Homeಮುಖಪುಟಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿವೆ. 15 ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರಿ ಬೃಹತ್ ವಿರೋಧ ಪಕ್ಷಗಳ ಒಕ್ಕೂಟ ಕಟ್ಟುವ ಕುರಿತು ಚರ್ಚೆ ನಡೆಸಿವೆ. ಆದರೆ ಆ ಮಹತ್ವದ ಸಭೆಗೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯವತಿಯವರನ್ನು ಆಹ್ವಾನಿಸಿರಲಿಲ್ಲ. 80 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಬಹುದೊಡ್ಡ ನಾಯಕಿಯಾಗಿದ್ದ, ನಾಲ್ಕು ಬಾರಿ ರಾಜ್ಯದ ಸಿಎಂ ಆಗಿದ್ದ ಮಾಯವತಿಯವರು ತಮ್ಮ ಹಿಂದಿನ ಗತವೈಭವಕ್ಕೆ ತೆರಳುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಬೂತ್ ಮಟ್ಟದಿಂದ ಚುನಾವಣಾ ತಯಾರಿ ಶುರು ಮಾಡಿರುವ ಅವರು ಸ್ವತಂತ್ರವಾಗಿ ಬಿಎಸ್‌ಪಿ ಲೋಕಸಭಾ ಚುನಾವಣೆ ಎದುರಿಸುತ್ತದೆ ಎಂದು ಘೋಷಿಸಿದ್ದರೂ ಸಹ ಕಡೆ ಕ್ಷಣದಲ್ಲಿ ಕಾಂಗ್ರೆಸ್ ಜೊತೆಗೂಡಿ ಚುನಾವಣೆ ಎದುರಿಸಲು ಯೋಚಿಸುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಅಂಕಣ ಪ್ರಕಟಿಸಿದೆ.

2004ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಿಎಸ್‌ಪಿ ಪಕ್ಷವು 80ರಲ್ಲಿ 19 ಸ್ಥಾನಗಳಲ್ಲಿ ಜಯ ಗಳಿಸಿತ್ತು. 2009ರಲ್ಲಿ ತೃತೀಯ ರಂಗದೊಂದಿಗೆ ಮೈತ್ರಿ ಮಾಡಿಕೊಂಡು 20 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ 2014ರಲ್ಲಿ ಬಿಎಸ್‌ಪಿ ಒಂದೂ ಸ್ಥಾನ ಗೆಲ್ಲದೆ ಧೂಳಿಪಟವಾಗಿತ್ತು. 2019ರಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಮಾಡಿಕೊಂಡು ಸಮಾಜವಾದಿ ಪಕ್ಷದ ಜೊತೆಗೂಡಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ.

ವಿಧಾನಸಭಾ ಚುನಾವಣೆಗಳಿಗೆ ಬಂದರೆ 2002ರಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ 98ರಲ್ಲಿ ಬಿಎಸ್‌ಪಿ ಜಯ ಗಳಿಸಿತ್ತು. 2007ರಲ್ಲಿ 206 ಸ್ಥಾನಗಳಲ್ಲಿ ಗೆದ್ದು ಸ್ವತಂತ್ರವಾಗಿ ಅಧಿಕಾರ ಹಿಡಿದಿತ್ತು. 2012ರಲ್ಲಿ 80 ಸ್ಥಾನಗಳಿಗೆ ಕುಸಿದ ಬಿಎಸ್‌ಪಿಯು 2017ರಲ್ಲಿ ಕೇವಲ 19 ಸ್ಥಾನಗಳಿಗೆ ಸೀಮತಗೊಂಡಿತ್ತು. 2022ರಲ್ಲಿ ಇನ್ನೂ ಕುಸಿದು ಕೇವಲ 1 ಸ್ಥಾನವನ್ನಷ್ಟೇ ಪಡೆದಿದೆ.

ತಮ್ಮ ಭಾಷಣಗಳಲ್ಲಿ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ಅನುಸರಿಸುವಂತೆ ನಮ್ಮ ನಾಯಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ. ಪಾಟ್ನಾ ಸಭೆಗೆ ಕೆಲವು ದಿನಗಳ ಮೊದಲು ಯುಪಿ ನಾಯಕರೊಂದಿಗಿನ ಸಭೆಯ ನಂತರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ, ಮಾಯಾವತಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ವಿರುದ್ಧ ವಾಗ್ದಾಳಿ ನಡೆಸಿದ್ದರು, ಆದರೆ ಕಾಂಗ್ರೆಸ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. “ಕಾಂಗ್ರೆಸ್ ವಿರುದ್ಧ ಬಲವಾದ ಪದಗಳಿಂದ ದಾಳಿ ಮಾಡಬೇಡಿ ಎಂದು ನಾಯಕರಿಗೆ ಅನೌಪಚಾರಿಕವಾಗಿ ತಿಳಿಸಲಾಗಿದೆ. ಭವಿಷ್ಯಕ್ಕಾಗಿ ಪಕ್ಷವು ಮೈತ್ರಿಯ ಆಯ್ಕೆಯನ್ನು ಮುಕ್ತವಾಗಿರಿಸಿಕೊಂಡಿದೆ ಎಂದು ಬಿಎಸ್ಪಿ ನಾಯಕರೊಬ್ಬರು ಹೇಳಿದರು.

ಬಿಎಸ್‌ಪಿ ಸಂಸದರೊಬ್ಬರು, “ಬಿಎಸ್‌ಪಿ ಕಾಂಗ್ರೆಸ್‌ಗೆ ಮೃದು ಧೋರಣೆ ತೋರುತ್ತಿದೆ. ಮತ್ತು ಈ ಆಯ್ಕೆಯನ್ನು ಸಹ ಅನ್ವೇಷಿಸಬೇಕು. 2024 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಮೈತ್ರಿ ಆಯ್ಕೆ ಎಂದು ಪರಿಗಣಿಸಬಹುದು” ಎಂದಿದ್ದಾರೆ.

ಆದರೆ ಮಾಯಾವತಿಯವರು ಈ ಬಗ್ಗೆ ಎನನ್ನೂ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಅವರು ವಿರೋಧ ಪಕ್ಷಗಳ ಐಕ್ಯತೆಯ ಪಾಟ್ನಾ ಸಭೆಯಿಂದ ದೂರ ಉಳಿದಿದ್ದಲ್ಲದೆ, ಮನಸ್ಸು ಒಂದಾಗದೇ ಕೇವಲ ಕೈಕುಲುಕಿದರೆ ಲಾಭವಿಲ್ಲ ಎಂದು ಟೀಕಿಸಿದ್ದರು. ಜೂನ್ 15 ರಂದು ಅವರು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಯಾವ ಮೈತ್ರಿಗಳು ಸಹ ನಿರೀಕ್ಷಿತ ಫಲಿತಾಂಶ ಪಡೆದಿಲ್ಲ. ಏಕೈಕ ಬಿಜೆಪಿ ಪಕ್ಷ ಮಾತ್ರ ಭರ್ಜರಿ ಫಲಿತಾಂಶ ಪಡೆದು ಸತತವಾಗಿ ಅಧಿಕಾರಿ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುತ್ತವೆಯೇ ಇಲ್ಲ ಮೈತ್ರಿಗೆ ಮುಂದಾಗುತ್ತವೆಯೇ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ: ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...