Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ...

ಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯ ಬಿಜೆಪಿ ನಾಯಕರ ನೇತೃತ್ವದ ಗುಂಪು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಘಟನೆಯ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಸುಮಾರು 400ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯು ಸೋಮವಾರ ರಾತ್ರಿ ನಡೆದಿದ್ದು, ಕಾಸ್‌ಗಂಜ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಭೂದೇವ್ ಅವರು ಗ್ರಾಮ ಪ್ರಧಾನ್ ಮೂಲಕ ರೈತರೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಇದನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ (ಸ್ವರಾಜ್) ರೈತ ಸಂಘದ ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಕೆಲವು ಹೊರಗಿನ ಜನರು ಅಲ್ಲಿಗೆ ಬಂದಿದ್ದು, ನಂತರ ಘರ್ಷಣೆ ಉಂಟಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ದೀಪಕ್ ಕುಮಾರ್ ಮಂಗಳವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದ್ದು, ರೈತರು ರಕ್ತದಲ್ಲಿ ಮುಳುಗಿರುವ ದೃಶ್ಯಗಳು ಮತ್ತು ಚಿತ್ರಗಳು ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ‘ಶ್ರಮಜೀವಿಗಳು, ವೈರಾಗ್ಯ ಮತ್ತು ಮತಧರ್ಮ’: ‘ಜರ್ಮನ್ ರೈತ ಯುದ್ಧ’ ಪುಸ್ತಕದ ಆಯ್ದ ಭಾಗ

“ಆಸ್ಪತ್ರೆಗೆ ಕನಿಷ್ಠ 47 ಗಾಯಗೊಂಡ ಜನರು ದಾಖಲಾಗಿದ್ದಾರೆ” ಎಂದು ಕಾಸ್ಗಂಜ್‌ನ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಎಪಿ ಕಿಶೋರ್ ಹೇಳಿದ್ದಾರೆ. ಗಾಯಗೊಂಡ ಪ್ರಕರಣಗಳ ಸಂಖ್ಯೆ 100 ಕ್ಕಿಂತ ಹೆಚ್ಚು ಎಂದು ರೈತರೊಬ್ಬರು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಪಿ. ಸಿಂಗ್ ಮತ್ತು ಪಕ್ಷದ ಕಿಸಾನ್ ಮೋರ್ಚಾ ಜಿಲ್ಲಾ ಮುಖ್ಯಸ್ಥ ದೇವೇಂದ್ರ ಸಿಂಗ್ ಲೋಧಿ ನೇತೃತ್ವದ ಜನರ ಗುಂಪು ಪೊಲೀಸ್ ಠಾಣೆಯೊಳಗೆ ರೈತರ ಮೇಲೆ ಲಾಠಿ ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಬಿಕೆಯು (ಸ್ವರಾಜ್) ರಾಷ್ಟ್ರೀಯ ಅಧ್ಯಕ್ಷ ಕುಲದೀಪ್ ಪಾಂಡೆ ಹೇಳಿದ್ದಾರೆ.

“100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುಮಾರು 40 ರೈತರಿಗೆ ತಲೆಗೆ ಗಾಯಗಳು ಉಂಟಾಗಿವೆ. ಕೆಲವರು ಕಾಸ್ಗಂಜ್‌ನಲ್ಲಿ ಚಿಕಿತ್ಸೆ ಪಡೆದಿದ್ದು, ಇತರರನ್ನು ಅಲಿಗಢಕ್ಕೆ ಕಳುಹಿಸಲಾಗಿದೆ” ಎಂದು ಕುಲದೀಪ್‌ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ಒಟ್ಟು ಮೂರು ಎಫ್‌ಐಆರ್‌ಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇದರಲ್ಲಿ 52 ಜನರನ್ನು ಗುರುತಿಸಲಾಗಿದ್ದು, 150 ಅಪರಿಚಿತ ರೈತರನ್ನು ಹೆಸರಿಸಲಾಗಿದೆ.

ಮತ್ತೊಂದು ಎಫ್‌ಐಆರ್ ಅನ್ನು ಬಿಜೆಪಿ ನಾಯಕ ಲೋಧಿ ಅವರು ಯೂನಿಯನ್ ಮುಖಂಡರು ಮತ್ತು 50 ಅಪರಿಚಿತರ ವಿರುದ್ಧ ದಾಖಲಿಸಿದ್ದಾರೆ. ಬಿಜೆಪಿಯ ಕೆ.ಪಿ. ಸಿಂಗ್, ಲೋಧಿ ಮತ್ತು ಇತರ 150 ಜನರ ವಿರುದ್ಧ ಬಿಕೆಯು (ಸ್ವರಾಜ್) ದೂರಿನ ಮೇರೆಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ.

