Homeಮುಖಪುಟಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ

ಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ

- Advertisement -
- Advertisement -

ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ 30 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಗುಂಡೇಟಿನಿಂದ ಈ ವ್ಯಕ್ತಿ ಮೃತಪಟ್ಟಿದ್ದು, ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ಸಚಿವರ ಪುತ್ರ ವಿಕಾಸ್ ಕಿಶೋರ್ ಅವರದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪಶ್ಚಿಮ ಲಕ್ನೋದ ಉಪ ಪೊಲೀಸ್ ಆಯುಕ್ತ ರಾಹುಲ್ ರಾಜ್, ”ಮೃತರನ್ನು ವಿನಯ್ ಶ್ರೀವಾಸ್ತವ ಎಂದು ಗುರುತಿಸಲಾಗಿದ್ದು, ಇವರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಈ ಘಟನೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಡಿಸಿಪಿ, ”ವಿನಯ್ ಶ್ರೀವಾಸ್ತವ್ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ವಿಕಾಸ್ ಕಿಶೋರ್ ಅವರಿಗೆ ಸೇರಿದ ಪಿಸ್ತೂಲ್‌ನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

”ವಿಧಿವಿಜ್ಞಾನ ತಂಡ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ” ಎಂದು ತಿಳಿಸಿದರು.

ಮೃತರ ಸಹೋದರ ಮಾತನಾಡಿದ್ದು, ”ಇದು ಆತ್ಮಹತ್ಯೆಯಲ್ಲ ಕೊಲೆ ನಡೆದಿದೆ. ವಿನಯ್ ಅವರ ಶರ್ಟ್ ಹರಿದಿದ್ದು, ಸ್ಥಳದಲ್ಲಿದ್ದ ಜನರ ನಡುವೆ ಜಗಳವಾಗಿದೆ” ಎಂದು ಹೇಳಿದ್ದಾರೆ.

”ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ನನ್ನ ಸಹೋದರ ವಿನಯ್ ಶ್ರೀವಾಸ್ತವ್ ಅವರನ್ನು ಹತ್ಯೆ ಮಾಡಲಾಗಿದೆ. ನನ್ನ ಸಹೋದರ ಮತ್ತು ಸಚಿವರ ಮಗ ವಿಕಾಸ್ ಕಿಶೋರ್ ಇಬ್ಬರೂ ಸ್ನೇಹಿತರಾಗಿದ್ದರು. ಈ ಘಟನೆ ನಡೆದಾಗ ಮೂವರು ಇದ್ದರು ಆದರೆ ವಿಕಾಸ್ ಈಗ ಎಲ್ಲಿ ಹೋಗಿದ್ದಾನೆ ಎಂದು ನನಗೆ ಗೊತ್ತಿಲ್ಲ. ಪೊಲೀಸರು ಅವರ ಪರವಾನಗಿ ಪಡೆದ ರಿವಾಲ್ವರ್ ವಶಪಡಿಸಿಕೊಂಡಿದ್ದಾರೆ” ಎಂದು ಮೃತನ ಸಹೋದರ ಹೇಳಿದರು.

ಈ ಬಗ್ಗೆ ಪೊಲೀಸರು ಮಾತನಾಡಿದ್ದು, ”ಪ್ರಕರಣದ ತನಿಖೆ ನಡೆಸುತ್ತಿದ್ದೇವೆ, ಇದರಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಕೌಶಲ್ ಕಿಶೋರ್ ಅವರು, ”ಈ ಘಟನೆ ನಡೆದ ಸಮಯದಲ್ಲಿ ನನ್ನ ಮಗ ಮನೆಯಲ್ಲಿ ಇರಲಿಲ್ಲ” ಎಂದು ಕೌಶಲ್ ಕಿಶೋರ್ ಹೇಳಿದ್ದಾರೆ.

”ಈ ವಿಷಯ ತಿಳಿದ ವಿಕಾಸ್ ತುಂಬಾ ದುಃಖಿತನಾಗಿದ್ದ, ಮೃತ ವಿನಯ್ ನನ್ನ ಮಗನಿಗೆ ತುಂಬಾ ಒಳ್ಳೆಯ ಸ್ನೇಹಿತ” ಎಂದು ತಿಳಿಸಿದ್ದಾರೆ.

”ಅದು ತನ್ನ ಮಗ ವಿಕಾಸ್‌ನ ಪಿಸ್ತೂಲ್‌, ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ, ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಸಂಸದರು ಹೇಳಿದ್ದಾರೆ.

ಇದನ್ನೂ ಓದಿ: 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...