Homeಮುಖಪುಟಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿವೆ. 15 ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರಿ ಬೃಹತ್ ವಿರೋಧ ಪಕ್ಷಗಳ ಒಕ್ಕೂಟ ಕಟ್ಟುವ ಕುರಿತು ಚರ್ಚೆ ನಡೆಸಿವೆ. ಆದರೆ ಆ ಮಹತ್ವದ ಸಭೆಗೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯವತಿಯವರನ್ನು ಆಹ್ವಾನಿಸಿರಲಿಲ್ಲ. 80 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಬಹುದೊಡ್ಡ ನಾಯಕಿಯಾಗಿದ್ದ, ನಾಲ್ಕು ಬಾರಿ ರಾಜ್ಯದ ಸಿಎಂ ಆಗಿದ್ದ ಮಾಯವತಿಯವರು ತಮ್ಮ ಹಿಂದಿನ ಗತವೈಭವಕ್ಕೆ ತೆರಳುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಬೂತ್ ಮಟ್ಟದಿಂದ ಚುನಾವಣಾ ತಯಾರಿ ಶುರು ಮಾಡಿರುವ ಅವರು ಸ್ವತಂತ್ರವಾಗಿ ಬಿಎಸ್‌ಪಿ ಲೋಕಸಭಾ ಚುನಾವಣೆ ಎದುರಿಸುತ್ತದೆ ಎಂದು ಘೋಷಿಸಿದ್ದರೂ ಸಹ ಕಡೆ ಕ್ಷಣದಲ್ಲಿ ಕಾಂಗ್ರೆಸ್ ಜೊತೆಗೂಡಿ ಚುನಾವಣೆ ಎದುರಿಸಲು ಯೋಚಿಸುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಅಂಕಣ ಪ್ರಕಟಿಸಿದೆ.

2004ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಿಎಸ್‌ಪಿ ಪಕ್ಷವು 80ರಲ್ಲಿ 19 ಸ್ಥಾನಗಳಲ್ಲಿ ಜಯ ಗಳಿಸಿತ್ತು. 2009ರಲ್ಲಿ ತೃತೀಯ ರಂಗದೊಂದಿಗೆ ಮೈತ್ರಿ ಮಾಡಿಕೊಂಡು 20 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ 2014ರಲ್ಲಿ ಬಿಎಸ್‌ಪಿ ಒಂದೂ ಸ್ಥಾನ ಗೆಲ್ಲದೆ ಧೂಳಿಪಟವಾಗಿತ್ತು. 2019ರಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಮಾಡಿಕೊಂಡು ಸಮಾಜವಾದಿ ಪಕ್ಷದ ಜೊತೆಗೂಡಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ.

ವಿಧಾನಸಭಾ ಚುನಾವಣೆಗಳಿಗೆ ಬಂದರೆ 2002ರಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ 98ರಲ್ಲಿ ಬಿಎಸ್‌ಪಿ ಜಯ ಗಳಿಸಿತ್ತು. 2007ರಲ್ಲಿ 206 ಸ್ಥಾನಗಳಲ್ಲಿ ಗೆದ್ದು ಸ್ವತಂತ್ರವಾಗಿ ಅಧಿಕಾರ ಹಿಡಿದಿತ್ತು. 2012ರಲ್ಲಿ 80 ಸ್ಥಾನಗಳಿಗೆ ಕುಸಿದ ಬಿಎಸ್‌ಪಿಯು 2017ರಲ್ಲಿ ಕೇವಲ 19 ಸ್ಥಾನಗಳಿಗೆ ಸೀಮತಗೊಂಡಿತ್ತು. 2022ರಲ್ಲಿ ಇನ್ನೂ ಕುಸಿದು ಕೇವಲ 1 ಸ್ಥಾನವನ್ನಷ್ಟೇ ಪಡೆದಿದೆ.

ತಮ್ಮ ಭಾಷಣಗಳಲ್ಲಿ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ಅನುಸರಿಸುವಂತೆ ನಮ್ಮ ನಾಯಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ. ಪಾಟ್ನಾ ಸಭೆಗೆ ಕೆಲವು ದಿನಗಳ ಮೊದಲು ಯುಪಿ ನಾಯಕರೊಂದಿಗಿನ ಸಭೆಯ ನಂತರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ, ಮಾಯಾವತಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ವಿರುದ್ಧ ವಾಗ್ದಾಳಿ ನಡೆಸಿದ್ದರು, ಆದರೆ ಕಾಂಗ್ರೆಸ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. “ಕಾಂಗ್ರೆಸ್ ವಿರುದ್ಧ ಬಲವಾದ ಪದಗಳಿಂದ ದಾಳಿ ಮಾಡಬೇಡಿ ಎಂದು ನಾಯಕರಿಗೆ ಅನೌಪಚಾರಿಕವಾಗಿ ತಿಳಿಸಲಾಗಿದೆ. ಭವಿಷ್ಯಕ್ಕಾಗಿ ಪಕ್ಷವು ಮೈತ್ರಿಯ ಆಯ್ಕೆಯನ್ನು ಮುಕ್ತವಾಗಿರಿಸಿಕೊಂಡಿದೆ ಎಂದು ಬಿಎಸ್ಪಿ ನಾಯಕರೊಬ್ಬರು ಹೇಳಿದರು.

ಬಿಎಸ್‌ಪಿ ಸಂಸದರೊಬ್ಬರು, “ಬಿಎಸ್‌ಪಿ ಕಾಂಗ್ರೆಸ್‌ಗೆ ಮೃದು ಧೋರಣೆ ತೋರುತ್ತಿದೆ. ಮತ್ತು ಈ ಆಯ್ಕೆಯನ್ನು ಸಹ ಅನ್ವೇಷಿಸಬೇಕು. 2024 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಮೈತ್ರಿ ಆಯ್ಕೆ ಎಂದು ಪರಿಗಣಿಸಬಹುದು” ಎಂದಿದ್ದಾರೆ.

ಆದರೆ ಮಾಯಾವತಿಯವರು ಈ ಬಗ್ಗೆ ಎನನ್ನೂ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಅವರು ವಿರೋಧ ಪಕ್ಷಗಳ ಐಕ್ಯತೆಯ ಪಾಟ್ನಾ ಸಭೆಯಿಂದ ದೂರ ಉಳಿದಿದ್ದಲ್ಲದೆ, ಮನಸ್ಸು ಒಂದಾಗದೇ ಕೇವಲ ಕೈಕುಲುಕಿದರೆ ಲಾಭವಿಲ್ಲ ಎಂದು ಟೀಕಿಸಿದ್ದರು. ಜೂನ್ 15 ರಂದು ಅವರು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಯಾವ ಮೈತ್ರಿಗಳು ಸಹ ನಿರೀಕ್ಷಿತ ಫಲಿತಾಂಶ ಪಡೆದಿಲ್ಲ. ಏಕೈಕ ಬಿಜೆಪಿ ಪಕ್ಷ ಮಾತ್ರ ಭರ್ಜರಿ ಫಲಿತಾಂಶ ಪಡೆದು ಸತತವಾಗಿ ಅಧಿಕಾರಿ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುತ್ತವೆಯೇ ಇಲ್ಲ ಮೈತ್ರಿಗೆ ಮುಂದಾಗುತ್ತವೆಯೇ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ: ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...