ಬಿಕೆಯು (ಸ್ವರಾಜ್ಯ) ಮುಖಂಡ ಸುಜೀತ್ ಸತ್ಯದರ್ಶಿ ಮಾತನಾಡಿ, “ರೈತರ ಮೇಲಿನ ಹಲ್ಲೆ ಪೂರ್ವ ಯೋಜಿತವಾಗಿತ್ತು. ಬೆಳಗ್ಗೆಯಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದೆವು. ಸಂಜೆ ವೇಳೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ನಂತರ ಬಿಜೆಪಿ ಸದಸ್ಯರು ಪೊಲೀಸ್ ಠಾಣೆ ಮತ್ತು ನಮ್ಮ ಮೇಲೆ ದಾಳಿ ನಡೆಸಿದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭರವಸೆಯಲ್ಲೇ ಉಳಿದ ‘ರೈತಮಿತ್ರ’ ನೇಮಕಾತಿ; ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

“ಅಷ್ಟೆಲ್ಲೆ, ಪೊಲೀಸರು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಲಾಠಿಚಾರ್ಜ್ ಮಾಡಿದರು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯ ಪೊಲೀಸರೊಂದಿಗೆ ಸೇರಿ ಪ್ರತಿಭಟನಾ ಸ್ಥಳದ ಬಳಿಯ ರಸ್ತೆಯಲ್ಲಿ ರೈತರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸುಜೀತ್‌ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಕಾಸ್‌ಗಂಜ್‌‌ ಎಸ್‌ಪಿ ಬಿಬಿಜಿಟಿಎಸ್‌ ಮೂರ್ತಿ,‘‘ರೈತ ಸಂಘಕ್ಕೆ ಸಂಬಂಧಿಸಿದವರು ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದರು. ಹಲವು ಬಾರಿ ಮನವೊಲಿಸಲು ಯತ್ನಿಸಿದರೂ ಪ್ರತಿಭಟನೆ ಕೈಬಿಡಲಿಲ್ಲ. ಸಂಜೆ ವೇಳೆಗೆ ಅವರು ಸ್ಥಳೀಯ ನಿವಾಸಿಗಳ ಗುಂಪಿನೊಂದಿಗೆ ವಾಗ್ವಾದ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪರಸ್ಪರ ಹಲ್ಲೆ ನಡೆಸುತ್ತಿರುವ ಜನರ ಮೇಲೆ ಲಾಠಿ ಚಾರ್ಜ್ ಮಾಡಬೇಕಾಯಿತು. ಸಂಪೂರ್ಣ ವಿಷಯವನ್ನು ವಿವರವಾಗಿ ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ” ಎಂದು ಹೇಳಿದ್ದಾರೆ.

“ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 47 ಜನರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಅವರಲ್ಲಿ ಹದಿನಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅಲಿಘರ್‌ನಲ್ಲಿರುವ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದು ಸಿಎಂಒ ಕಿಶೋರ್ ತಿಳಿಸಿದ್ದಾರೆ.

ಇದನ್ನೂ ಓದಿ: ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

“ರೈತ ಸಂಘದ ಕುಲದೀಪ್ ಪಾಂಡೆ ಅವರು ನಕಲಿ ರೈತ ಸಂಘವನ್ನು ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಅವರು ಮಾಡಿರುವ ಆರೋಪಗಳು ತಪ್ಪು” ಎಂದು ಬಿಜೆಪಿ ನಾಯಕ ಕೆ.ಪಿ. ಸಿಂಗ್ ಹೇಳಿದ್ದಾರೆ. “ಕುಲದೀಪ್ ವಿರುದ್ಧ 28 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವರು ಸುಲಿಗೆಕೋರರಾಗಿದ್ದು, ರೈತರ ಹಿತಾಸಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಕಾಸ್‌ಗಂಜ್‌ ಶಾಸಕ ದೇವೇಂದ್ರ ಸಿಂಗ್ ರಜಪೂ‌ತ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...