Homeಮುಖಪುಟಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿವೆ. 15 ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರಿ ಬೃಹತ್ ವಿರೋಧ ಪಕ್ಷಗಳ ಒಕ್ಕೂಟ ಕಟ್ಟುವ ಕುರಿತು ಚರ್ಚೆ ನಡೆಸಿವೆ. ಆದರೆ ಆ ಮಹತ್ವದ ಸಭೆಗೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯವತಿಯವರನ್ನು ಆಹ್ವಾನಿಸಿರಲಿಲ್ಲ. 80 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಬಹುದೊಡ್ಡ ನಾಯಕಿಯಾಗಿದ್ದ, ನಾಲ್ಕು ಬಾರಿ ರಾಜ್ಯದ ಸಿಎಂ ಆಗಿದ್ದ ಮಾಯವತಿಯವರು ತಮ್ಮ ಹಿಂದಿನ ಗತವೈಭವಕ್ಕೆ ತೆರಳುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಬೂತ್ ಮಟ್ಟದಿಂದ ಚುನಾವಣಾ ತಯಾರಿ ಶುರು ಮಾಡಿರುವ ಅವರು ಸ್ವತಂತ್ರವಾಗಿ ಬಿಎಸ್‌ಪಿ ಲೋಕಸಭಾ ಚುನಾವಣೆ ಎದುರಿಸುತ್ತದೆ ಎಂದು ಘೋಷಿಸಿದ್ದರೂ ಸಹ ಕಡೆ ಕ್ಷಣದಲ್ಲಿ ಕಾಂಗ್ರೆಸ್ ಜೊತೆಗೂಡಿ ಚುನಾವಣೆ ಎದುರಿಸಲು ಯೋಚಿಸುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಅಂಕಣ ಪ್ರಕಟಿಸಿದೆ.

2004ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಿಎಸ್‌ಪಿ ಪಕ್ಷವು 80ರಲ್ಲಿ 19 ಸ್ಥಾನಗಳಲ್ಲಿ ಜಯ ಗಳಿಸಿತ್ತು. 2009ರಲ್ಲಿ ತೃತೀಯ ರಂಗದೊಂದಿಗೆ ಮೈತ್ರಿ ಮಾಡಿಕೊಂಡು 20 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ 2014ರಲ್ಲಿ ಬಿಎಸ್‌ಪಿ ಒಂದೂ ಸ್ಥಾನ ಗೆಲ್ಲದೆ ಧೂಳಿಪಟವಾಗಿತ್ತು. 2019ರಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಮಾಡಿಕೊಂಡು ಸಮಾಜವಾದಿ ಪಕ್ಷದ ಜೊತೆಗೂಡಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ.

ವಿಧಾನಸಭಾ ಚುನಾವಣೆಗಳಿಗೆ ಬಂದರೆ 2002ರಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ 98ರಲ್ಲಿ ಬಿಎಸ್‌ಪಿ ಜಯ ಗಳಿಸಿತ್ತು. 2007ರಲ್ಲಿ 206 ಸ್ಥಾನಗಳಲ್ಲಿ ಗೆದ್ದು ಸ್ವತಂತ್ರವಾಗಿ ಅಧಿಕಾರ ಹಿಡಿದಿತ್ತು. 2012ರಲ್ಲಿ 80 ಸ್ಥಾನಗಳಿಗೆ ಕುಸಿದ ಬಿಎಸ್‌ಪಿಯು 2017ರಲ್ಲಿ ಕೇವಲ 19 ಸ್ಥಾನಗಳಿಗೆ ಸೀಮತಗೊಂಡಿತ್ತು. 2022ರಲ್ಲಿ ಇನ್ನೂ ಕುಸಿದು ಕೇವಲ 1 ಸ್ಥಾನವನ್ನಷ್ಟೇ ಪಡೆದಿದೆ.

ತಮ್ಮ ಭಾಷಣಗಳಲ್ಲಿ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ಅನುಸರಿಸುವಂತೆ ನಮ್ಮ ನಾಯಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ. ಪಾಟ್ನಾ ಸಭೆಗೆ ಕೆಲವು ದಿನಗಳ ಮೊದಲು ಯುಪಿ ನಾಯಕರೊಂದಿಗಿನ ಸಭೆಯ ನಂತರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ, ಮಾಯಾವತಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ವಿರುದ್ಧ ವಾಗ್ದಾಳಿ ನಡೆಸಿದ್ದರು, ಆದರೆ ಕಾಂಗ್ರೆಸ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. “ಕಾಂಗ್ರೆಸ್ ವಿರುದ್ಧ ಬಲವಾದ ಪದಗಳಿಂದ ದಾಳಿ ಮಾಡಬೇಡಿ ಎಂದು ನಾಯಕರಿಗೆ ಅನೌಪಚಾರಿಕವಾಗಿ ತಿಳಿಸಲಾಗಿದೆ. ಭವಿಷ್ಯಕ್ಕಾಗಿ ಪಕ್ಷವು ಮೈತ್ರಿಯ ಆಯ್ಕೆಯನ್ನು ಮುಕ್ತವಾಗಿರಿಸಿಕೊಂಡಿದೆ ಎಂದು ಬಿಎಸ್ಪಿ ನಾಯಕರೊಬ್ಬರು ಹೇಳಿದರು.

ಬಿಎಸ್‌ಪಿ ಸಂಸದರೊಬ್ಬರು, “ಬಿಎಸ್‌ಪಿ ಕಾಂಗ್ರೆಸ್‌ಗೆ ಮೃದು ಧೋರಣೆ ತೋರುತ್ತಿದೆ. ಮತ್ತು ಈ ಆಯ್ಕೆಯನ್ನು ಸಹ ಅನ್ವೇಷಿಸಬೇಕು. 2024 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಮೈತ್ರಿ ಆಯ್ಕೆ ಎಂದು ಪರಿಗಣಿಸಬಹುದು” ಎಂದಿದ್ದಾರೆ.

ಆದರೆ ಮಾಯಾವತಿಯವರು ಈ ಬಗ್ಗೆ ಎನನ್ನೂ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಅವರು ವಿರೋಧ ಪಕ್ಷಗಳ ಐಕ್ಯತೆಯ ಪಾಟ್ನಾ ಸಭೆಯಿಂದ ದೂರ ಉಳಿದಿದ್ದಲ್ಲದೆ, ಮನಸ್ಸು ಒಂದಾಗದೇ ಕೇವಲ ಕೈಕುಲುಕಿದರೆ ಲಾಭವಿಲ್ಲ ಎಂದು ಟೀಕಿಸಿದ್ದರು. ಜೂನ್ 15 ರಂದು ಅವರು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಯಾವ ಮೈತ್ರಿಗಳು ಸಹ ನಿರೀಕ್ಷಿತ ಫಲಿತಾಂಶ ಪಡೆದಿಲ್ಲ. ಏಕೈಕ ಬಿಜೆಪಿ ಪಕ್ಷ ಮಾತ್ರ ಭರ್ಜರಿ ಫಲಿತಾಂಶ ಪಡೆದು ಸತತವಾಗಿ ಅಧಿಕಾರಿ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುತ್ತವೆಯೇ ಇಲ್ಲ ಮೈತ್ರಿಗೆ ಮುಂದಾಗುತ್ತವೆಯೇ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ: ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...