Homeಮುಖಪುಟಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿವೆ. 15 ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರಿ ಬೃಹತ್ ವಿರೋಧ ಪಕ್ಷಗಳ ಒಕ್ಕೂಟ ಕಟ್ಟುವ ಕುರಿತು ಚರ್ಚೆ ನಡೆಸಿವೆ. ಆದರೆ ಆ ಮಹತ್ವದ ಸಭೆಗೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯವತಿಯವರನ್ನು ಆಹ್ವಾನಿಸಿರಲಿಲ್ಲ. 80 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಬಹುದೊಡ್ಡ ನಾಯಕಿಯಾಗಿದ್ದ, ನಾಲ್ಕು ಬಾರಿ ರಾಜ್ಯದ ಸಿಎಂ ಆಗಿದ್ದ ಮಾಯವತಿಯವರು ತಮ್ಮ ಹಿಂದಿನ ಗತವೈಭವಕ್ಕೆ ತೆರಳುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಬೂತ್ ಮಟ್ಟದಿಂದ ಚುನಾವಣಾ ತಯಾರಿ ಶುರು ಮಾಡಿರುವ ಅವರು ಸ್ವತಂತ್ರವಾಗಿ ಬಿಎಸ್‌ಪಿ ಲೋಕಸಭಾ ಚುನಾವಣೆ ಎದುರಿಸುತ್ತದೆ ಎಂದು ಘೋಷಿಸಿದ್ದರೂ ಸಹ ಕಡೆ ಕ್ಷಣದಲ್ಲಿ ಕಾಂಗ್ರೆಸ್ ಜೊತೆಗೂಡಿ ಚುನಾವಣೆ ಎದುರಿಸಲು ಯೋಚಿಸುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಅಂಕಣ ಪ್ರಕಟಿಸಿದೆ.

2004ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಿಎಸ್‌ಪಿ ಪಕ್ಷವು 80ರಲ್ಲಿ 19 ಸ್ಥಾನಗಳಲ್ಲಿ ಜಯ ಗಳಿಸಿತ್ತು. 2009ರಲ್ಲಿ ತೃತೀಯ ರಂಗದೊಂದಿಗೆ ಮೈತ್ರಿ ಮಾಡಿಕೊಂಡು 20 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ 2014ರಲ್ಲಿ ಬಿಎಸ್‌ಪಿ ಒಂದೂ ಸ್ಥಾನ ಗೆಲ್ಲದೆ ಧೂಳಿಪಟವಾಗಿತ್ತು. 2019ರಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಮಾಡಿಕೊಂಡು ಸಮಾಜವಾದಿ ಪಕ್ಷದ ಜೊತೆಗೂಡಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ.

ವಿಧಾನಸಭಾ ಚುನಾವಣೆಗಳಿಗೆ ಬಂದರೆ 2002ರಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ 98ರಲ್ಲಿ ಬಿಎಸ್‌ಪಿ ಜಯ ಗಳಿಸಿತ್ತು. 2007ರಲ್ಲಿ 206 ಸ್ಥಾನಗಳಲ್ಲಿ ಗೆದ್ದು ಸ್ವತಂತ್ರವಾಗಿ ಅಧಿಕಾರ ಹಿಡಿದಿತ್ತು. 2012ರಲ್ಲಿ 80 ಸ್ಥಾನಗಳಿಗೆ ಕುಸಿದ ಬಿಎಸ್‌ಪಿಯು 2017ರಲ್ಲಿ ಕೇವಲ 19 ಸ್ಥಾನಗಳಿಗೆ ಸೀಮತಗೊಂಡಿತ್ತು. 2022ರಲ್ಲಿ ಇನ್ನೂ ಕುಸಿದು ಕೇವಲ 1 ಸ್ಥಾನವನ್ನಷ್ಟೇ ಪಡೆದಿದೆ.

ತಮ್ಮ ಭಾಷಣಗಳಲ್ಲಿ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ಅನುಸರಿಸುವಂತೆ ನಮ್ಮ ನಾಯಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ. ಪಾಟ್ನಾ ಸಭೆಗೆ ಕೆಲವು ದಿನಗಳ ಮೊದಲು ಯುಪಿ ನಾಯಕರೊಂದಿಗಿನ ಸಭೆಯ ನಂತರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ, ಮಾಯಾವತಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ವಿರುದ್ಧ ವಾಗ್ದಾಳಿ ನಡೆಸಿದ್ದರು, ಆದರೆ ಕಾಂಗ್ರೆಸ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. “ಕಾಂಗ್ರೆಸ್ ವಿರುದ್ಧ ಬಲವಾದ ಪದಗಳಿಂದ ದಾಳಿ ಮಾಡಬೇಡಿ ಎಂದು ನಾಯಕರಿಗೆ ಅನೌಪಚಾರಿಕವಾಗಿ ತಿಳಿಸಲಾಗಿದೆ. ಭವಿಷ್ಯಕ್ಕಾಗಿ ಪಕ್ಷವು ಮೈತ್ರಿಯ ಆಯ್ಕೆಯನ್ನು ಮುಕ್ತವಾಗಿರಿಸಿಕೊಂಡಿದೆ ಎಂದು ಬಿಎಸ್ಪಿ ನಾಯಕರೊಬ್ಬರು ಹೇಳಿದರು.

ಬಿಎಸ್‌ಪಿ ಸಂಸದರೊಬ್ಬರು, “ಬಿಎಸ್‌ಪಿ ಕಾಂಗ್ರೆಸ್‌ಗೆ ಮೃದು ಧೋರಣೆ ತೋರುತ್ತಿದೆ. ಮತ್ತು ಈ ಆಯ್ಕೆಯನ್ನು ಸಹ ಅನ್ವೇಷಿಸಬೇಕು. 2024 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಮೈತ್ರಿ ಆಯ್ಕೆ ಎಂದು ಪರಿಗಣಿಸಬಹುದು” ಎಂದಿದ್ದಾರೆ.

ಆದರೆ ಮಾಯಾವತಿಯವರು ಈ ಬಗ್ಗೆ ಎನನ್ನೂ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಅವರು ವಿರೋಧ ಪಕ್ಷಗಳ ಐಕ್ಯತೆಯ ಪಾಟ್ನಾ ಸಭೆಯಿಂದ ದೂರ ಉಳಿದಿದ್ದಲ್ಲದೆ, ಮನಸ್ಸು ಒಂದಾಗದೇ ಕೇವಲ ಕೈಕುಲುಕಿದರೆ ಲಾಭವಿಲ್ಲ ಎಂದು ಟೀಕಿಸಿದ್ದರು. ಜೂನ್ 15 ರಂದು ಅವರು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಯಾವ ಮೈತ್ರಿಗಳು ಸಹ ನಿರೀಕ್ಷಿತ ಫಲಿತಾಂಶ ಪಡೆದಿಲ್ಲ. ಏಕೈಕ ಬಿಜೆಪಿ ಪಕ್ಷ ಮಾತ್ರ ಭರ್ಜರಿ ಫಲಿತಾಂಶ ಪಡೆದು ಸತತವಾಗಿ ಅಧಿಕಾರಿ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುತ್ತವೆಯೇ ಇಲ್ಲ ಮೈತ್ರಿಗೆ ಮುಂದಾಗುತ್ತವೆಯೇ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ: ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...