Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

- Advertisement -
- Advertisement -

ಉತ್ತರ ಪ್ರದೇಶ ಜಿಲ್ಲೆಯ ಸಹರನಪುರ ಜಿಲ್ಲೆಯಲ್ಲಿ ನಾಚಿಕೆಗೇಡಿನ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಹೋಳಿಹಬ್ಬದಂದು ದಲಿತ ಯುವಕನಿಗೆ ಹಣೆಯ ಮೇಲೆ ತ್ರಿಶೂಲ ಹಾಗೂ ಓಂ ಎಂದು ಬರೆದು ಚಿತ್ರಹಿಂಸೆ ನೀಡಲಾಗಿದೆ. ಆ್ಯಸಿಡ್‌‌ನಿಂದ ಚಿತ್ರ ಬರೆಯಲಾಗಿದೆ ಎಂದು ಆರೋಪಿಸಲಾಗಿದೆ.

ವೈನ್ ಗ್ಲಾಸ್ ಬಿದ್ದಿದ್ದರಿಂದ ಮೇಲ್ಜಾತಿ ಯುವಕರು ದಲಿತನನ್ನು ಥಳಿಸಿದ್ದು ಮಾತ್ರವಲ್ಲದೆ ಹಣೆಯ ಮೇಲೆ ಆ್ಯಸಿಡ್ ಎರಚಿದ್ದಾರೆ. ಅಷ್ಟೇ ಅಲ್ಲ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಸಂತ್ರಸ್ತ ಯುವಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಹಣದ ವಿಚಾರವಾಗಿ ಗಲಾಟೆ ನಡೆದಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಠಾಣಾ ಸದರ್ ಬಜಾರ್ ವ್ಯಾಪ್ತಿಯ ಕಾನ್ಶಿರಾಂ ಕಾಲೋನಿ ನಿವಾಸಿ ದಲಿತ ಯುವಕ ಆದೇಶ್ ಅವರು ಕೃಷ್ಣಾಪುರಿ ಕಾಲೋನಿ ಬಳಿ ಕಟ್ಟಡ ಅಡಿಪಾಯದ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಹೋಳಿ ದಿನದಂದು ವಿಶಾಲ್ ರಾಣಾ ಎಂಬ ಸವರ್ಣಿಯ ಯುವಕ ಫೋನ್ ಕರೆ ಮಾಡಿ ಕರೆಸಿಕೊಂಡಿದ್ದಾಗಿ ಆದೇಶ್‌ ತಿಳಿಸಿದ್ದಾರೆ. ವಿಶಾಲ್ ವೈನ್ ಗ್ಲಾಸ್ ಕ್ಲೀನ್ ಮಾಡಲು ಹೇಳಿದ್ದಾಗಿ ಆದೇಶ್ ತಿಳಿಸಿದ್ದಾರೆ. ಗ್ಲಾಸ್ ತೊಳೆದ ನಂತರ ನೀರು ತರುವಾಗ ವೈನ್ ತುಂಬಿದ ಲೋಟ ಸವರ್ಣೀಯ ಯುವಕನ ಕಾಲಿನ ಮೇಲೆ ಬಿದ್ದಿದೆ. ಇದರಿಂದ ಸಿಟ್ಟಾದ ವಿಶಾಲ್ ಮತ್ತು ಆತನ ಜೊತೆಗಾರ ಟಿಂಕು ನನಗೆ ಥಳಿಸಲು ಆರಂಭಿಸಿದರು ಎಂದು ಆದೇಶ್ ದೂರಿದ್ದಾರೆ.

4 ಯುವಕರು ಆದೇಶ್‌ನ ಕೈಕಾಲು ಹಿಡಿದುಕೊಂಡಿದ್ದರು. ಇದರ ನಂತರ ವಿಶಾಲ್ ಮತ್ತು ಟಿಂಕು ದಲಿತ ಯುವಕನ ಹಣೆಯ ಮೇಲೆ ಆಸಿಡ್‌ನಿಂದ ತ್ರಿಶೂಲ ಬರೆದಿದ್ದಾರೆ. ಹೇಗೋ ಅವರಿಂದ ತಪ್ಪಿಸಿಕೊಂಡು ಹೊರಬಂದು ಆದೇಶ್‌ ಮನೆಗೆ ತಲುಪಿದ್ದು ಕಷ್ಟವನ್ನು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದಾದ ಬಳಿಕ ಆದೇಶ್‌ ತನ್ನ ಸಂಬಂಧಿಕರೊಂದಿಗೆ ಸದರ್ ಬಜಾರ್ ತಲುಪಿದ್ದು, ತಪ್ಪಿತಸ್ತರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಆರೋಪಿ ಯುವಕರು ನಿರ್ಧಾರ ಕೈಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರಲ್ಲದೆ, ದೂರು ವಾಪಸ್ ಪಡೆಯದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂತ್ರಸ್ತೆ ಹೇಳುತ್ತಾರೆ.

ಸಂತ್ರಸ್ತ ಆದೇಶ್ ಮತ್ತು ಆರೋಪಿ ಯುವಕರು ಹೋಳಿ ದಿನದಂದು ಒಟ್ಟಿಗೆ ಮದ್ಯ ಸೇವಿಸಿದ್ದಾರೆ ಎಂದು ಎಸ್‌ಎಸ್‌ಪಿ ಆಕಾಶ್ ತೋಮರ್ ಹೇಳಿದ್ದಾರೆ. ಸಂತ್ರಸ್ತನ ಮೇಲೆಯೇ ಆರೋಪ ಹೊರಿಸುವ ಷಡ್ಯಂತ್ರಗಳು ನಡೆದಿವೆ ಎಂಬ ಆರೋಪಗಳು ಬಂದಿವೆ.

ವಿಶಾಲ್ ರಾಣಾ ಮತ್ತು ಟಿಂಕುವಿನ ಹಣವನ್ನು ಆದೇಶ್ ಎಂಬ ಯುವಕ ಪಾವತಿಸಬೇಕಾಗಿತ್ತು. ಹಣ ವಾಪಸ್ ನೀಡಲಾಗದೆ ಈ ರೀತಿ ದೂರಲಾಗುತ್ತಿದೆ ಎಂದು ಪ್ರಕರಣವನ್ನು ತಿರುಚಲು ಯತ್ನಿಸಲಾಗಿದೆ ಎಂಬ ಆರೋಪಗಳು ಬಂದಿವೆ. ದುಷ್ಕರ್ಮಿಗಳು ಆ್ಯಸಿಡ್ ಬಳಸಿದ್ದಾರೆಂಬುದನ್ನು ಅಲ್ಲಗಳೆದಿರುವ ಪೊಲೀಸರು, ರಾಸಾಯನಿಕದಿಂದ ಹಣೆಯ ಮೇಲೆ ಚಿತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...