ್ತಿ,‘‘ರೈತ ಸಂಘಕ್ಕೆ ಸಂಬಂಧಿಸಿದವರು ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದರು. ಹಲವು ಬಾರಿ ಮನವೊಲಿಸಲು ಯತ್ನಿಸಿದರೂ ಪ್ರತಿಭಟನೆ ಕೈಬಿಡಲಿಲ್ಲ. ಸಂಜೆ ವೇಳೆಗೆ ಅವರು ಸ್ಥಳೀಯ ನಿವಾಸಿಗಳ ಗುಂಪಿನೊಂದಿಗೆ ವಾಗ್ವಾದ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪರಸ್ಪರ ಹಲ್ಲೆ ನಡೆಸುತ್ತಿರುವ ಜನರ ಮೇಲೆ ಲಾಠಿ ಚಾರ್ಜ್ ಮಾಡಬೇಕಾಯಿತು. ಸಂಪೂರ್ಣ ವಿಷಯವನ್ನು ವಿವರವಾಗಿ ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ” ಎಂದು ಹೇಳಿದ್ದಾರೆ.

“ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 47 ಜನರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಅವರಲ್ಲಿ ಹದಿನಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅಲಿಘರ್‌ನಲ್ಲಿರುವ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದು ಸಿಎಂಒ ಕಿಶೋರ್ ತಿಳಿಸಿದ್ದಾರೆ.

ಇದನ್ನೂ ಓದಿ: ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

“ರೈತ ಸಂಘದ ಕುಲದೀಪ್ ಪಾಂಡೆ ಅವರು ನಕಲಿ ರೈತ ಸಂಘವನ್ನು ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಅವರು ಮಾಡಿರುವ ಆರೋಪಗಳು ತಪ್ಪು” ಎಂದು ಬಿಜೆಪಿ ನಾಯಕ ಕೆ.ಪಿ. ಸಿಂಗ್ ಹೇಳಿದ್ದಾರೆ. “ಕುಲದೀಪ್ ವಿರುದ್ಧ 28 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವರು ಸುಲಿಗೆಕೋರರಾಗಿದ್ದು, ರೈತರ ಹಿತಾಸಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಕಾಸ್‌ಗಂಜ್‌ ಶಾಸಕ ದೇವೇಂದ್ರ ಸಿಂಗ್ ರಜಪೂ‌ತ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...