Homeಸಿನಿಮಾಕ್ರೀಡೆಮಥುರಾ: ರೈಲು ಹಳಿ ಮೇಲೆ PUBG ಆಡುತ್ತಿದ್ದ ಇಬ್ಬರು ಬಾಲಕರ ದಾರುಣ ಸಾವು

ಮಥುರಾ: ರೈಲು ಹಳಿ ಮೇಲೆ PUBG ಆಡುತ್ತಿದ್ದ ಇಬ್ಬರು ಬಾಲಕರ ದಾರುಣ ಸಾವು

- Advertisement -
- Advertisement -

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಲಕ್ಷ್ಮಿನಗರ ಪ್ರದೇಶದಲ್ಲಿ ರೈಲು ಕಂಬಿಗಳ ಮೇಲೆ ಕುಳಿತು ಮೊಬೈಲ್ ಫೋನ್‌ಗಳಲ್ಲಿ PUBG ಆಡುತ್ತಿದ್ದ ಇಬ್ಬರು ಬಾಲಕರ ಮೇಲೆ ರೈಲು ಹರಿದು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕರನ್ನು ಗುರುನಾನಕ್ ದೇವ್ ಪಬ್ಲಿಕ್ ಸ್ಕೂಲ್‌ನ ಹತ್ತನೇ ತರಗತಿಯ ವಿದ್ಯಾರ್ಥಿ ಗೌರವ್ ಕುಮಾರ್ (14) ಮತ್ತು ನೆರೆಯ ಬಿಜಿಬಿ ಬ್ರಜ್ ಎಜುಕೇಶನ್ ಅಕಾಡೆಮಿ ಸೀನಿಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಕಪಿಲ್ ಕುಮಾರ್ (14) ಎಂದು ಗುರುತಿಸಲಾಗಿದೆ.

ಇಬ್ಬರೂ ವಿದ್ಯಾರ್ಥಿಗಳು ಬೆಳಿಗ್ಗೆ ವಾಕಿಂಗ್‌ಗೆ ಹೋಗಿದ್ದರು. ಆದರೆ ರೈಲು ಹಳಿಗಳ ಮೇಲೆ ಕುಳಿತು ಅವರು ತಮ್ಮ ಮೊಬೈಲ್‌ನಲ್ಲಿ PUBG ಆಡುವುದರಲ್ಲಿ ತೊಡಗಿದ್ದರು. ಇಬ್ಬರು ಆಟ ಆಡುವುದರಲ್ಲಿ ಮೈಮರೆತಿದ್ದರು ಎಂದು ಜಮುನಾ ಪಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ತಿಳಿಸಿದ್ದಾರೆ.

ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಮಥುರಾ ಕಂಟೋನ್ಮೆಂಟ್ ಮತ್ತು ರಾಯಾ ನಿಲ್ದಾಣಗಳ ನಡುವಿನ ಅಪಘಾತ ಸ್ಥಳದಲ್ಲಿ ಎರಡೂ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಒಂದು ಫೋನ್ ಹಾನಿಗೊಳಗಾಗಿದ್ದರೆ, ಮತ್ತೊಂದರಲ್ಲಿ PUBG ಆಟ ನಡೆಯುತ್ತಿತ್ತು. ಅಪಘಾತ ಸಂಭವಿಸಿದಾಗ ಯಾವ ರೈಲು ಹಾದುಹೋಗಿದೆ ಎಂದು ನಮಗೆ ನಿಖರವಾಗಿ ತಿಳಿದಿಲ್ಲ ಎಂದು ಎಂದು ಜಮುನಾಪರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಶಶಿ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.

“ಈ ಆನ್‌ಲೈನ್ ಆಟದ ಬಗ್ಗೆ ನಮಗೆ ಯಾವುದೇ ಕಲ್ಪನೆ ಕೂಡ ಇಲ್ಲ. ನನಗೆ ಅದರ ಬಗ್ಗೆ ತಿಳಿದಿದ್ದರೆ, ನಾನು ಆತನಿಗೆ ಎಂದಿಗೂ ಮೊಬೈಲ್ ಫೋನ್ ಕೊಡುತ್ತಿರಲಿಲ್ಲ ”ಎಂದು ಹಾಸಿಗೆ ವ್ಯಾಪಾರ ನಡೆಸುತ್ತಿರುವ ಕಪಿಲ್ ತಂದೆ ಸಂಜಯ್ ಕುಮಾರ್ ಹೇಳಿದ್ದಾರೆ.

PlayerUnknown’s Battlegrounds ಅನ್ನು ಜನಪ್ರಿಯವಾಗಿ PUBG ಎಂದು ಕರೆಯಲಾಗುತ್ತದೆ. ಇದು ಆನ್‌ಲೈನ್ ಮಲ್ಟಿಪ್ಲೇಯರ್ ಆಟವಾಗಿದೆ. ಈ ಆಟವು ಹೆಚ್ಚು ವ್ಯಸನಕಾರಿಯಾಗಿದೆ ಮತ್ತು ಇದನ್ನು ಆಡುವವರಲ್ಲಿ ಹಿಂಸಾತ್ಮಕ ನಡವಳಿಕೆಯನ್ನು ಉಂಟುಮಾಡಬಹುದು ಎಂದು ತಜ್ಞರು ಹೇಳುತ್ತಾರೆ.

PUBG ಆಟವನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿದೆ. ಆದರೂ ಕೂಡ ಬೇರೆ ಬೇರೆ ಮಾರ್ಗಗಳ ಮೂಲಕ ಯುವಜನತೆ ಪಬ್ಜಿ ಆಡುತ್ತಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...