Homeಸಿನಿಮಾಕ್ರೀಡೆಮಥುರಾ: ರೈಲು ಹಳಿ ಮೇಲೆ PUBG ಆಡುತ್ತಿದ್ದ ಇಬ್ಬರು ಬಾಲಕರ ದಾರುಣ ಸಾವು

ಮಥುರಾ: ರೈಲು ಹಳಿ ಮೇಲೆ PUBG ಆಡುತ್ತಿದ್ದ ಇಬ್ಬರು ಬಾಲಕರ ದಾರುಣ ಸಾವು

- Advertisement -
- Advertisement -

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಲಕ್ಷ್ಮಿನಗರ ಪ್ರದೇಶದಲ್ಲಿ ರೈಲು ಕಂಬಿಗಳ ಮೇಲೆ ಕುಳಿತು ಮೊಬೈಲ್ ಫೋನ್‌ಗಳಲ್ಲಿ PUBG ಆಡುತ್ತಿದ್ದ ಇಬ್ಬರು ಬಾಲಕರ ಮೇಲೆ ರೈಲು ಹರಿದು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕರನ್ನು ಗುರುನಾನಕ್ ದೇವ್ ಪಬ್ಲಿಕ್ ಸ್ಕೂಲ್‌ನ ಹತ್ತನೇ ತರಗತಿಯ ವಿದ್ಯಾರ್ಥಿ ಗೌರವ್ ಕುಮಾರ್ (14) ಮತ್ತು ನೆರೆಯ ಬಿಜಿಬಿ ಬ್ರಜ್ ಎಜುಕೇಶನ್ ಅಕಾಡೆಮಿ ಸೀನಿಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಕಪಿಲ್ ಕುಮಾರ್ (14) ಎಂದು ಗುರುತಿಸಲಾಗಿದೆ.

ಇಬ್ಬರೂ ವಿದ್ಯಾರ್ಥಿಗಳು ಬೆಳಿಗ್ಗೆ ವಾಕಿಂಗ್‌ಗೆ ಹೋಗಿದ್ದರು. ಆದರೆ ರೈಲು ಹಳಿಗಳ ಮೇಲೆ ಕುಳಿತು ಅವರು ತಮ್ಮ ಮೊಬೈಲ್‌ನಲ್ಲಿ PUBG ಆಡುವುದರಲ್ಲಿ ತೊಡಗಿದ್ದರು. ಇಬ್ಬರು ಆಟ ಆಡುವುದರಲ್ಲಿ ಮೈಮರೆತಿದ್ದರು ಎಂದು ಜಮುನಾ ಪಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ತಿಳಿಸಿದ್ದಾರೆ.

ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಮಥುರಾ ಕಂಟೋನ್ಮೆಂಟ್ ಮತ್ತು ರಾಯಾ ನಿಲ್ದಾಣಗಳ ನಡುವಿನ ಅಪಘಾತ ಸ್ಥಳದಲ್ಲಿ ಎರಡೂ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಒಂದು ಫೋನ್ ಹಾನಿಗೊಳಗಾಗಿದ್ದರೆ, ಮತ್ತೊಂದರಲ್ಲಿ PUBG ಆಟ ನಡೆಯುತ್ತಿತ್ತು. ಅಪಘಾತ ಸಂಭವಿಸಿದಾಗ ಯಾವ ರೈಲು ಹಾದುಹೋಗಿದೆ ಎಂದು ನಮಗೆ ನಿಖರವಾಗಿ ತಿಳಿದಿಲ್ಲ ಎಂದು ಎಂದು ಜಮುನಾಪರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಶಶಿ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.

“ಈ ಆನ್‌ಲೈನ್ ಆಟದ ಬಗ್ಗೆ ನಮಗೆ ಯಾವುದೇ ಕಲ್ಪನೆ ಕೂಡ ಇಲ್ಲ. ನನಗೆ ಅದರ ಬಗ್ಗೆ ತಿಳಿದಿದ್ದರೆ, ನಾನು ಆತನಿಗೆ ಎಂದಿಗೂ ಮೊಬೈಲ್ ಫೋನ್ ಕೊಡುತ್ತಿರಲಿಲ್ಲ ”ಎಂದು ಹಾಸಿಗೆ ವ್ಯಾಪಾರ ನಡೆಸುತ್ತಿರುವ ಕಪಿಲ್ ತಂದೆ ಸಂಜಯ್ ಕುಮಾರ್ ಹೇಳಿದ್ದಾರೆ.

PlayerUnknown’s Battlegrounds ಅನ್ನು ಜನಪ್ರಿಯವಾಗಿ PUBG ಎಂದು ಕರೆಯಲಾಗುತ್ತದೆ. ಇದು ಆನ್‌ಲೈನ್ ಮಲ್ಟಿಪ್ಲೇಯರ್ ಆಟವಾಗಿದೆ. ಈ ಆಟವು ಹೆಚ್ಚು ವ್ಯಸನಕಾರಿಯಾಗಿದೆ ಮತ್ತು ಇದನ್ನು ಆಡುವವರಲ್ಲಿ ಹಿಂಸಾತ್ಮಕ ನಡವಳಿಕೆಯನ್ನು ಉಂಟುಮಾಡಬಹುದು ಎಂದು ತಜ್ಞರು ಹೇಳುತ್ತಾರೆ.

PUBG ಆಟವನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿದೆ. ಆದರೂ ಕೂಡ ಬೇರೆ ಬೇರೆ ಮಾರ್ಗಗಳ ಮೂಲಕ ಯುವಜನತೆ ಪಬ್ಜಿ ಆಡುತ್ತಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...